ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಪಾಕಿಸ್ತಾನ ಧ್ವಜ; ‘ನಮ್ಮ ಮೋದಿ’ ಫೇಸ್‌ಬುಕ್‌ ಪೇಜಿನಲ್ಲಿ ವಿಕೃತಿ

Date:

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲ ವಿಕೃತ ವ್ಯಕ್ತಿಗಳು ಕುಚೇಷ್ಟೆಗಳನ್ನು ಆರಂಭಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯಲ್ಲಿ ಅಂಟಿಸಿದ ಭಜರಂಗದಳದ ಕಾರ್ಯಕರ್ತರೆನ್ನಲಾದ ಕೆಲವು ಪುಂಡರನ್ನು ಪೊಲೀಸರು ಬಂಧಿಸಿದ್ದರು. ಈಗ ಫೇಸ್‌ಬುಕ್‌ನಲ್ಲಿ ಕುಚೇಷ್ಟೆಗಳು ಶುರುವಾಗಿವೆ.

”ನಮ್ಮ ಮೋದಿ” ಎಂಬ ಫೇಸ್‌ಬುಕ್‌ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಲಾಗಿದೆ. ಇದನ್ನು ಬಿಜೆಪಿಯ ಐಟಿ ಸೆಲ್ ಸೃಷ್ಟಿಸಿರುವ ಅನುಮಾನವಿದೆ ಎಂದು ಹೇಳಲಾಗುತ್ತಿದೆ.

ಒಂದು ರಾಜ್ಯದ ಮುಖ್ಯಮಂತ್ರಿಯ ಕೈಯಲ್ಲಿ ಪಾಕಿಸ್ತಾನದ ಬಾವುಟ ಕೊಟ್ಟು ನೃತ್ಯ ಮಾಡುವ ವಿಡಿಯೋ ಮಾಡುವುದು ಅದರಲ್ಲೂ ಕಾಶ್ಮೀರದಲ್ಲಿ ಭಯೋತ್ಪಾದನೆಯ ಕೃತ್ಯ ನಡೆದಿರುವ ಸಂದರ್ಭದಲ್ಲಿ ಇಂತಹ ವಿಕೃತಿ ತೋರಿರುವುದು ತೀವ್ರ ಖಂಡನೆಗೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2 ಲಕ್ಷ ಚಂದಾದಾರರು ಇರುವ ಈ ”ನಮ್ಮ ಮೋದಿ” ಪುಟದಲ್ಲಿ ಹಾಕಿರುವ ಈ ವಿಡಿಯೋವನ್ನು ಹಲವರು ಹಂಚಿಕೊಂಡು ಲೈಕ್ ಮಾಡಿದ್ದಾರೆ. ಇದಕ್ಕೆ ಬಂದಿರುವ ಕಮೆಂಟುಗಳಲ್ಲಿ ಹೆಚ್ಚಿನವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ನಡೆದ ಕೂಡಲೇ ಅತ್ಯಂತ ತ್ವರಿತಗತಿಯಲ್ಲಿ ಸ್ಪಂದಿಸಿ, ಅಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗೆ ಕೂಡಲೇ ಸಚಿವರೊಬ್ಬರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಳಿಸಿ ಸುರಕ್ಷಿತವಾಗಿ ಬೆಂಗಳೂರು ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದು ಎಲ್ಲಡೆ ಮೆಚ್ಚುಗೆಗೆ ಕಾರಣವಾಗಿತ್ತು.

ಇದೇ ಸಂದರ್ಭದಲ್ಲಿ ಈ ದುಷ್ಕೃತ್ಯಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಹೊಣೆ ಕಾರಣವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದೇ ರೀತಿ ಕೇಂದ್ರ ಸರ್ಕಾರ ಕೂಡ ವೈಫಲ್ಯವನ್ನು ಒಪ್ಪಿಕೊಂಡಿತ್ತು. ಹೀಗಿರುವಾಗ ಸಿದ್ದರಾಮಯ್ಯ ಅವರನ್ನು ಇಷ್ಟು ವಿಕೃತ ರೀತಿಯಲ್ಲಿ ಬಿಂಬಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ಇಲಾಖೆಗಳಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

SIddu pak flag
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...