ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

  • ‘ಬಿ ಎ ಮೊಯ್ದೀನ್ ಅಪ್ಪಟ ಜಾತ್ಯತೀತ ಮೌಲ್ಯಗಳುಳ್ಳ ಆದರ್ಶ ವ್ಯಕ್ತಿತ್ವ ಹೊಂದಿದ್ದರು’
  • ‘ಸಂವಿಧಾನದ ಮೌಲ್ಯಗಳನ್ನು ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್’

ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ ನಡುವೆ ಸಮನ್ವಯ, ಸೌಹಾರ್ದ ಇಲ್ಲದೇ ಹೋದರೆ ಆ ದೇಶದಲ್ಲಿ, ಆ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯವಿಲ್ಲ. ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹೆಚ್ ಬಿ ಆರ್ ಲೇಔಟ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾರೀಸ್ ಸೌಹಾರ್ದ ಭವನ ಉದ್ಘಾಟಿಸಿ ಮಾತನಾಡಿದ ಅವರು, ಬಿ ಎ ಮೊಯ್ದೀನ್ ಅವರು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪರಸ್ಪರ ಅಪನಂಬಿಕೆ ಮತ್ತು ದ್ವೇಷವನ್ನು ಬಿತ್ತುವವರು ಈ ದೇಶದ ಅವನತಿಗೆ ಕಾರಣ ಆಗುತ್ತಾರೆ. ನಮ್ಮ ಸಂವಿಧಾನ ಜಾತ್ಯತೀತತೆಯನ್ನು, ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಭಾರತದಲ್ಲಿ ಜಾತ್ಯತೀತ ಮೌಲ್ಯವನ್ನು ಮತ್ತು ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್” ಎಂದು ವಿವರಿಸಿದರು.

“ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ” ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ಸೇರಿ ಫಾರೂಕ್‌ಗೆ ಜೆಡಿಎಸ್ ಕಡೆ ಹೋಗಬೇಡ, ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಹೋಗು ಎಂದು ಎಷ್ಟು ಹೇಳಿದರೂ ಕೇಳಲಿಲ್ಲ. ಈಗ ಏನಾಗಿದೆ ನೋಡಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಷ್ಟು ಮದ್ಯದಂಗಡಿಗಳ ಸಿದ್ದು ಕ್ರಮ ಸಮಾಜಘಾತಕ- ಕೈಬಿಡುತ್ತೇವೆಂದು ಆರನೆಯ ‘ಗ್ಯಾರಂಟಿ’ ನೀಡಲಿ

ಕಾನೂನು ಕೈಗೆತ್ತಿಕೊಂಡರೆ ಕ್ರಮ

“ನಮ್ಮ ಆಡಳಿತದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಎಷ್ಟೇ ರಾಜಕೀಯ ಶಕ್ತಿ ಹೊಂದಿದ್ದರೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಖಚಿತ. ಎಲ್ಲಾ ಜಾತಿ, ಧರ್ಮದವರಿಗೂ ಅವರ ಸಂವಿಧಾನಬದ್ದ ಹಕ್ಕುಗಳನ್ನು ಆಚರಿಸಲು ಅವಕಾಶವಿದೆ. ಇದಕ್ಕೆ ಯಾರೇ ತೊಂದರೆ ಕೊಟ್ಟರೂ ಕ್ರಮ ಖಚಿತ” ಎಂದು ಎಚ್ಚರಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಬ್ಯಾರೀಸ್ ಸೌಹಾರ್ದ ಭವನ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...