ಶಿವಮೊಗ್ಗ ಗಲಾಟೆ | ಧಾರ್ಮಿಕ ಕಾರ್ಯಕ್ರಮಕ್ಕೆ ಯಾರೇ ಧಕ್ಕೆ ತಂದರೂ ಸಹಿಸಲ್ಲ: ಸಿದ್ದರಾಮಯ್ಯ

Date:

  • ‘ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ’
  • ’40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ’

ಇನ್ನೊಬ್ಬರ ಧಾರ್ಮಿಕ ಕಾರ್ಯಕ್ರಮಕ್ಕೆ ಬೇರೆಯವರು ಕಲ್ಲೆಸೆಯುವುದು, ಧಕ್ಕೆ ಮಾಡುವುದು ಕಾನೂನುಬಾಹಿರ. ಇಂತಹ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶಿವಮೊಗ್ಗ ಹೊರವಲಯದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯುವ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಅಲ್ಲಿದ್ದ ಪೊಲೀಸರ ಮೇಲೂ ಕಲ್ಲು ಎಸೆಯಲಾಗಿದೆ. ಪೊಲೀಸರು ಅನಿವಾರ್ಯವಾಗಿ ಅಲ್ಲಿ ಲಾಠಿ ಚಾರ್ಜ್ ಮಾಡಿದ್ದಾರೆ” ಎಂದರು.

“ಗಲಾಟೆಗೆ ಕಾರಣರಾದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಈಗ ಸಂಪೂರ್ಣ ನಿಯಂತ್ರಣದಲ್ಲಿದೆ. ಪೊಲೀಸರು ಎಲ್ಲ ರೀತಿಯ ಕ್ರಮಗಳನ್ನು ತೆಗೆದುಕೊಂಡಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಣ ಬಹಿರಂಗಪಡಿಸಲ್ಲ: ಪರಮೇಶ್ವರ

ಗೃಹ ಸಚಿವ ಜಿ. ಪರಮೇಶ್ವರ್ ಈ ಬಗ್ಗೆ ಪ್ರತಿಕ್ರಿಯಿಸಿ, “ಶಿವಮೊಗ್ಗದಲ್ಲಿ ದೊಡ್ಡ ಪ್ರಮಾಣದ ಗಲಾಟೆಯನ್ನು ಪೊಲೀಸರು ತಪ್ಪಿಸಿದ್ದಾರೆ. ಗಲಾಟೆಗೆ ಕಾರಣರಾದ ಎರಡೂ ಗುಂಪಿನ ಜನರನ್ನು ನಮ್ಮ ಪೊಲೀಸರು ಬಂಧಿಸಿದ್ದಾರೆ” ಎಂದರು.

“ಘಟನೆ ಕುರಿತು ಹೇಳಿಕೆ ಕೊಡುವವರು ಕೊಡುತ್ತಾರೆ. ನಾವು ಮೊದಲೇ ಕಟ್ಟೆಚ್ಚರ ವಹಿಸಿದ್ದೆವು. ಶಿವಮೊಗ್ಗದ ಘಟನೆಗೆ ಕಾರಣ ಏನು ಎಂದು ಬಹಿರಂಗಗೊಳಿಸಲು ಸಾಧ್ಯವಿಲ್ಲ. ಘಟನೆ ಸುತ್ತ ನಮಗೆ ಮಾಹಿತಿ ಗೊತ್ತಿದೆ” ಎಂದು ಹೇಳಿದರು.

”ಗಲಾಟೆಯಲ್ಲಿ ಕತ್ತಿ ಬಳಕೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಆದರೆ, ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ಮಾಡಿರುವ ಮಾಹಿತಿ ಇದೆ. ಶಿವಮೊಗ್ಗ ಘಟನೆಗೆ ಯಾರನ್ನೂ ಹೊರಗಿನಿಂದ ಬರಲು ಬಿಟ್ಟಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಬಗರ್‌ ಹುಕುಂ ಸಮಸ್ಯೆ ಬಗೆಹರಿಸಿದರಷ್ಟೇ ಅರಣ್ಯ ಒತ್ತುವರಿ ತೆರವು ಸಲೀಸು

ಸ್ವಾರ್ಥಕ್ಕೆ ಗಲಾಟೆ: ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಕೂಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, “ರಾಗಿಗುಡ್ಡದಲ್ಲಿ ಮಾತ್ರ ಗೊಂದಲ ಆಗಿದೆ. ಉಳಿದ ಕಡೆ ಯಾವುದೇ ಗಲಾಟೆ ಆಗಿಲ್ಲ. ಯಾವುದೋ ಸ್ವಾರ್ಥಕ್ಕೆ ಗಲಾಟೆ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು.

“ಶಿವಮೊಗ್ಗದಲ್ಲಿ ಈದ್ ಮಿಲಾದ್, ಗಣೇಶ ವಿಸರ್ಜನೆ ಎರಡೂ ಒಟ್ಟಿಗೆ ಬಂದಿತ್ತು. ನಾವು ಎರಡೂ ಕಡೆಯ ಮುಖಂಡರ ಸಭೆ ಮಾಡಿದ್ದೆವು. ಈದ್ ಮಿಲಾದ್ ಮೆರವಣಿಗೆ ಅ. 1ರಂದು ಮಾಡುತ್ತೇವೆ ಎಂದು ತಿಳಿಸಿದ್ದರು. ಯಾರೋ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. 12 ಜನರಿಗೆ ಚಿಕ್ಕಪುಟ್ಟ ಗಾಯಗಳಾಗಿದೆ” ಎಂದು ವಿವರಿಸಿದರು.

“ಟಿಪ್ಪು ಫೋಟೊ ಇರುವುದೇ ಘಟನೆಗೆ ಮೂಲ ಕಾರಣವೆಂದು ಹೇಳಲಾಗುತ್ತಿದೆ. ಅದಕ್ಕೆಲ್ಲ ಈಗ ಉತ್ತರ ಕೊಡಲು ಹೋಗುವುದಿಲ್ಲ. ಸ್ಥಳೀಯ ಶಾಸಕರಿಗೆ ಎಲ್ಲ ಮಾಹಿತಿ ಗೊತ್ತಾ? ಜವಾಬ್ದಾರಿ ಸ್ಥಾನದಲ್ಲಿ ಇರುವವರು ಏನೇನೋ ಮಾತನಾಡಬಾರದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...