ಮೊದಲ ಕಂತಿನ ಪೂರಕ ಅಂದಾಜು ವೆಚ್ಚಗಳಿಗೆ ವಿಧಾನಸಭೆ ಅಂಗೀಕಾರ

Date:

ಬೆಳಗಾವಿ ಚಳಿಗಾಲದ ಅಧಿವೇಶನದ ವಿಧಾನಸಭಾ ಕಲಾಪದಲ್ಲಿ ಬುಧವಾರ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2023-24ನೇ ಸಾಲಿನ ಮೊದಲನೇ ಪೂರಕ ಅಂದಾಜುಗಳ ವೆಚ್ಚ ರೂ.3,542.10 ಕೋಟಿಗಳಿಗೆ ಅಂಗೀಕಾರ ದೊರಕಿದೆ.

ಸದನದ ಅಂಗೀಕಾರ ಕೋರಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಹಿಂದೆ ಜುಲೈನಲ್ಲಿ ರೂ.3,41,321 ಕೋಟಿಗಳ ಆಯವ್ಯಯ ಮಂಡಿಸಲಾಗಿತ್ತು. ಆಯವ್ಯಯದಲ್ಲಿ ಘೋಷಿಸಿದ ಹೊರತಾಗಿ ಸರ್ಕಾರದ ಕೆಲವು ಖರ್ಚುಗಳಿಗೆ ರಾಜ್ಯದ ತುರ್ತ ನಿಧಿಯಡಿ ಅನುದಾನವನ್ನು ಒದಗಿಸಲಾಗಿದೆ. ಹೀಗೆ ವೆಚ್ಚ ಮಾಡಿದ ಮೊಬಲಗನ್ನು ತೋರಿಸುವ ಪೂರಕ ಅಂದಾಜು ವಿವರಣೆಯನ್ನು ರಾಜ್ಯದ ಸದನದಲ್ಲಿ ಇಟ್ಟು ಒಪ್ಪಿಗೆ ಪಡೆದುಕೊಳ್ಳಬೇಕು. ಇದಕ್ಕೆ ಸಂವಿಧಾನದ 205(1)(ಎ) ಅನುಚ್ಛೇದ ಅವಕಾಶ ಕಲ್ಪಿಸಿದೆ. ಈಗ ಮಂಡಿಸಿದ ಪೂರಕ ಅಂದಾಜಿನ ಗಾತ್ರ 2023-24ರ ಆಯವ್ಯಯದ ಶೇ.1 ರಷ್ಟು ಮಾತ್ರ ಎಂದರು.

ಮೊದಲನೇ ಪೂರಕ ಅಂದಾಜಿನಲ್ಲಿ ಒದಗಿಸಿರುವ ಒಟ್ಟು ಮೊತ್ತ ರೂ.3,542.10 ಕೋಟಿಯಲ್ಲಿ ರೂ.17.66 ಕೋಟಿ ಪ್ರಭೃತ ವೆಚ್ಚ ಮತ್ತು ರೂ.3,524.44 ಕೋಟಿ ಪುರಸ್ಕೃತ ವೆಚ್ಚಗಳು ಸೇರಿವೆ. ಇದರಲ್ಲಿ ರೂ.326.98 ಕೋಟಿ ರಿಸರ್ವ ಫಂಡ್ ಠೇವಣಿ ಹಾಗೂ ಎಸ್.ಎನ್.ಎ ಖಾತೆಗಳಿಂದ ಭರಿಸಲಾಗುವುದು. ರೂ.684.28 ಕೋಟಿ ಕೇಂದ್ರ ಸರ್ಕಾರ ಸಹಾಯಕ್ಕೆ ಸಂಬಂಧಿಸಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೇವಲ 1 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣಕ್ಕೆ ₹15 ಕೋಟಿ ಖರ್ಚು : ತನಿಖೆಗೆ ಎಎಪಿ ಆಗ್ರಹ

