ಎ ನಾರಾಯಣ, ಪ್ರೊ. ನಿರಂಜನಾರಾಧ್ಯ ಸೇರಿ 20 ಮಂದಿ ರಾಜ್ಯ ಯೋಜನಾ ಆಯೋಗದ ಸದಸ್ಯರಾಗಿ ನೇಮಕ

Date:

ರಾಜ್ಯ ಸರಕಾರವು ಶಿಕ್ಷಣ ತಜ್ಞ ಪ್ರೊ.ನಿರಂಜನಾರಾಧ್ಯ ವಿ.ಪಿ., ಉನ್ನತ ಶಿಕ್ಷಣ ತಜ್ಞ ಎ ನಾರಾಯಣ, ಕೃಷಿ ತಜ್ಞ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ, ಮಹಿಳಾ ಮತ್ತು ಮಕ್ಕಳ ಸಬಲೀಕರಣ ತಜ್ಞೆ ಮೈತ್ರೇಯಿ ಕೃಷ್ಣನ್ ಸೇರಿದಂತೆ 20 ಮಂದಿ ಅಧಿಕಾರೇತರ ಸದಸ್ಯರನ್ನು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗಕ್ಕೆ ನಾಮ ನಿರ್ದೇಶನ ಮಾಡಿದೆ.

ಶಿಕ್ಷಣ ತಜ್ಞ ಪ್ರೊ.ನಿರಂಜನಾರಾಧ್ಯ ವಿ.ಪಿ., ಉನ್ನತ ಶಿಕ್ಷಣ ತಜ್ಞ ಎ. ನಾರಾಯಣ, ಆರೋಗ್ಯ ತಜ್ಞೆ ಲತಾರಾವ್ ಶೇಷಾದ್ರಿ, ಕೃಷಿ ತಜ್ಞೆ ವಿ. ಗಾಯತ್ರಿ, ಕೃಷಿ ತಜ್ಞ ಡಾ. ಟಿ.ಎನ್. ಪ್ರಕಾಶ್ ಕಮ್ಮರಡಿ, ಮಹಿಳಾ ಮತ್ತು ಮಕ್ಕಳ ಸಬಲೀಕರಣ ತಜ್ಞೆ ಮೈತ್ರೇಯಿ ಕೃಷ್ಣನ್, ಮಹಿಳಾ ಮತ್ತು ಮಕ್ಕಳ ಸಬಲೀಕರಣ ತಜ್ಞೆ ಮಧುಭೂಷಣ್, ಪರಿಸರ ತಜ್ಞ ನಾಗೇಶ್ ಹೆಗಡೆ ಅಧಿಕಾರೇತರ ಸದಸ್ಯರಾಗಿ ನೇಮಕವಾಗಿದ್ದಾರೆ.

ಪರಿಸರ ತಜ್ಞರಾದ ಪ್ರತಾಪ್ ಹೆಗ್ಡೆ, ಡಾ. ಹರೀಶ್ ಹಂದೆ, ಭೂ ವಿಜ್ಞಾನಿಗಳಾದ ವಿ.ಎಸ್. ಪ್ರಕಾಶ್, ಡಾ. ಮಂಜುನಾಥ್ ಎಚ್., ಅರ್ಥಶಾಸ್ತ್ರಜ್ಞ ಪ್ರೊ. ನರೇಂದ್ರಪಾಣಿ,ಮಾನವ ಅಭಿವೃದ್ಧಿ ತಜ್ಞ ಡಾ. ಟಿ.ಆರ್. ಚಂದ್ರಶೇಖರಯ್ಯ, ಪ್ರಾದೇಶಿಕ ಅಸಮತೋಲನ ತಜ್ಞರಾದ ಡಾ. ರಝಾಕ್ ಉಸ್ತಾದ್ ಎಚ್., ಸಂಗೀತ ಎಮ್.ಕೆ., ಕಾನೂನು ತಜ್ಞ ಮುಕುಂದ ಬೆಳಗಲಿ, ಅರ್ಥಶಾಸ್ತ್ರಜ್ಞ ಡಾ. ಬಿ.ಎಚ್. ನಾಗೂರ, ಸಂಶೋಧನಾ ತಜ್ಞ ಮೋಹನದಾಸ್ ಹೆಗಡೆ, ಸಮಾಜ ಸೇವಕ ಅಲಿಬಾಬಾ ಅಧಿಕಾರೇತರ ಸದಸ್ಯರಾಗಿ ನೇಮಕವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಧರ್ಮಸ್ಥಳ, ದಸರಾ, ಗಣೇಶ ಮತ್ತು ಅಶೋಕ್ ಮೋಚಿ

ಆಯೋಗಕ್ಕೆ ಅಧಿಕಾರಿ ಸದಸ್ಯರಾಗಿ ಸರಕಾರದ ಮುಖ್ಯ ಕಾರ್ಯದರ್ಶಿಗಳು, ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರು, ಆರ್ಥಿಕ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ನೇಮಕಗೊಂಡಿದ್ದು, ಸದಸ್ಯ ಕಾರ್ಯದರ್ಶಿಯಾಗಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು/ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿ ಕಾರ್ಯನಿರ್ವಹಿಸಲಿದ್ದಾರೆ.

ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ ‘ಅನುಬಂಧ-ಎ’ನಲ್ಲಿರುವ ಪಟ್ಟಿಯ ಅನ್ವಯ ಆಯೋಗದ ಅಧಿಕಾರೇತರ ಸದಸ್ಯರಿಗೆ ಪ್ರಯಾಣ ಭತ್ಯೆಯನ್ನು ನೀಡಲಾಗುವುದು.ಆಯೋಗದ ಸಭೆಗಳಿಗೆ ಹಾಜರಾಗುವ ಅಧಿಕಾರೇತರ ಸದಸ್ಯರಿಗೆ ದಿನವೊಂದಕ್ಕೆ ಮೂರು ಸಾವಿರ ರೂ. ಸಭಾ ಭತ್ಯೆಯನ್ನು ಮಂಜೂರು ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...