ಮನಮೋಹನ್ ಸಿಂಗ್ ಬಗ್ಗೆ ಸುಳ್ಳು ಹೇಳಿಕೆ: ಕ್ಷಮೆ ಕೇಳಿದ ನಟ ಪ್ರಕಾಶ್ ಬೆಳವಾಡಿ

Date:

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಗ್ಗೆ ಸುಳ್ಳು ಹೇಳಿಕೆಯನ್ನು ನೀಡಿದ್ದ ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್ ಬೆಳವಾಡಿ ಕ್ಷಮೆ ಕೇಳಿದ್ದಾರೆ.

“ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದೇ ಕಾನೂನುಬಾಹಿರ” ಎಂದು ಹೇಳಿಕೆ ನೀಡಿದ್ದ ಪ್ರಕಾಶ್ ಬೆಳವಾಡಿ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಹಾಗೂ ಕಾಂಗ್ರೆಸ್ ವಕ್ತಾರೆ ಲಾವಣ್ಯ ಬಳ್ಳಾಲ್ ಅವರು ಎಕ್ಸ್‌ ತಾಣದಲ್ಲಿ ಚಾಟಿ ಬೀಸಿದ್ದರು.

ಇದನ್ನು ಗಮನಿಸಿದ ಪ್ರಕಾಶ್ ಬೆಳವಾಡಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತರ‌ ಬ್ರಿಜೇಶ್‌ ಕಾಳಪ್ಪ ಅವರನ್ನು ಸಂಪರ್ಕಿಸಿ ಹರಿಪ್ರಸಾದ್‌ ಹಾಗೂ ಲಾವಣ್ಯ ಬಳ್ಳಾಲ್ ಜೈನ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಇದನ್ನು ಹರಿಪ್ರಸಾದ್‌ ಎಕ್ಸ್‌ ತಾಣದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹರಿಪ್ರಸಾದ್‌ ತಿಳಿಸಿದ್ದೇನು?

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬಗ್ಗೆ ಸುಳ್ಳು ಹೇಳಿಕೆಯನ್ನು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಕಾಶ್‌ ಬೆಳವಾಡಿ ತಾವು ಆಡಿರುವ ಮಾತುಗಳನ್ನು ಹಿಂದಕ್ಕೆ ಪಡೆದು,ಆಗಿರುವ ಪ್ರಮಾದದ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದನ್ನು ಸ್ವಾಗತಿಸುತ್ತೇನೆ.

ಸಾಮಾನ್ಯವಾಗಿ ವಾಟ್ಸಪ್ ಯುನಿವರ್ಸಿಟಿಯ ಬಿಜೆಪಿಯ ಮಬ್ಭಕ್ತರು ಮಾಡುವ ಟ್ರೋಲ್ ಗಳಿಗೆ ಗಮನ ಹರಿಸುವುದಿಲ್ಲ. ಆದರೆ ಪ್ರಕಾಶ್ ಬೆಳವಾಡಿ ಸಾಮಾಜಿಕ ಕಾರ್ಯಕರ್ತರಾಗಿ, ನಟರೂ ಆಗಿರುವವರು ಸಾರ್ವಜನಿಕವಾಗಿ ಸುಳ್ಳನ್ನು ಹರಡಿಸುವುದನ್ನ ನಿರೀಕ್ಷಿಸಿರಲಿಲ್ಲ.

ತಮ್ಮ ಅಪಾರ ಜ್ಞಾನ, ತಿಳುವಳಿಕೆ ಹಾಗೂ ಅಧ್ಯಯನದಿಂದ ದೇಶವನ್ನು ಮುನ್ನೆಡಸಿದ ಆರ್ಥಿಕ ತಜ್ಞರನ್ನು ಹೀಯಾಳಿಸುವುದು ತರವಲ್ಲ, ಅದಾಗ್ಯೋ ಭೂಮಿಯ ಮೇಲೆ ಜೀವಂತವಿಲ್ಲದ, ಉದಾತ್ತ “ಆತ್ಮ”ವನ್ನು ಆರೋಪಿಸುವುದು ಒಪ್ಪುವಂತದ್ದಲ್ಲ.

1991ರ ಅಸ್ಸಾಂ ನಿವಾಸಿ ಕಾನೂನು ಹಾಗೂ 2003ರ ಜನತಾ ಪ್ರಾತಿನಿಧ್ಯ ತಿದ್ದುಪಡಿ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಹೇಳಿಕೆ ನೀಡಿದ್ದೆ ಎಂದು ಬೆಳವಾಡಿಯವರನ್ನು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಮ್ಮ ಪಕ್ಷದ ರಾಷ್ಟ್ರೀಯ ಮಾಧ್ಯಮ ವಕ್ತರರಾದ ಬಿಜೇಶ್‌ ಕಾಳಪ್ಪ ಅವರನ್ನು ಸಂಪರ್ಕಿಸಿ ಅವರ ಮೂಲಕ ವಿಷಾದ ವ್ಯಕ್ತಪಡಿಸಿರುವ ಅವರ ವಿಶಾಲ ಹೃದಯವನ್ನು ನಾನು ಪ್ರಶಂಸಿಸುತ್ತೇನೆ. ನಿಜವಾಗಿಯೂ ಪ್ರಜಾಪ್ರಭುತ್ವವಾದಿಗಳು ಇರಬೇಕಾದ್ದೂ ಹೀಗಿಯೇ…! ಎಂದು ಹರಿಪ್ರಸಾದ್‌ ತಿಳಿಸಿದ್ದಾರೆ.

ಪ್ರಕಾಶ್ ಬೆಳವಾಡಿ ಕ್ಷಮೆ ಕೇಳಿದ ಬಗ್ಗೆ ಟ್ವೀಟ್ ಮಾಡಿರುವ ಲಾವಣ್ಯ ಬಳ್ಳಾಲ್, “ಪ್ರಕಾಶ್ ಬೆಳವಾಡಿ ಅವರು ಕ್ಷಮೆಯಾಚನೆ ಮಾಡಿದ್ದಕ್ಕೆ ಧನ್ಯವಾದಗಳು. ಪ್ರಸ್ತುತ ಈಗಿನ ಕಾಲದಲ್ಲಿ ಜನರು ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳುವುದಿಲ್ಲ. ಅದರ ಬದಲು ಆ ತಪ್ಪನ್ನೇ ಮುಂದುವರಿಸುತ್ತಾ ದ್ವಿಗುಣಗೊಳಿಸುತ್ತಾರೆ ಮತ್ತು ತಪ್ಪು ಮಾಹಿತಿಯನ್ನು ನೀಡುವುದನ್ನು ಮುಂದುವರಿಸುತ್ತಾರೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...