ಪೂರಕ ಅಂದಾಜಿನಲ್ಲಿ ರೂ.915 ಕೋಟಿ ಬಂಡವಾಳ ವೆಚ್ಚವಾಗಿ ಅಭಿವೃದ್ಧಿ ಕಾರ್ಯಗಳಿಗೆ ವ್ಯಯಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆಯ ಎಸ್.ಇ.ಪಿ ಹಾಗೂ ಟಿ.ಎಸ್.ಪಿ ಯೋಜನಗೆ ರೂ.508 ಕೋಟಿ, ರಾಜ್ಯ ವಿಪತ್ತು ನಿರ್ವಹಣೆ ಪ್ರಾಧಿಕಾರಕ್ಕೆ ರೂ.502 ಕೋಟಿ, ಸಮಗ್ರ ಶಿಶು ಅಭಿವೃದ್ದಿ ಯೋಜನೆಗೆ ರೂ.310 ಕೋಟಿ, ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯ ಸಾಗಾಣಿಕೆ ವೆಚ್ಚಗಳಿಗೆ ರೂ.297 ಕೋಟಿ, ಎಸ್.ಸಿ.ಡಿ.ಎಸ್‌ಗೆ ರೂ.284 ಕೋಟಿ, ಉಗ್ರಾಣ ನಿಗಮಕ್ಕೆ ಸಾಲವಾಗಿ ರೂ.229 ಕೋಟಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲು ರೂ.189 ಕೋಟಿ, ನಬಾರ್ಡ ರಸ್ತೆಗಳಿಗೆ ರೂ.150 ಕೋಟಿ, ಕೇಂದ್ರದ ಹದಿಹರೆಯದ ಗ್ರಂಥಾಲಯ ಇ ಲೈಬ್ರರಿಗೆ ಯೋಜನೆಗೆ ರಾಜ್ಯದ ಪಾಲಾಗಿ ರೂ.132 ಕೋಟಿ, ಕೃಷಿ ಭಾಗ್ಯ ಯೋಜನೆಗೆ ರೂ.100 ಸೇರಿದಂತೆ ತೋಟಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಕಂದಾಯ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬರಾಜು, ವಾಣಿಜ್ಯ ಮತ್ತು ಕೈಗಾರಿಕೆ, ನಗರಾಭಿವೃದ್ಧಿ ಮತ್ತು ವಸತಿ, ಲೋಕೋಪಯೋಗಿ, ನೀರಾವರಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ ಇಲಾಖೆಗಳಿಗೆ ಅನುದಾನ ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು.

ರಾಜ್ಯ ಸರ್ಕಾರ ರೂ.39,000 ಕೋಟಿಗಳ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ನಡುವೆಯು ಆರ್ಥಿಕ ಶಿಸ್ತು ಕಾಪಾಡಿಕೊಂಡು ಬರಲಾಗಿದೆ. ಹಿಂದಿನ ಸರ್ಕಾರಗಳು ಸಹ ಪೂರಕ ಅಂದಾಜು ಮಂಡಿಸಿವೆ. ಸದನವು 2023-24ನೇ ಸಾಲಿನ ಪೂರಕ ಅಂದಾಜಿಗೆ ಅಂಗೀಕಾರ ನೀಡುವಂತೆ ಕೋರಿದರು. ಪೂರಕ ಅಂದಾಜಿನ ಧನವಿಯೋಗಕ್ಕೆ ಅನುವಾಗುವಂತೆ 2023ನೇ ಸಾಲಿನ ಕರ್ನಾಟಕ ಧನವಿನಯೋಗ ಸಂಖ್ಯೆ-4 ವಿಧೇಯಕವನ್ನು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದರು.

ಚರ್ಚೆಯ ನಂತರ ಸದನದಲ್ಲಿ ಪೂರಕ ಅಂದಾಜು ಹಾಗೂ ಧನವಿನಯೋಗ ವಿಧೇಯಕಕ್ಕೆ ಅನುಮೋದನೆ ನೀಡಿ ಅಂಗೀಕರಿಸಲಾಯಿತು. ಈವುಗಳು ಇದೇ ಅಧಿವೇಶನದಲ್ಲಿ ವಿಧಾನ ಪರಿಷತ್ ಅಂಗೀಕಾರಕ್ಕಾಗಿ ಚರ್ಚೆಗೆ ಬರಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...