ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ, ಕೂಡಲೇ ಕೈ ಬಿಡಿ: ಪ್ರತಿಪಕ್ಷ ನಾಯಕ ಆರ್‌ ಅಶೋಕ

Date:

ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಗ್ರಹಿಸಿದರು.

ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗ್ರೇಟರ್‌ ಬೆಂಗಳೂರು ಹೆಸರಲ್ಲಿ ಕಾಂಗ್ರೆಸ್‌ ಸರ್ಕಾರ ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ 9,600 ಎಕರೆ ಜಮೀನನ್ನು ಸ್ವಾಧೀನ ಮಾಡುತ್ತಿದೆ. ಈ ಪೈಕಿ 6,500 ಎಕರೆ ಕೃಷಿಭೂಮಿ ಇದೆ. ಇಲ್ಲಿ 10 ಲಕ್ಷಕ್ಕೂ ಅಧಿಕ ತೆಂಗು ಹಾಗೂ ಮಾವಿನ ಮರಗಳಿವೆ. ಪ್ರತಿ ದಿನ 6 ಲಕ್ಷ ಲೀಟರ್‌ ಹಾಲು ಉತ್ಪಾದನೆಯಾಗಿ ಕೆಎಂಎಫ್‌ಗೆ ತಲುಪುತ್ತಿದೆ. 3 ಸಾವಿರಕ್ಕೂ ಅಧಿಕ ರೈತರು ಹಾಗೂ ಕಾರ್ಮಿಕರು ಕೃಷಿಯನ್ನು ನಂಬಿಕೊಂಡಿದ್ದಾರೆ. ಇಷ್ಟು ಫಲವತ್ತಾದ ಜಮೀನುಗಳನ್ನು ಸ್ವಾಧೀನ ಮಾಡಿಕೊಂಡು ಸೈಟುಗಳನ್ನು ನೀಡಲಾಗುತ್ತಿದೆ ಎಂದರು.

ಹೌಸಿಂಗ್‌ ಬೋರ್ಡ್‌ನಿಂದ 560 ಎಕರೆ ಜಮೀನು ಸ್ವಾಧೀನಕ್ಕೆ ಪಡೆದು ಸೈಟುಗಳನ್ನು ನಿರ್ಮಿಸಿದೆ. ಆದರೂ ಇಲ್ಲಿ ಯಾರೂ ಮನೆಗಳನ್ನು ನಿರ್ಮಿಸಿಲ್ಲ. ಕೆಂಪೇಗೌಡ ಬಡಾವಣೆ, ಶಿವರಾಮ ಕಾರಂತ ಬಡಾವಣೆಗಳಲ್ಲೇ ಖಾಲಿ ಇದೆ. ಇಷ್ಟು ಖಾಲಿ ಇರುವಾಗ ಫಲವತ್ತಾದ ಭೂಮಿಯನ್ನು ಸ್ವಾಧೀನ ಮಾಡಿಕೊಂಡರೆ ಅದು ರೈತರಿಗೆ ಮಾಡುವ ವಂಚನೆ. ಈ ಹಿಂದೆ ಎಚ್‌.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಸ್ವಾಧೀನ ಬೇಡವೆಂದು ರೈತರಿಗೆ ಜಮೀನು ಬಿಟ್ಟಿದ್ದರು. ಈಗ ಕಾಂಗ್ರೆಸ್‌ ಸರ್ಕಾರ ಕುತಂತ್ರ ಮಾಡಿ ಜಮೀನು ಲೂಟಿ ಮಾಡಿ ರಿಯಲ್‌ ಎಸ್ಟೇಟ್‌ನಿಂದ ಹಣ ಹೊಡೆಯಲು ಪ್ಲಾನ್‌ ಮಾಡಿದೆ. ರಾಮನಗರದಲ್ಲಿ ಸೈಟು ಬೇಕೆಂದು ಯಾರು ಕೇಳಿದ್ದಾರೆ? ಮಾಡಿರುವ ಸೈಟುಗಳೇ ಖಾಲಿ ಇದೆ. ಇದು ಅಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನ್ಯಾಯಾಲಯದ ವಿವೇಕದ ಮುಂದೆ ಬಯಲಾದ ಬಿಜೆಪಿ ನಾಯಕರ ಅವಿವೇಕ

ರೈತರ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ನೀಡಿದ್ದೇವೆ. ಕೂಡಲೇ ಸರ್ಕಾರ ಈ ಸ್ವಾಧೀನ ಕ್ರಮವನ್ನು ಕೈ ಬಿಡಬೇಕು. ಸರ್ಕಾರದಿಂದ ಯಾರಾದರೂ ಬಂದು ರೈತರ ಅಹವಾಲು ಆಲಿಸಬೇಕಿತ್ತು. ರೈತರನ್ನು ಸಮಾಧಾನ ಮಾಡಿ ಮಾತನಾಡಬೇಕಿತ್ತು. ಅದನ್ನು ಬಿಟ್ಟು ದೌರ್ಜನ್ಯ ಮಾಡಿ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸ ಬೇಡ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಡಿನೋಟಿಫಿಕೇಶನ್‌ ಮಾಡದೆಯೇ ಹಾಗೆಯೇ ಬಿಟ್ಟುಬಿಡಬೇಕು. ಯಾವುದೇ ಸವಲತ್ತು ಬೇಡವೆಂದು ರೈತರು ಹೇಳಿದ್ದಾರೆ. ಬಹುತೇಕ ರೈತರು ಹೀಗೆಯೇ ಇರಲಿ ಎಂದು ಹೇಳಿದ್ದಾರೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೈತರ ಮಾತಿಗೆ ಬೆಲೆ ನೀಡಬೇಕು. ಮುಂದೆ ನಮ್ಮ ಸರ್ಕಾರ ಬಂದಾಗ ರೈತರಿಗೆ ಅನುಕೂಲ ಮಾಡಿಕೊಡುತ್ತೇವೆ. ಈ ಕುರಿತು ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿದ್ದೇನೆ. ಇದನ್ನು ಯಾವ ಝೋನ್‌ ಮಾಡಬೇಕೆಂದು ಸರ್ಕಾರ ರೈತರೊಂದಿಗೆ ಚರ್ಚಿಸಲಿ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...