ವರ್ತೂರು ಪ್ರಕಾಶ್ ಹೆಸರಲ್ಲಿ ಆಪ್ತೆ ವಂಚನೆ, 2.1 ಕೆ.ಜಿ ಚಿನ್ನಾಭರಣ ಪತ್ತೆ

Date:

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಅವರು ಆಪ್ತೆ ಶ್ವೇತಾಗೌಡ ಮಾಡಿದ ವಂಚನೆ ಪ್ರಕರಣಕ್ಕೆ ಸಂಬಂಧ ಬೆಂಗಳೂರು ನಗರ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ ಆರೋಪದಲ್ಲಿ
ಶ್ವೇತಾಗೌಡ‌‌ರನ್ನು ಬಂಧಿಸಲಾಗಿತ್ತು. ಆರೋಪಿ ಶ್ವೇತಾಗೌಡ ಬಂಧಿತರಾಗಿದ್ದರೂ ಕೂಡ ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ.

ವಿಚಾರಣೆ ಬಳಿಕ ಶ್ವೇತಾಗೌಡ ನೀಡಿದ ಸುಳಿವು ಆಧರಿಸಿ ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ. ನವರತ್ನ ಜ್ಯುವೆಲ್ಲರಿ ಮಾಲೀಕ ಸಂಜಯ್ ಭಾಷಾ ಬಳಿ ಶ್ವೇತಾ ಗೌಡ ಪಡೆದಿದ್ದ 2 ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ವಶ ಪಡಿಸಿಕೊಳ್ಳಲಾಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.
ರಾಮ್‌ದೇವ್ ಜ್ಯುವೆಲ್ಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ.

ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ. ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...