ಅಧಿವೇಶನ | ಪಿಎಸ್‌ಐ ನೇರ ನೇಮಕಾತಿ, ಮುಂಬಡ್ತಿಗೆ ಶೇ.70:30 ಅನುಪಾತ ನಿಗದಿ: ಸಚಿವ ಪರಮೇಶ್ವರ್

Date:

ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪಿಎಸ್‌ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇ.70:30 ಅನುಪಾತವನ್ನು ನಿಗದಿಪಡಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.‌

ವಿಧಾನ ಪರಿಷತ್‌ ಕಲಾಪದಲ್ಲಿ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿ, “ಈ ಅನುಪಾತ ನಿಗದಿಯು ಇಲಾಖೆಯ ಕಾರ್ಯನಿರ್ವಹಣೆ ಮತ್ತು ಆಡಳಿತಕ್ಕೆ ಪೂರಕವಾಗಿರುತ್ತದೆ. ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯಲ್ಲಿ ಪಿ.ಎಸ್.ಐ (ಸಿವಿಲ್) ಹುದ್ದೆಯು ಪ್ರಮುಖ ಹುದ್ದೆಯಾಗಿದ್ದು, ಸಂಬಂಧಪಟ್ಟ ಠಾಣಾ ವ್ಯಾಪ್ತಿಯ ಸಂಪೂರ್ಣ ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆ, ಅಪರಾಧ ತಡೆಗಟ್ಟುವಿಕೆ, ಅಪರಾಧ ಪ್ರಕರಣಗಳ ಪತ್ತೆ ಮತ್ತು ತನಿಖೆ, ಸಂಚಾರ ನಿರ್ವಹಣೆಯು ಇವರ ಮುಖ್ಯ ಕರ್ತವ್ಯವಾಗಿರುತ್ತದೆ” ಎಂದರು.

“ಈ ಕರ್ತವ್ಯಗಳನ್ನು ನಿರ್ವಹಿಸಲು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾದ ಹಾಗೂ ತಾಂತ್ರಿಕ ನೈಪುಣ್ಯತೆಯುಳ್ಳ ಯುವ ಅಧಿಕಾರಿಗಳ ಅವಶ್ಯಕತೆ ಇರುತ್ತದೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಅಪರಾಧ. ಪ್ರಕರಣಗಳು ಹೆಚ್ಚಿನ ತಾಂತ್ರಿಕತೆಯಿಂದ ಕೂಡಿದ್ದು, ಇಂತಹ ಪ್ರಕರಣಗಳ ಪತ್ತೆಗೆ ಹೆಚ್ಚಿನ ತಾಂತ್ರಿಕ ವಿದ್ಯಾರ್ಹತೆಯುಳ್ಳ ಯುವಕರ ಅವಶ್ಯಕತೆ ಇರುತ್ತದೆ.
ಸಾಮಾನ್ಯವಾಗಿ ಪೊಲೀಸ್ ಕಾನ್ಸ್-ಟೇಬಲ್‌ ವೃಂದದ ಸಿಬ್ಬಂದಿಗಳು ಕ್ರಮವಾಗಿ ಹೆಡ್ ಕಾನ್ಸ್‌ಟೇಬಲ್ ಮತ್ತು ಎಎಸ್‌ಐ ಹುದ್ದೆಗಳಿಗೆ 02 ಮುಂಬಡ್ತಿಯನ್ನು ಹೊಂದಿ ನಂತರ ಪಿ.ಎಸ್.ಐ(ಸಿವಿಲ್) ಹುದ್ದೆಗೆ ಅರ್ಹರಾಗುತ್ತಾರೆ. ಇವರ ಶಿಕ್ಷಣವು ಮೂಲ ಹುದ್ದೆಯ ಕನಿಷ್ಕ ಮಟ್ಟದ್ದಾಗಿರುವುದರಿಂದ ಪ್ರಸ್ತುತ ವರದಿಯಾಗುತ್ತಿರುವ ಹೆಚ್ಚಿನ ತಾಂತ್ರಿಕತೆ ಅಪರಾಧ ಪ್ರಕರಣ ಭೇದಿಸುವುದು ಕಷ್ಟಸಾಧ್ಯವಾಗಿರುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲಮಿತಿಯೊಳಗೆ ಮುಂಬಡ್ತಿ

“ಬೆಂಗಳೂರು ನಗರ ಪೊಲೀಸ್ ಆಯುಕ್ತಾಲಯದ ಘಟಕದಲ್ಲಿ (ಸಂಚಾರಿ ವಿಭಾಗಗಳನ್ನು ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಎಎಸ್‌ಐ ರವರುಗಳಿಗೆ ಪ್ರಸ್ತುತ ಸುಮಾರು 29 ವರ್ಷಗಳು ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಹಾಗೂ ಎಎಸ್ ಐ ಹುದ್ದೆಯಲ್ಲಿ 5 ವರ್ಷ 10 ತಿಂಗಳು ಸೇವೆಯನ್ನು ಪೂರೈಸಿರುವ ಕಾಲಮಿತಿಯೊಳಗೆ ಮುಂಬಡ್ತಿ ನೀಡಲಾಗಿದೆ” ಎಂದು ಗೃಹ ಸಚಿವರು ಮಾಹಿತಿ ನೀಡಿದರು.

15 ದಿವಸಗಳ ವೇತನ ಹೆಚ್ಚಳಕ್ಕೆ ಪರಿಷ್ಕರಣೆ: ಡಾ.ಜಿ.ಪರಮೇಶ್ವರ್

“ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ” ಎಂದು ತಿಳಿಸಿದರು.

“ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ಸಿಬ್ಬಂದಿಗಳಿಗೆ ಅವರು ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ 30 ದಿನಗಳ ಹೆಚ್ಚುವರಿ ವೇತನವನ್ನು ಪಾವತಿಸಲು
ಅವಕಾಶವಿರುತ್ತದೆ. ಪೊಲೀಸ್ ಇಲಾಖೆಯ ಸಿಬ್ಬಂದಿಗಳಿಗೆ ಲಭ್ಯವಿರುವ ಪತ್ರಾಂಕಿತ ರಜಾ ವೇತನದ ಸೌಲಭ್ಯವೂ ಸೇರಿದಂತೆ ಸರ್ಕಾರಿ ನೌಕರರ ವಿಶೇಷ ಭತ್ಯೆಯ ಪರಿಷ್ಕರಣೆಯು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿರುತ್ತದೆ” ಎಂದು ಗೃಹ ಸಚಿವರು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...