BREAKING | ಅಬ್ದುಲ್ ರೆಹಮಾನ್ ಕೊಲೆ ಪ್ರಕರಣ: 14 ಆರೋಪಿಗಳ ಮೇಲೆ ‘ಕೋಕಾ’ ಕಾಯ್ದೆ ದಾಖಲು

Date:

ಕಳೆದ ಮೇ 27ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಬೆಳವಣಿಗೆ ಸಂಭವಿಸಿದೆ. ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ (KCOCA-2000) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದುವರೆಗೆ ಬಂಧಿತರಾಗಿರುವ 13 ಆರೋಪಿಗಳು ಸೇರಿದಂತೆ ಒಟ್ಟು 14 ಮಂದಿ ಮೇಲೆ ಪೊಲೀಸರು ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA Act – ಕೋಕಾ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

ಮೇ 27ರಂದು ಆರೋಪಿಗಳು ಅಬ್ದುಲ್ ರಹ್ಮಾನ್ ಅವರನ್ನು ಹತ್ಯೆಗೈದು ಮತ್ತು ಅವರ ಸ್ನೇಹಿತ ಕಲಂದರ್ ಶಾಫಿ ಅವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ರಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳು ಕೇವಲ ಈ ಘಟನೆಗಷ್ಟೇ ಸೀಮಿತರಾಗಿಲ್ಲ. ಅವರು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಸಮಾಜದ ಶಾಂತಿ ಕದಡುವ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಪಾಲ್ಗೊಂಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ.

ಸಮಾಜದಲ್ಲಿ ಉದ್ದೇಶಪೂರ್ವಕವಾಗಿ ಕೋಮು ಸಂಘರ್ಷ ಮತ್ತು ಅಶಾಂತಿಯನ್ನು ಸೃಷ್ಟಿಸುತ್ತಿದ್ದ ಈ ಸಂಘಟಿತ ಅಪರಾಧಿಗಳ ವಿರುದ್ಧ ಈಗ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (KCOCA Act) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಕಾಯ್ದೆಯು ಸಂಘಟಿತ ಅಪರಾಧಗಳ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಒಳಗೊಂಡಿದೆ. ಪ್ರಕರಣದ ಮುಂದಿನ ತನಿಖೆಯನ್ನು ಕೋಕಾ ಕಾಯ್ದೆಯ ಅಡಿಯಲ್ಲಿ ನಡೆಸಲಾಗುವುದು ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಕೋಕಾ ಕಾಯ್ದೆ ಎಂದರೇನು?

ಕೋಕಾ ಕಾಯ್ದೆ ಎಂದರೆ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (KCOCA), ಇದು ಸಂಘಟಿತ ಅಪರಾಧಗಳು ಮತ್ತು ಭಯೋತ್ಪಾದನೆಯನ್ನು ತಡೆಯಲು ಜಾರಿಗೆ ತಂದ ಕಠಿಣ ಕಾನೂನು. ಈ ಕಾಯ್ದೆಯಡಿ, ಪದೇ ಪದೇ ಸಂಘಟಿತ ಅಪರಾಧಗಳಲ್ಲಿ ಭಾಗವಹಿಸುವ ಆರೋಪಿಗಳನ್ನು ಬಂಧಿಸಲಾಗುತ್ತದೆ ಮತ್ತು ಅವರಿಗೆ ಕನಿಷ್ಠ ಒಂದು ವರ್ಷದವರೆಗೆ ನಿರೀಕ್ಷಣಾ ಜಾಮೀನು ಸಿಗುವುದಿಲ್ಲ.

ಕೋಕಾ ಕಾಯ್ದೆಯ ಪ್ರಮುಖ ಅಂಶಗಳು:

ಸಂಘಟಿತ ಅಪರಾಧ ನಿಯಂತ್ರಣ: ಈ ಕಾಯ್ದೆಯು ಸಂಘಟಿತ ಅಪರಾಧಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ, ವಿಶೇಷವಾಗಿ ಭಯೋತ್ಪಾದಕ ಚಟುವಟಿಕೆಗಳು ಮತ್ತು ಭೂಗತ ಜಾಲಗಳ ವಿರುದ್ಧ.

ಜಾಮೀನು ರಹಿತ ಬಂಧನ: ಕೋಕಾ ಕಾಯ್ದೆಯಡಿ ದೋಷಾರೋಪಣೆ ಎದುರಿಸುವ ಆರೋಪಿಗೆ ನಿರೀಕ್ಷಣಾ ಜಾಮೀನು ಸಿಗುವುದು ಕಷ್ಟಕರ, ಮತ್ತು ಕನಿಷ್ಠ ಒಂದು ವರ್ಷದವರೆಗೆ ಜಾಮೀನು ಸಿಗುವುದಿಲ್ಲ.

ಕಠಿಣ ಶಿಕ್ಷೆಗಳು: ಸಂಘಟಿತ ಅಪರಾಧಗಳಲ್ಲಿ ಭಾಗವಹಿಸಿ, ಸಾವಿಗೆ ಕಾರಣರಾಗುವವರಿಗೆ ಗರಿಷ್ಠ ಗಲ್ಲು ಶಿಕ್ಷೆ ಅಥವಾ ಜೀವಾವಧಿ ಜೈಲು ಶಿಕ್ಷೆಯೊಂದಿಗೆ ದಂಡವನ್ನು ಸಹ ವಿಧಿಸಲಾಗುತ್ತದೆ.

ಆಸ್ತಿ ಮುಟ್ಟುಗೋಲು: ಈ ಕಾಯ್ದೆಯಡಿ ಆರೋಪಿಗಳ ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕುವ ಅವಕಾಶವಿದೆ.
ಕಾನೂನು ಜಾರಿ: ಪೊಲೀಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಈ ಕಾಯ್ದೆಯನ್ನು ಬಳಸಿಕೊಂಡು ಸಂಘಟಿತ ಅಪರಾಧಿಗಳ ವಿರುದ್ಧ ಬಲವಾದ ಕ್ರಮಗಳನ್ನು ಕೈಗೊಳ್ಳುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...