ಕಲ್ಯಾಣ ಕರ್ನಾಟಕ | ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಘೋಷಣೆ

Date:

ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ 51 ತಾಲೂಕುಗಳಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಫೆಲೋಗಳನ್ನು ಎರಡು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಮಂಜೂರಾತಿ ನೀಡಲಾಗಿದೆ.

ಸ್ಥಳೀಯ ಆಡಳಿತ ಹಾಗೂ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ಈ ಫೆಲೋಶಿಪ್ ಸ್ಥಾಪಿಸಲಾಗಿದ್ದು, ಪಂಚಾಯತ್ ರಾಜ್ ಕ್ಷೇತ್ರದಲ್ಲಿ ನಿರಂತರ ಸಾಮಾಜಿಕ ಆರ್ಥಿಕ ಸಮಸ್ಯೆಗಳನ್ನು ನಿಭಾಯಿಸಲು ಸ್ಥಳೀಯ ಆಡಳಿತಕ್ಕೆ ಇವರು ನೆರವಾಗಲಿದ್ದಾರೆ.

ಹೊಸ ದೃಷ್ಟಿಕೋನಗಳು, ಆಲೋಚನೆಗಳು ಮತ್ತು ಚಿಂತನೆಗಳ ಮೂಲಕ ಸ್ಥಳೀಯ ಆಡಳಿತದಲ್ಲಿ ನಾಗರಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ವಿದ್ಯಾವಂತ, ತರಬೇತಿ ಪಡೆದ ಮತ್ತು ಪ್ರೇರಿತ ಯುವ ವೃತ್ತಿಪರರ ಕೌಶಲ್ಯತೆಯನ್ನು ಬಳಸಿಕೊಳ್ಳುವುದು ಫೆಲೋಶಿಪ್‌ ಆರಂಭಿಸಿರುವ ಪ್ರಮುಖ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

kalyan scheme

ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಭಿವೃದ್ಧಿ ಚಟುವಟಿಕೆಗಳ ಅನುಷ್ಠಾನದಲ್ಲಿ ತೊಡಗಿಕೊಂಡು, ಸ್ಥಳೀಯ ಅಡಳಿತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಕ್ಷೇತ್ರಮಟ್ಟದ ಸ್ಥಿತಿ-ಗತಿ ಮತ್ತು ಕಲಿಕೆಗಳ ಅಧ್ಯಯನ ಮಾಡುವುದನ್ನು ಪ್ರಮುಖ ಹೊಣೆಯಾಗಿ ಈ ಯುವ ಸಮೂಹ ಹೊರಲಿದ್ದಾರೆ. ಕಾರ್ಯಕ್ರಮದ ಅವಧಿ ಎರಡು ವರ್ಷಗಳಾಗಿದ್ದು, ಆಯ್ಕೆಯದ ಅಭ್ಯರ್ಥಿಗಳಿಗೆ ಮಾಸಿಕ 60,000 ರೂ. ಶಿಷ್ಯವೇತನವನ್ನು ಸರ್ಕಾರ ನೀಡಲಿದೆ.

ಫೆಲೋಗಳು ತಮ್ಮ ಚಟುವಟಿಕೆಗಳನ್ನು ಕೈಗೊಳ್ಳಲು ಗ್ರಾಮ ಪಂಚಾಯತಿ ಕಾರ್ಯನಿರ್ವಹಣೆ ಶ್ರೇಣೀಕರಣದಲ್ಲಿ ಕೊನೆಯಲ್ಲಿರುವ 10 ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ತಮ್ಮ ಚಟುವಟಿಕೆಗಳನ್ನು ಕೇಂದ್ರೀಕರಿಸಲಿದ್ದಾರೆ. ಅವಧಿ ಮುಗಿಯುವವರೆಗೆ ನಿಯುಕ್ತಿಗೊಳಿಸಲಾದ ತಾಲೂಕಿನಲ್ಲಿಯೇ ವಾಸ್ತವ್ಯ ಹೂಡಬೇಕಲ್ಲದೆ, ಗ್ರಾಮ ಪಂಚಾಯತಿಗಳಿಗೆ ನಿರಂತರವಾಗಿ ಪ್ರವಾಸ ಕೈಗೊಂಡು ಗ್ರಾಮೀಣ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ ಎಂಬ ನಿಯಮವನ್ನು ಹಾಕಲಾಗಿದೆ.

“ನೈಜ ಸಮಾಜ ಸೇವೆಯಲ್ಲಿ ಆಸಕ್ತಿಯಿರುವ ಯುವಜನರು ಈ ಫೆಲೋಶಿಪ್‌ ಪ್ರಯೋಜನ ಪಡೆಯಬೇಕು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...