ಕೋಳಿ ಅಂಕಕ್ಕೆ ಪ್ರಚೋದನೆ: ಶಾಸಕ ಅಶೋಕ್ ರೈ ವಿರುದ್ಧ ಪ್ರಕರಣ ದಾಖಲು

Date:

ಬಂಟ್ವಾಳ ತಾಲೂಕಿನ ಕೇಪು ಉತ್ಸವದ ಪ್ರಯುಕ್ತ ನಡೆಯುವ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ತಡೆನೀಡಿದ್ದರೂ, ಕೋಳಿ ಅಂಕ ನಡೆಸಲು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಖುದ್ದು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಟ್ಲ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ ಕೋಳಿ ಅಂಕ ನಡೆಸಲಾಗಿದ್ದು, ಪೊಲೀಸ್ ಇದನ್ನು ಅಕ್ರಮ ಎಂಬ ಸೂಚನೆ ನೀಡಿದರೂ ಶಾಸಕ ರೈ ಪ್ರೇರಣೆ ನೀಡಿ ಕೋಳಿ ಅಂಕ ಮುಂದುವರೆಸಿದ್ದಾರೆ. ಅಂಕಕ್ಕೆ ಬಳಸಲಾಗಿರುವ 22 ಹುಂಜಗಳನ್ನು ವಶಕ್ಕೆ ಪಡೆದಿರುವ ಪೊಲೀಸರು, 16 ಜನರನ್ನು ವಶಕ್ಕೆ ಪಡೆದಿದ್ದಾರೆ.

ಕೇಪು ಉಳ್ಳಾಲ್ತಿ ದೈವಸ್ಥಾನದ ಉತ್ಸವದ ಪ್ರಯುಕ್ತ ನಡೆಯುತ್ತಿದ್ದ ಈ ಜೂಜು ರಹಿತವಾದ ಕೋಳಿ ಅಂಕವನ್ನು ಮಾದರಿ ಕೋಳಿ ಅಂಕವೆಂದು ಬಿಂಬಿಸಲಾಗಿದೆ. ಧಾರ್ಮಿಕ ಹಿನ್ನೆಲೆಯ ಈ ಅಂಕಕ್ಕೆ ಪೊಲೀಸ್ ಸಮ್ಮತಿ ಇರಬಹುದೆಂದು ಸಾವಿರಾರು ಮಂದಿ ನೆರೆದಿದ್ದರು. ಆದರೆ, ಪೊಲೀಸ್ ಸೂಚನೆ ಹೊರಬೀಳುತ್ತಿದ್ದಂತೆ ಎಲ್ಲರೂ ದಿಕ್ಕಾಪಾಲು ಓಡಲು ಆರಂಭಿಸಿದ್ದರು. ಆದಾಗ್ಯೂ, ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕ ಅಶೋಕ್ ರೈ, ಎಲ್ಲರನ್ನೂ ಹುರಿದುಂಬಿಸಿ ಮತ್ತೆ ಸಂಜೆ ಆರುಗಂಟೆಯವರೆಗೆ ಕೋಳಿ ಅಂಕ ನಡೆಸಲು ಮುಂದಾಳುತ್ವ ವಹಿಸಿದ್ದರು ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...