ಸೆ.27ರಂದು ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆಕೊಟ್ಟ AIDSO

Date:

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ವಿಷಯದಲ್ಲಿ ಸರ್ಕಾರ ವಿಳಂಬ ಮಾಡುತ್ತಿರುವ ಹಿನ್ನಲೆ, ಸಾವಿರಾರು ಪದವಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದರೂ, ಸರ್ಕಾರ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ನೀಡದಿರುವುದನ್ನು ಖಂಡಿಸಿ AIDSO ಕರ್ನಾಟಕ ರಾಜ್ಯ ಸಮಿತಿಯು ಸೆ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿದೆ.

ಕಳೆದ ಎರಡು ತಿಂಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ ಪಾಠ ಪ್ರವಚನಗಳು ಸರಿಯಾಗಿ ನಡೆಯುತ್ತಿಲ್ಲ. ಇದೇ ಅವಧಿಯಲ್ಲಿ ಖಾಸಗಿ ಕಾಲೇಜುಗಳಲ್ಲಿ ಪಠ್ಯಕ್ರಮ, ಘಟಕ ಪರೀಕ್ಷೆಗಳು ಮುಗಿದು, ಸೆಮಿಸ್ಟರ್ ಪರೀಕ್ಷೆಗಳಿಗೆ ಸಿದ್ಧತೆ ನಡೆಯುತ್ತಿದೆ. ಆದರೆ, ಬಡ ಮತ್ತು ಗ್ರಾಮೀಣ ಹಿನ್ನಲೆಯ ವಿದ್ಯಾರ್ಥಿಗಳು ಈ ಸಮಸ್ಯೆ ಎದುರಿಸುವಂತಾಗಿದೆ.

ಈ ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿರುವ ಎಐಡಿಎಸ್‌ಓ ರಾಜ್ಯ ಸಮಿತಿಯು, ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಎರಡನೇ ದರ್ಜೆಯ ಪ್ರಜೆಗಳಂತೆ ಪರಿಗಣಿಸುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಯುಜಿಸಿ ಮಾರ್ಗಸೂಚಿಗಳನ್ನು ಅನುಸರಿಸುವುದು ಕಡ್ಡಾಯವಲ್ಲ. ಸರ್ಕಾರ ಬಯಸಿದರೆ ಈ ಬಿಕ್ಕಟ್ಟನ್ನು ತಕ್ಷಣವೇ ಪರಿಹರಿಸಬಹುದು. ಆದರೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು AIDSO ಭಾವಿಸುತ್ತದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ | ಬಂಗ್ಲೆಗುಡ್ಡೆ ಪ್ರದೇಶದಲ್ಲಿ ವ್ಯಾಪಕ ಶೋಧಕ್ಕೆ ಎಸ್‌ಐಟಿ ಮತ್ತೆ ಸಿದ್ಧತೆ!

ಕಳೆದ ಕೆಲವು ವಾರಗಳಿಂದ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರಿದಿದೆ. ಹೀಗಾಗಿ, ತಮ್ಮ ಶಿಕ್ಷಣದ ಹಕ್ಕನ್ನು ರಕ್ಷಿಸಿಕೊಳ್ಳಲು ವಿದ್ಯಾರ್ಥಿಗಳು ಈ ಹೋರಾಟವನ್ನು ತೀವ್ರಗೊಳಿಸಿ, ತರಗತಿ ಬಹಿಷ್ಕಾರಕ್ಕೆ ಕರೆ ನೀಡುತ್ತಿದ್ದಾರೆ. ತಮ್ಮ ಭವಿಷ್ಯದ ಬಗ್ಗೆ ಸರ್ಕಾರಕ್ಕೆ ಒಂದು ಸ್ಪಷ್ಟ ಸಂದೇಶ ಕಳುಹಿಸಲು ಸಜ್ಜಾಗಿದ್ದಾರೆ. ಖಾಸಗಿ – ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳ ನಡುವಿನ ಅಸಮಾನತೆಗೆ ಕಾರಣವಾಗಿರುವ ರಾಜ್ಯ ಸರ್ಕಾರವನ್ನು AIDSO ರಾಜ್ಯ ಸಮಿತಿ ಖಂಡಿಸುತ್ತದೆ ಎಂದು AIDSO ರಾಜ್ಯ ಕಾರ್ಯದರ್ಶಿ ಅಜಯ್‌ ಕಾಮತ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...