ಪ್ರತಿ ಕ್ವಿಂಟಾಲ್‌ ತೊಗರಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೂ. ಘೋಷಣೆ

Date:

ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ರಾಜ್ಯ ಸರ್ಕಾರ ಕ್ವಿಂಟಾಲ್‌ಗೆ ಹೆಚ್ಚುವರಿ 450 ರೂ.ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೂ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.

ವಿಜಯಪುರ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಒಟ್ಟು ಪ್ರತಿ ಕ್ರಿಂಟಾಲ್‌ಗೆ ಎಂಟು ಸಾವಿರ ರೂ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.

“ಕೇಂದ್ರ ಸರ್ಕಾರದ ನಫೆಡ್‌ ಖರೀದಿ ಏಜನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸದ ಕಾರಣ ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ತೊಗರಿ ಬೆಳೆಗಾರರು ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಮೊದಲ ಬಾರಿಗೆ 8,000 ರೂ. ಧಾರಣಿಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಇದುವರೆಗೆ 5,800 ರೂ. ಧಾರಣಿಯಲ್ಲಿ ಖರೀದಿ ಮಾಡಲಾಗುತ್ತಿತ್ತು. ಬೀದರ್‌ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರೆಗೆ ತೊಗರಿ ಬೆಳೆಯಲಾಗುತ್ತಿದ್ದು, ರೈತರು ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಾಲ್‌ಗೆ 450 ರೂ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ” ಎಂದು ವಿವರಿಸಿದರು.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲೇ ಈ ದಿನ.ಕಾಮ್‌ ತೊಗರಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ವಿವರವಾದ ಎರಡು ಸ್ಟೋರಿಗಳನ್ನು ಪ್ರಕಟಿಸಿತ್ತು. ಜೊತೆಗೆ ಕೇಂದ್ರ ಸರ್ಕಾರದ ಜೊತೆ ಗುದ್ದಾಟ ಬಿಟ್ಟು ಪ್ರೋತ್ಸಾಹಧನ ಘೋಷಿಸುವುದು ಒಂದೇ ದಾರಿ ಎಂದು ಆಗ್ರಹಿಸಿತ್ತು. ಆ ವರದಿಯ ಲಿಂಕ್‌ ಇಲ್ಲಿದೆ. 
ತೊಗರಿ ಬೆಳೆ ನಾಶ | ಕೇಂದ್ರ- ರಾಜ್ಯ ಕಾದಾಟದಲ್ಲಿ ರೈತ ಹೈರಾಣು, ಪ್ರೋತ್ಸಾಹಧನ ಘೋಷಣೆಯೇ ದಾರಿ

ಆಂಧ್ರದ ಜೋಳಕ್ಕೆ ತಡೆ

“ಆಂಧ್ರಪ್ರದೇಶದ ಹೈಬ್ರಿಡ್‌ ಜೋಳವನ್ನು ರಾಜ್ಯದ ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿರುವುದು ಗಮನಕ್ಕೆ ಬಂದಿದ್ದು, ಆಂಧ್ರದ ಜೋಳಕ್ಕೆ ಕಡಿವಾಣ ಹಾಕಲಾಗುವುದು” ಎಂದು ಸಚಿವರು ಹೇಳಿದರು.

“ಹೈಬ್ರಿಡ್‌ ಜೋಳಕ್ಕೆ 3,370 ರೂ ಹಾಗೂ ಮಾಲದಂಡಿ ಜೋಳಕ್ಕೆ 3,400 ರೂ. ಬೆಂಬಲ ಬೆಲೆ ಘೋಷಣೆ ಮಾಡಲಾಗಿದ್ದು, ಒಟ್ಟು ಐದು ಲಕ್ಷ ಕ್ವಿಂಟಾಲ್‌ ಖರೀದಿ ಮಾಡಲಾಗುವುದು. ಇದುವರೆಗೆ ಕೆಲವೇ ಕೆಲವು ಜಿಲ್ಲೆಗಳ ರೈತರು ಮಾತ್ರ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡುತ್ತಿದ್ದರು. ಈ ಬಾರಿ ಜೋಳ ಬೆಳೆಯುವ ಎಲ್ಲ ಜಿಲ್ಲೆಗಳಿಗೂ ಖರೀದಿ ಪ್ರಮಾಣವನ್ನು ಹಂಚಿಕೆ ಮಾಡಲಾಗುವುದು” ಎಂದು ವಿವರಿಸಿದರು.

“ಕಳಪೆ ಬಿತ್ತನೆ ಬೀಜ ಮತ್ತು ಕೀಟನಾಶಕ ಮಾರಾಟದ ದೂರುಗಳು ಹೆಚ್ಚಾಗಿದ್ದು, ಅಂತಹವರಿಗೆ ಶಿಕ್ಷೆ ಕೊಡಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಕೃಷಿ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...