ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರ ಸಚಿವರ ನೇತೃತ್ವದ ನಿಯೋಗ ನಾಳೆ ಬೆಂಗಳೂರಿಗೆ ಭೇಟಿ

Date:

ರಾಜ್ಯದಲ್ಲಿ ಜನಪ್ರಿಯವಾಗಿರುವ ಶಕ್ತಿ ಯೋಜನೆಯನ್ನು ಆಂಧ್ರ ಪ್ರದೇಶ ಸರ್ಕಾರವು ಜಾರಿಗೊಳಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಶಕ್ತಿ ಯೋಜನೆ ಅಧ್ಯಯನಕ್ಕಾಗಿ ಆಂಧ್ರದ ಸಚಿವರ ಹಾಗೂ ಅಧಿಕಾರಿಗಳ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ.

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜನ‌ಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜನಪ್ರಿಯ ಗಳಿಸಿರುವ ಯೋಜನೆಯಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ. ಇದೀಗ ರಾಜ್ಯದ ಶಕ್ತಿ ಯೋಜನೆಯತ್ತ ಸಿಎಂ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರಪ್ರದೇಶ ಸರ್ಕಾರ ಚಿತ್ತ ನೆಟ್ಟಿದೆ.

ಆಂಧ್ರ ಪ್ರದೇಶ ಸರ್ಕಾರ ಅಲ್ಲಿ ಕರ್ನಾಟಕ ಮಾದರಿಯಲ್ಲೇ ಶಕ್ತಿ ಯೋಜನೆಯನ್ನು ಜಾರಿ ಮಾಡಲು ಒಲವು ಹೊಂದಿದೆ. ಈ ನಿಟ್ಟಿನಲ್ಲಿ ಆಂಧ್ರದ ಸಚಿವರು ಹಾಗೂ ಅಧಿಕಾರಿಗಳ ನಿಯೋಗ ನಾಳೆ (ಜ.2ಕ್ಕೆ) ರಾಜ್ಯಕ್ಕೆ ಭೇಟಿ ನೀಡಲಿದೆ. ಬೆಂಗಳೂರಿಗೆ ಆಗಮಿಸಿ ಶಕ್ತಿ ಯೋಜನೆ ಬಗ್ಗೆ ಅಧ್ಯಯನ ನಡೆಸಲಿದೆ. ರಾಜ್ಯದ ಶಕ್ತಿ ಯೋಜನೆ ಅನುಷ್ಠಾನ, ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಿದೆ ಎಂದು ಕೆಎಸ್​ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ರಾಜ್ಯಕ್ಕೆ ಆಂಧ್ರ ಪ್ರದೇಶದ ಮೂವರು ಸಚಿವರು ಸೇರಿ ಹಿರಿಯ ಅಧಿಕಾರಿಗಳ ಸುಮಾರು 15 ಸದಸ್ಯರ ನಿಯೋಗ ಬೆಂಗಳೂರಿಗೆ ಭೇಟಿ ನೀಡಲಿದೆ. ಜ.3ರಂದು ಸಿಎಂ, ಸಾರಿಗೆ ಸಚಿವ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರನ್ನು ಭೇಟಿಯಾಗಿ ಶಕ್ತಿ ಯೋಜನೆಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

ನಿಯೋಗದಲ್ಲಿ ಆಂಧ್ರದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ಶೆಟ್ಟಿ, ಗೃಹ ಮತ್ತು ವಿಪತ್ತು ನಿರ್ವಹಣೆ ಸಚಿವೆ ವಂಗಲಪುಡಿ ಅನಿತಾ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ಇರಲಿದ್ದಾರೆ. ಇದರ ಜೊತೆಗೆ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಹಣಕಾಸು ಇಲಾಖೆಯ ಕಾರ್ಯದರ್ಶಿ ಸೇರಿದಂತೆ ಎಪಿಎಸ್​ಆರ್​ಟಿಸಿಯ ಅಧಿಕಾರಿಗಳನ್ನೊಳಗೊಂಡ 15 ಅಧಿಕಾರಿಗಳ ತಂಡ ಆಗಮಿಸಿ ಶಕ್ತಿ ಯೋಜನೆಯ ಅಧ್ಯಯನ ನಡೆಸಲಿದೆ.

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಆಂಧ್ರ ಪ್ರದೇಶ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಜ.3ಕ್ಕೆ ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಶಕ್ತಿ ಯೋಜನೆ ಅನುಷ್ಠಾನ, ಹಣಕಾಸು ನಿರ್ವಹಣೆ, ಹೊರೆ, ನಿರ್ವಹಣೆ, ಮಾನದಂಡಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಶಕ್ತಿ ಯೋಜನೆಯ ಯಶಸ್ಸು, ರಸ್ತೆ ಸಾರಿಗೆ ನಿಗಮ ತೆಗೆದುಕೊಂಡ ಕ್ರಮಗಳ ಬಗ್ಗೆ ನಿಯೋಗಕ್ಕೆ ವಿವರಿಸಲಿದ್ದೇವೆ ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...