ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

Date:

  • ‘ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳವಾಗಲಿ’
  • ಕೆಎಂಎಫ್ ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಲು ಮನವಿ

ಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ ದರ ಹೆಚ್ಚಳಕ್ಕೆ ಅನುಮತಿ‌ ನೀಡಬೇಕು ಎಂದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಶುಸಂಗೋಪನಾ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ.

”ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳಕ್ಕೆ ಅವಕಾಶ ನೀಡಬೇಕು. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್) ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ‌ ನೀಡಬೇಕು” ಎಂದು ಪ್ರಸ್ತಾವದಲ್ಲಿ ತಿಳಿಸಲಾಗಿದೆ.

ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಅವರು ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿ, “ಹಾಲಿನ ದರ ಏರಿಕೆ ಮಾಡುವಂತೆ ರೈತರು ಮತ್ತು ಹಾಲು ಒಕ್ಕೂಟಗಳಿಂದ ಒತ್ತಡವಿದೆ. ಆದರೆ, ಸದ್ಯಕ್ಕೆ ದರ ಹೆಚ್ಚಳ ಇಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಎಂಎಫ್ ನಂದಿನ ಹಾಲಿನ ದರವನ್ನು ಸೆಪ್ಟೆಂಬರ್ 1 ರಂದು ಪ್ರತಿ ಲೀಟರ್ ಗೆ ₹3ರಷ್ಟು ಹೆಚ್ಚಳ ಮಾಡಲಾಗಿದೆ. ಆದರೆ, ಅಮೂಲ್ 2022ರ ಮಾರ್ಚ್ ನಿಂದ 2023ರ ಫೆಬ್ರುವರಿಯವರೆಗೆ ಹತ್ತು ತಿಂಗಳ ಅವಧಿಯಲ್ಲಿ ಲೀಟರ್ ಗೆ 12 ಹೆಚ್ಚಳ‌ ಮಾಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿತೀಶ್ ಕುಮಾರ್ ಅಭದ್ರ ಭಾಷೆ ನಿಂದನೀಯ

“ಉತ್ಪಾದನಾ ವೆಚ್ಚ ಹೆಚ್ಚಳದಿಂದ ಆಗುತ್ತಿರುವ ಹೊರೆ ಕುರಿತು ಹಾಲು ಉತ್ಪಾದಕರ ಒಕ್ಕೂಟಗಳು ಸಭೆಯಲ್ಲಿ ಅಹವಾಲು ಸಲ್ಲಿಸಿವೆ. ನಂದಿನಿ ಹಾಲಿನ‌ ದರ ಪ್ರತಿ ಲೀಟರ್‌ಗೆ ₹47 ಇದೆ. ಇತರ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಾಗಿದೆ” ಎಂದು ತಿಳಿಸಿದರು.

“ಕ್ಷೀರ ಭಾಗ್ಯ ಯೋಜನೆಗೆ ಕೆಎಂಎಫ್ ಪೂರೈಸುತ್ತಿರುವ ಹಾಲಿನಪುಡಿಯ ದರವನ್ನು ಪ್ರತಿ ಕೆ.ಜಿ.ಗೆ ₹400+ ಸರಕು ಮತ್ತು ಸೇವಾ ತೆರಿಗೆ ಎಂಬುದಾಗಿ ನಿಗದಿಪಡಿಸಬೇಕು. ಈಗ ಪ್ರತಿ ಕೆ.ಜಿ. ಹಾಲಿನ ಪುಡಿಗೆ ₹300+ ತೆರಿಗೆ ನೀಡಲಾಗುತ್ತಿದೆ. ಇದರಿಂದ ಕೆಎಂಎಫ್ ಗೆ ನಷ್ಟವಾಗುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...