ವಿಜಯಪುರದ ರಸ್ತೆ ಸಮಸ್ಯೆಗೆ ಮಂಗಳೂರಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಯುವಕ!

Date:

  • ತನ್ನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಟವರ್ ಏರಿ ಯುವಕನ ಹೈಡ್ರಾಮಾ
  • ಮಂಗಳೂರು ಸಮೀಪದ ಮುಲ್ಕಿ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ಟವರ್ ಏರಿದ ಯುವಕ ಸತೀಶ್

ಆತನ ಊರು ವಿಜಯಪುರ. ರಸ್ತೆ ಸಮಸ್ಯೆ ಇರುವುದು ಕೂಡ ವಿಜಯಪುರದಲ್ಲಿ. ಆತ ಪ್ರತಿಭಟಿಸಿದ್ದು ಮೊಬೈಲ್ ಟವರ್ ಏರಿ. ವಿಚಿತ್ರ ಏನೆಂದರೆ ಟವರ್ ಏರಿರೋದು ವಿಜಯಪುರದಲ್ಲಿ ಅಲ್ಲ. ಮಂಗಳೂರಿನಲ್ಲಿ.

ಹೌದು. ಈ ಸುದ್ದಿ ವಿಚಿತ್ರವಾದರೂ ಸತ್ಯ. ಅ.1ರ ಭಾನುವಾರ ಬೆಳಗ್ಗೆ ಯುವಕನೋರ್ವ ಸುಮಾರು 250 ಅಡಿ ಎತ್ತರದ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ ಘಟನೆ ಮಂಗಳೂರಿನ ಮೂಲ್ಕಿ ಸಮೀಪದ ಕೊಳ್ನಾಡು ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಟವರ್ ಏರಿದವನನ್ನು ವಿಜಯಪುರ ಜಿಲ್ಲೆಯ ಜೇವರ್ಗಿ ಮೂಲದ ಯುವಕ ಸತೀಶ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Man Siting On top of the mobile towe

ಮೊಬೈಲ್ ಟವರ್‌ಗೆ ಏರಿದ ಕಾರಣ ಜನರಿಗೆ ಪುಕ್ಕಟೆ ಮನರಂಜನೆ ಮಾತ್ರವಲ್ಲದೆ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದಾನೆ. ಸುಮಾರು 250 ಮೀಟರ್‌ಗಿಂತಲೂ ಎತ್ತರದ ಮೊಬೈಲ್ ಟವರ್ ಏರಿದ ಯುವಕ ಟವರ್‌ನ ತುತ್ತ ತುದಿಗೆ ಹೋಗಿ ವಿವಿಧ ಚೇಷ್ಟೆಗಳನ್ನು ಮಾಡುತ್ತಾ ಕುಳಿತಿದ್ದ. ಇದನ್ನು ಗಮನಿಸಿದ ಕೂಡಲೇ ಸ್ಥಳೀಯರು ಮುಲ್ಕಿ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

ಮುಲ್ಕಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಮೈಕ್ ಮೂಲಕ ಆತನಿಗೆ ಸಮಾಧಾನ ಮಾಡಿ ಕೆಳಗೆ ಬರಲು ಪ್ರಯತ್ನಿಸುತ್ತಿದ್ದರೂ ಪ್ರಯತ್ನ ವ್ಯರ್ಥವಾಯಿತು. ಸುಮಾರು ನಾಲ್ಕು ತಾಸುಗಳ ಬಳಿಕ ಆತ ತಾನಾಗಿಯೇ ಇಳಿಯುತ್ತಲೇ ಆತಂಕ ದೂರವಾಯಿತು.

