ಮುಂಗಾರು ಪೂರ್ವ ಮಳೆ; ರಾಜ್ಯದಲ್ಲಿ 71 ಮಂದಿ ಸಾವು

Date:

ಏಪ್ರಿಲ್‌ನಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಸುರಿದಿದ್ದು, 71 ಮಂದಿ ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿ ಶನಿವಾರ ತಿಳಿಸಿದೆ. 2025ರ ಮುಂಗಾರು ಪೂರ್ವ ಮಳೆಯು ಕಳೆದ 125 ವರ್ಷಗಳಲ್ಲಿ ಮುಂಗಾರು ಪೂರ್ವ ಋತುಗಳಲ್ಲಿ ಮತ್ತು ಮೇ ತಿಂಗಳಲ್ಲಿ ದಾಖಲಾದ ಅತಿ ಹೆಚ್ಚು ಮಳೆಯಾಗಿದೆ ಎಂದೂ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಸಾಮಾನ್ಯವಾಗಿ ಮೇ ತಿಂಗಳಲ್ಲಿ 74 ಮಿ.ಮೀ ಮಳೆಯಾಗುತ್ತದೆ. ಆದರೆ 2025ರ ಮೇ ತಿಂಗಳಲ್ಲಿ 219 ಮಿ.ಮೀ ಮಳೆಯಾಗಿದೆ. ಇದು ಸರಾಸರಿ ಸಾಮಾನ್ಯ ಮಳೆಗಿಂತ ಶೇಕಡ 197ರಷ್ಟು ಹೆಚ್ಚಾಗಿದೆ. ಹಾಗೆಯೇ 2025ರ ಮುಂಗಾರು ಪೂರ್ವ ಅವಧಿಯಲ್ಲಿ (ಮಾರ್ಚ್ 1ರಿಂದ ಮೇ 31ರವರೆಗೆ) ರಾಜ್ಯದಲ್ಲಿ ಸಾಮಾನ್ಯವಾಗಿ 115 ಮಿ.ಮೀ ಮಳೆಯಾಗುತ್ತದೆ. ಆದರೆ 286 ಮಿ.ಮೀ ಮಳೆಯಾಗಿದೆ. ಸರಾಸರಿ ಮಳೆಗಿಂತ ಶೇಕಡ 149ರಷ್ಟು ಹೆಚ್ಚು ಮಳೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಕೇರಳ ಕರಾವಳಿಗೆ ಮುಂಗಾರು ಪ್ರವೇಶ; ಮೂರು ದಿನ ಮುನ್ನವೇ ಮಳೆಗಾಲ ಆರಂಭ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮತ್ತು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಿದೆ. ಗುಡುಗು, ಬಿರುಗಾಳಿ ಸಹಿತ ಮಳೆಯಾಗಿದೆ. ಏಪ್ರಿಲ್ 1ರಿಂದ ಮೇ 31ರವರೆಗಿನ ಅವಧಿಯಲ್ಲಿ ಸಿಡಿಲಿನಿಂದ 48 ಮಂದಿ ಸಾವನ್ನಪ್ಪಿದ್ದಾರೆ. ಮರಗಳು ಬಿದ್ದು ಒಂಬತ್ತು ಮಂದಿ, ಮನೆ ಕುಸಿದು ಐವರು, ನೀರಿನಲ್ಲಿ ಮುಳುಗಿ ನಾಲ್ವರು, ಭೂಕುಸಿತದಿಂದ ನಾಲ್ವರು ಮತ್ತು ವಿದ್ಯುತ್ ಆಘಾತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಒಟ್ಟು 71 ಮಂದಿ ಸಾವನ್ನಪ್ಪಿದ್ದು ಮೃತರ ಕುಟುಂಬಸ್ಥರಿಗೆ ಐದು ಲಕ್ಷ ರೂಪಾಯಿ ಪರಿಹಾರ ವಿತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

702 ಪ್ರಾಣಿಗಳು ಮೃತಪಟ್ಟಿದ್ದು, ಈ ಪೈಕಿ 698 ಪ್ರಾಣಿಗಳ ಸಾವಿಗೆ ನಷ್ಟ ಪರಿಹಾರ ವಿತರಿಸಲಾಗಿದೆ. 2,068 ಮನೆಗಳಿಗೆ ಹಾನಿಯಾಗಿವೆ. ಈ ಪೈಕಿ 1,926 ಮನೆ ಹಾನಿಗೆ ಈಗಾಗಲೇ ಪರಿಹಾರ ವಿತರಿಸಲಾಗಿದೆ. ಈ ಪೈಕಿ 75 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1993 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಸಿಎಂ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.

ಒಟ್ಟು 15,378.32 ಹೆಕ್ಟೇರ್ ಬೆಳೆಗಳು ಹಾನಿಗೊಳಗಾಗಿವೆ. ಈ ಪೈಕಿ 11915.66 ಹೆಕ್ಟೇರ್ ಕೃಷಿ ಬೆಳೆಗಳು, 3462.66 ಹೆಕ್ಟೇರ್ ತೋಟಗಾರಿಕೆಯಾಗಿದೆ. ಬೆಳೆ ಹಾನಿಯ ವಿವರಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದ್ದು, ಪರಿಹಾರ ಪಾವತಿ ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವರ್ಷ ನಿರೀಕ್ಷೆಗೂ ಮುನ್ನವೇ ಮುಂಗಾರು ಕೇರಳ ಕರಾವಳಿಯನ್ನು ಪ್ರವೇಶಿಸಿದೆ. ಈ ಹಿಂದೆ ಮೇ 27ರ ವೇಳೆಗೆ ಕೇರಳದಲ್ಲಿ ಮುಂಗಾರು ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹೇಳಿತ್ತು. ಆದರೆ ಇದೀಗ ನಿರೀಕ್ಷೆಗೂ ಮೂರು ದಿನ ಮುನ್ನವೇ ಮಾನ್ಸೂನ್ ಆರಂಭವಾಗಿದೆ. ಕರ್ನಾಟಕದಲ್ಲೂ ಮುಂಗಾರು ಆರ್ಭಟಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...