ಪ್ರಾಧ್ಯಾಪಕರ ನೇಮಕಾತಿ | ಡಿಸೆಂಬರ್ ಅಂತ್ಯದೊಳಗೆ ಆದೇಶ: ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್

Date:

  • 2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ
  • ವಾರದೊಳಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆ ಆರಂಭ

2021ರಲ್ಲಿ ಆರಂಭಗೊಂಡ 1,242ರ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಪ್ರಕ್ರಿಯೆಯನ್ನು ಒಂದು ವಾರದೊಳಗೆ ಆರಂಭಿಸಿ, ಡಿಸೆಂಬರ್ ಅಂತ್ಯದೊಳಗೆ ಆದೇಶ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಗುರುವಾರ ನಗರದ ಸಚಿವರ ನಿವಾಸದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾದ 150ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಬಳಗದ ವತಿಯಿಂದ ಮನವಿ ಮಾಡಿದ ಸಂದರ್ಭದಲ್ಲಿ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಕೆಎಟಿಯಿಂದ ತೀರ್ಪು ಪ್ರಕಟವಾಗಿದೆ. ಸರ್ಕಾರದ ಸುತ್ತೋಲೆಯ ಪರವಾಗಿ ಜಯವಾಗಿದೆ. ತೀರ್ಪನ್ನು ಸ್ವಾಗತಿಸುತ್ತೇನೆ. ಇನ್ನು ಸಿಸಿಬಿ ವರದಿಯ ಪರಿಶೀಲನೆಗಾಗಿ ನೇಮಿಸಿದ ತ್ರಿಸದಸ್ಯ ಸಮಿತಿಯಿಂದ 6 ದಿನಗಳ ಒಳಗೆ ವರದಿಯನ್ನು ಪಡೆದು, ಕೂಡಲೇ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು. ಅಭ್ಯರ್ಥಿಗಳು ಆತಂಕ ಪಡಬೇಡಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಕುರಿತಾಗಿ ಮಾನ್ಯ ಕರ್ನಾಟಕ ಆಡಳಿತ ನ್ಯಾಯಾಧಿಕರಣವು 01-02-2023ರ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತ ಕರ್ನಾಟಕ ಸರ್ಕಾರದ ಮಧ್ಯಂತರ ಸುತ್ತೋಲೆಯನ್ನು ಎತ್ತಿ ಹಿಡಿದು ಸದರಿ ನೇಮಕಾತಿಯ ವ್ಯಾಜ್ಯವನ್ನು ಬಗೆಹರಿಸಿ ತೀರ್ಪು ಪ್ರಕಟಿಸಿದೆ. ನೇಮಕಾತಿಗೆ ಮುಂದೆ ಯಾವುದೇ ಕಾನೂನಾತ್ಮಕ ತೊಡಕುಗಳು ಎದುರಾಗದಂತೆ ದಯವಿಟ್ಟು ಸರ್ಕಾರದ ಕಡೆಯಿಂದಲೇ ಗೌರವಾನ್ವಿತ ಉಚ್ಚ ನ್ಯಾಯಾಲಯಕ್ಕೆ ಕೇವಿಯಟ್ ಸಲ್ಲಿಸಬೇಕೆಂದು” ಅಭ್ಯರ್ಥಿಗಳು ಆಗ್ರಹಿಸಿದರು. ಸಚಿವರು ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ನಾಳೆಯೇ ಕೇವಿಯಟ್ ಸಲ್ಲಿಸಬೇಕೆಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಃಕರಣವಿರುವವರ ನಿದ್ದೆಗೆಡಿಸುವ ಮೂರು ಸುದ್ದಿಗಳು

“ಈಗಾಗಲೇ ನೇಮಕಾತಿ ಆರಂಭವಾಗಿ 3 ವರ್ಷಗಳು ಮುಗಿಯುತ್ತಿದ್ದು, ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಖಾಯಂ ಪ್ರಾಧ್ಯಾಪಕರ ನೇಮಕಾತಿ ಅತ್ಯಂತ ಜರೂರಾಗಬೇಕಿದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿರುವಂತಹ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳೆಲ್ಲರೂ ಈಗಾಗಲೇ ಮಾನಸಿಕವಾಗಿ ಕುಗ್ಗಿ ಹೋಗಿದ್ದೇವೆ. ನೇಮಕಾತಿ ಯಾವಾಗ ಆರಂಭವಾಗಿ, ನೇಮಕಾತಿ ಆದೇಶವನ್ನು ಯಾವಾಗ ಪಡೆಯುತ್ತೇವೆ ಎಂಬ ಚಿಂತೆಯಲ್ಲೇ ದಿನದೂಡುವಂತಹ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಇತ್ತ ಪದವಿ ವಿದ್ಯಾರ್ಥಿಗಳಿಗೆ ಬೋಧಿಸಲು ಖಾಯಂ ಪ್ರಾಧ್ಯಾಪಕರಿಲ್ಲದಂತಾಗಿದೆ. ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಕಾಪಾಡುವ ಇಚ್ಛಾಶಕ್ತಿಯನ್ನು ಸರ್ಕಾರ ಮಾಡಬೇಕಿದೆ. ಆಯ್ಕೆಯಾದ ಎಲ್ಲ ಸಹಾಯಕ ಪ್ರಾಧ್ಯಾಪಕರಿಗೆ ಉದ್ಯೋಗ ನೀಡುವ ಮೂಲಕ ನಿರುದ್ಯೋಗವನ್ನು ಹೋಗಲಾಡಿಸಬೇಕು. ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ನೆರವಾಗಬೇಕಿದೆ” ಎಂದು ಅಭ್ಯರ್ಥಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಳದ ನಾಗಲಕ್ಷ್ಮೀ, ಪ್ರಿಯಾಂಕ, ಜಯಶಂಕರ್, ರಮೇಶ್, ಅಶೋಕ್, ಯದುಕುಮಾರ್, ಯಲ್ಲಪ್ಪ, ಮತ್ತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...