ಸುಮಾರು ನಾಲ್ಕು ತಾಸಿನ ಬಳಿಕ ಕೆಳಗಿಳಿದ ಆತ, “ನಮ್ಮ ಬಿಜಾಪುರ ಬಾಗಲಕೋಟೆಯಲ್ಲಿ ರಸ್ತೆ ಮತ್ತು ಇತರ ಸಮಸ್ಯೆಗಳು ಬಹಳಷ್ಟು ಇರುವುದರಿಂದ ನಾನು ಇಲ್ಲಿ ಈ ರೀತಿ ಪ್ರತಿಭಟನೆ ಮಾಡುತ್ತಿದ್ದೇನೆ” ಎಂದು ಹೇಳಿ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಸಹಿತ ಸಾರ್ವಜನಿಕರನ್ನು ಬೆಚ್ಚಿ ಬೀಳಿಸಿದ್ದಾನೆ.

tower man sathish

ಘಟನೆಯ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಮುಲ್ಕಿ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರು, “ಈತ ಮೂಲತಃ ವಿಜಯಪುರ ಜಿಲ್ಲೆಯವನಾಗಿದ್ದು, ಬೆಳಗಾಂ ಸಹಿತ ಅನೇಕ ನಾಲ್ಕು ಕಡೆಗಳಲ್ಲಿ ಇದೇ ರೀತಿ ಮೊಬೈಲ್ ಟವರ್ ಏರಿ ಆತಂಕ ಸೃಷ್ಟಿಸಿದ್ದ. ಕೆಳಗಿಳಿದ ಬಳಿಕ ಈ ಬಗ್ಗೆ ಆತನೇ ಹೇಳಿಕೊಂಡಿದ್ದಾನೆ. ಆತನ ಊರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಈ ಕೃತ್ಯ ಎಸಗಿದ್ದಾನೆ. ಆತನ ಬಲ್ಲವರು ಆತನ ಮಾನಸಿಕ ಸ್ಥಿಮಿತ ಸರಿ ಇಲ್ಲ ಎಂದು ತಿಳಿಸಿದ್ದಾರೆ. ಸದ್ಯ ಕುಟುಂಬದವರು ಸತೀಶ್‌ನನ್ನು ಕರೆದುಕೊಂಡು ಹೋಗಿದ್ದಾರೆ. ವಿಚಾರಿಸಿದಾಗ, ಈಗಾಗಲೇ ಆತನ ಮೇಲೆ ಕೆಲವೊಂದು ಪ್ರಕರಣಗಳು ದಾಖಲಾಗಿದೆ ಎಂದು ತಿಳಿದುಬಂದಿದೆ. ನಮ್ಮ ಠಾಣೆಯ ಅಧಿಕಾರಿಗಳು ಬುದ್ಧಿಮಾತು ಹೇಳಿ ಕಳುಹಿಸಿದ್ದಾರೆ. ನಾವು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

mulky

ಸತೀಶ್ ಮೊಬೈಲ್ ಟವರ್‌ಗೆ ಹತ್ತುವ ದೃಶ್ಯವು ಸ್ಥಳೀಯ ಕಂಪನಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ವೇಳೆ ಸ್ಥಳದಲ್ಲಿ ನೂರಾರು ಮಂದಿ ಊರಿನವರು ಜಮಾಯಿಸಿದ್ದರಿಂದ ಪಣಂಬೂರು ಎಸಿಪಿ ಮನೋಜ್ ಕುಮಾರ್ ಹಾಗೂ ಮುಲ್ಕಿ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

ಮೊಬೈಲ್ ಟವರ್‌ಗೆ ಯಾವುದೇ ತಡೆಬೇಲಿಗಳಿಲ್ಲದೆ ಇರುವುದನ್ನು ಗಮನಿಸಿಯೇ ಆತ ಹತ್ತಿದ್ದಾನೆ. ಹಾಗಾಗಿ, ಸಂಬಂಧಪಟ್ಟವರಿಗೆ ಈ ಬಗ್ಗೆ ಪೊಲೀಸರು ಕರೆದು ಮಾಹಿತಿ ನೀಡಬೇಕು ಎಂದು ಸ್ಥಳೀಯರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...