ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ಕೈಬಿಡಲು ಅಕ್ಕಯ್ ಪದ್ಮಶಾಲಿ ಮನವಿ

Date:

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ನಿನ್ನೆಯಷ್ಟೇ ಸದಸ್ಯರಾಗಿ ಆಯ್ಕೆಯಾಗಿದ್ದ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಅವರು, ಸದಸ್ಯತ್ವದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಪತ್ರದಲ್ಲಿ, “ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನಾಗಿ ನನ್ನನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ತಮಗೆ ಹಾಗೂ ತಮ್ಮ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತಿದ್ದೇನೆ. ಆದರೆ ನನ್ನ ಸದಸ್ಯತ್ವದಿಂದ ಕೈಬಿಡಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ” ಎಂದು ತಿಳಿಸಿ ಅದಕ್ಕೆ ಕಾರಣವನ್ನೂ ಕೂಡ ಉಲ್ಲೇಖಿಸಿದ್ದಾರೆ.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆ” ಎಂದು ಅಕ್ಕಯ್ ಪದ್ಮಶಾಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾವುಗಳು ಇದರ ಬಗ್ಗೆ ಗಮನಹರಿಸಿ ನನ್ನನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿಸಿ, ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ‘ಸರ್ವ ಜನಾಂಗದ ಶಾಂತಿಯ ತೋಟದ’ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ” ಎಂದು ಕೂಡ ಇದೇ ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಕೆಲವೇ ಗಂಟೆಗಳ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ಶನಿವಾರ(ಮಾ.16) ಆದೇಶ ಹೊರಡಿಸಿತ್ತು.

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಹಿರಿಯ ಸಾಹಿತಿ ಎನ್ ಎನ್ ಮುಕುಂದರಾಜ್ ಅವರನ್ನು  ಅಧ್ಯಕ್ಷರಾಗಿ ನೇಮಕಗೊಳಿಸಿದರೆ, ಅಕ್ಕಯ್ ಪದ್ಮಶಾಲಿ ಅವರನ್ನೂ ಒಳಗೊಂಡಂತೆ, ಸಿದ್ದಪ್ಪ ಹೊನಕಲ್, ಅರ್ಜುನ ಗೋಳಸಂಗಿ, ಡಾ. ಹೆಚ್. ಜಯಪ್ರಕಾಶ್ ಶೆಟ್ಟಿ, ಡಾ. ಚಂದ್ರಕಲಾ ಬಿದರಿ, ಡಾ. ಚಿಲಕ್ ರಾಗಿ, ಡಾ. ಗಣೇಶ್, ಶ್ರೀಮತಿ ಸುಮಾ ಸತೀಶ್, ಹೆಚ್ ಆರ್ ಸುಜಾತ, ಶ್ರೀಮತಿ ಪಿ ಚಂದ್ರಿಕಾ, ಪ್ರಕಾಶ್ ರಾಜ್ ಮೇಹು, ಮಲ್ಲಿಕಾರ್ಜುನ ಮಾನ್ಪಡೆ, ಅಜಮೀರ್ ನಂದಾಪುರ, ಚಂದ್ರಕಿರಣ, ಮಹದೇವ ಬಸರಕೋಡ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ, ರಾಜ್ಯ ಸರ್ಕಾರ ಶನಿವಾರ ಆದೇಶಿಸಿತ್ತು.

ಇದನ್ನು ಓದಿದ್ದೀರಾ? ಅಕಾಡೆಮಿ, ಪ್ರಾಧಿಕಾರಗಳಿಗೆ ನೂತನ ಅಧ್ಯಕ್ಷ, ಸದಸ್ಯರನ್ನು ನೇಮಿಸಿ ಸರ್ಕಾರ ಆದೇಶ

ಇದೇ ವೇಳೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು ಎಚ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ ಸೇರಿದಂತೆ ಒಟ್ಟು 19 ಪ್ರಾಧಿಕಾರ, ಅಕಾಡೆಮಿಗಳಿಗೆ ಅಧ್ಯಕ್ಷ ಸದಸ್ಯರನ್ನು ರಾಜ್ಯ ಸರ್ಕಾರ ನೇಮಕಗೊಳಿಸಿ, ಆದೇಶ ಹೊರಡಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...