ಚಳಿಗಾಲ ಅಧಿವೇಶನ | ಪ್ರತಿಭಟನೆಗೆ ಬಳಸಲಾಗುವ ರೈತರ ಜಮೀನು ಬಾಡಿಗೆ ದರ ಹೆಚ್ಚಳ  

Date:

  • ಕಳೆದ ವರ್ಷ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು
  • ಈ ಭಾರಿ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಹೆಬ್ಬಾಳಕರ್ ಸೂಚನೆ 

ವಿಧಾನ ಮಂಡಲದ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ.

ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ ರೂ. 1200 ನೀಡಲಾಗಿತ್ತು. ಆ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ.

ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಟೆಂಟ್‌ಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ ರೂ. 3,000 ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೂ ಮೊದಲು ರೈತರು ಜಮೀನಿನ ಬಾಡಿಗೆ ಹೆಚ್ಚಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಲ್ಲಿ ಮನವಿ ಮಾಡಿದ್ದರು. ಸಚಿವರು ರೈತರ ಮನವಿಗೆ ಸ್ಪಂದಿಸಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...