ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ | ಕೇಂಬ್ರಿಡ್ಜ್ ವಿವಿಯೊಂದಿಗೆ ಕರ್ನಾಟಕದ ಸಂಶೋಧನೆ & ಶೈಕ್ಷಣಿಕ ಸಹಯೋಗ

Date:

ಕರ್ನಾಟಕ ಸರ್ಕಾರವು ಜಾಗತಿಕ ಶೈಕ್ಷಣಿಕ ವಲಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ವಿಶ್ವದ ಅತ್ಯಂತ ಶ್ರೇಷ್ಠ ಮತ್ತು ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಇಂಗ್ಲೆಂಡ್‌ನ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದೊಂದಿಗೆ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜಿಸುವ ನಿಟ್ಟಿನಲ್ಲಿ ದೀರ್ಘಾವಧಿಯ ಶೈಕ್ಷಣಿಕ ಸಹಯೋಗವನ್ನು ಘೋಷಿಸಿದೆ.

ಈ ಸಹಯೋಗವು ಕರ್ನಾಟಕದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವುದರೊಂದಿಗೆ, ವಿದ್ಯಾರ್ಥಿ ಹಾಗೂ ಅಧ್ಯಾಪಕರಿಗೆ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ವಿನಿಮಯ, ಸಂಶೋಧನೆ ಹಾಗೂ ಆವಿಷ್ಕಾರಕ್ಕೆ ಅವಕಾಶಗಳನ್ನು ಒದಗಿಸುವುದೇ ಪ್ರಧಾನ ಉದ್ದೇಶವಾಗಿದೆ.

ಈ ಸಹಯೋಗವನ್ನು ಪ್ರೊ. ರಾಜೀವ್ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ನಿರ್ದೇಶಕ ಪ್ರೊ. ಟೊನ್ನಿ ಅವರು ಮುನ್ನಡೆಸಲಿದ್ದಾರೆ. ʼಸಂಶೋಧನಾ ಸಹಭಾಗಿತ್ವʼ, ʼಜ್ಞಾನ ವಿನಿಮಯʼ ಹಾಗೂ ʼವಿದ್ಯಾರ್ಥಿ ವಿನಿಮಯʼ ಕಾರ್ಯಕ್ರಮಗಳು ಸಹಯೋಗದ ಪ್ರಮುಖ ಕ್ಷೇತ್ರಗಳಾಗಿ ಕಾರ್ಯನಿರ್ವಹಿಸಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಈ ದಿನ ಸಂಪಾದಕೀಯ | ಮೋದಿಯವರ ತಾಯಿ ಮಾತ್ರ ಹೆಣ್ಣೇ! ಸೋನಿಯಾರನ್ನು ಅವಮಾನಿಸುವುದು ಸರಿಯೇ?

ಈ ಮಹತ್ವದ ಉಪಕ್ರಮವನ್ನು ಪರಿಕಲ್ಪನೆಗೊಳಿಸಿ ಮುನ್ನಡೆಸಲು ಪ್ರೊ. ಸುರೇಶ್ ರೇಣುಕಪ್ಪ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಉಳಿದಂತೆ ಸಚಿವ ಡಾ. ಎಂ ಸಿ ಸುಧಾಕರ್, ಸಚಿವ ಡಾ. ಶರಣಪ್ರಕಾಶ್ ಪಾಟೀಲ, ಶಾಸಕ ಡಾ. ಮಂಜುನಾಥ ಭಂಡಾರಿ, ಕುಲಪತಿ ಪ್ರೊ. ಜಯಕರ್‌, ಕುಲಪತಿ ಪ್ರೊ. ಭಗವಾನ್ ಸೇರಿದಂತೆ ಹಲವು ಗಣ್ಯರು ಬೆಂಬಲ ನೀಡಿದ್ದಾರೆ.

ಈ ಸಹಯೋಗವು ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ಅವಕಾಶಗಳನ್ನು, ಅಧ್ಯಾಪಕರಿಗೆ ಅಂತಾರಾಷ್ಟ್ರೀಯ ಸಂಶೋಧನಾ ವೇದಿಕೆಗಳನ್ನು ಮತ್ತು ಕರ್ನಾಟಕದ ಶೈಕ್ಷಣಿಕ ಸಂಸ್ಥೆಗಳಿಗೆ ಜಾಗತಿಕ ಪ್ರಾಮುಖ್ಯತೆಯನ್ನು ತಂದುಕೊಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...