ರೈತ ಮುಖಂಡ ಬಡಗಲಪುರ ನಾಗೇಂದ್ರರ ಮೇಲೆ ಹಲ್ಲೆಗೆ ಯತ್ನ; ಪ್ರಕರಣ ದಾಖಲು

Date:

ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಸಂಬಂಧ ಮಂಡ್ಯದಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರೈತ ಸಂಘದ ಎರಡು ಬಣಗಳ ನಡುವೆ ಆಗಿರುವ ಮುಖಾಮುಖಿಯ ಸಂಬಂಧ ದೂರು ಪ್ರತಿದೂರು ಸಲ್ಲಿಕೆಯಾಗಿವೆ.

ರೈತ ಮುಖಂಡ ನಾಗೇಂದ್ರ ಅವರ ಮೇಲೆ ಮತ್ತೊಂದು ಬಣದ ಇಂಗಲಗುಪ್ಪೆ ಕೃಷ್ಣ ಅವರು ಹಲ್ಲೆ ನಡೆಸಲು ಯತ್ನಿಸಿರುವುದಾಗಿ ಆರೋಪ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಡಗಲಪುರ ನಾಗೇಂದ್ರ ಅವರು, “ಸಂಘಟನೆಯ ಕೆಲಸದ ನಿಮಿತ್ತ ಮಂಡ್ಯಕ್ಕೆ ಬಂದಿದ್ದೆ. ಜಿಲ್ಲಾಧಿಕಾರಿ ಕಚೇರಿಗೆ ಸ್ನೇಹಿತರೊಂದಿಗೆ ಹೋಗುತ್ತಿದ್ದೆ. ಇಂಗಲಗುಪ್ಪೆ ಕೃಷ್ಣೇಗೌಡರ ಕಾರನ್ನು ಅತಿವೇಗವಾಗಿ ಓಡಿಸಿಕೊಂಡು ಬಂದು ನಾನು ಹೋಗುತ್ತಿದ್ದಲ್ಲಿ ಬ್ರೇಕ್ ಹಾಕಿ ನಿಲ್ಲಿಸಲಾಯಿತು. ಮೂರು ಜನರು ಕಾರಿನಿಂದ ಇಳಿದರು. ಕೃಷ್ಣೇಗೌಡ ಮಾತನಾಡುತ್ತಾ, ‘ಏನ್ ಮಂಡ್ಯ ಜಿಲ್ಲೆಗೆ ಬಂದುಬಿಟ್ಟಿದ್ದೀಯಾ? ನನ್ನ ಮೇಲೆ ಕಂಪ್ಲೇಟ್ ಕೊಟ್ಟಿದ್ರಿ. ನಿಮ್ಮನ್ನೆಲ್ಲ ಹೆಂಗೆ ನೋಡಿಕೊಳ್ಳಬೇಕೋ ನೋಡಿಕೊಳ್ಳುತ್ತೇನೆ. ಮುಂದೆ ನಿನ್ನನ್ನು ಮುಗಿಸುತ್ತೇನೆ’ ಎಂದು ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆಬೆದರಿಕೆ ಹಾಕುವ ಜೊತೆಗೆ ನನ್ನ ಮೇಲೆ ದೌರ್ಜನ್ಯವನ್ನೂ ನಡೆಸಿದ್ದಾರೆ. ನಮ್ಮ ಸ್ನೇಹಿತರೆಲ್ಲ ಓಡಿಬಂದಾಗ, ಜಿಲ್ಲಾಧಿಕಾರಿ ಕಚೇರಿಗೆ ಕೃಷ್ಣ ಅವರು ಓಡಿಹೋದರು. ಈ ಕುರಿತು ದೂರು ನೀಡಿದ್ದೇನೆ. ಐಪಿಸಿ ಸೆಕ್ಷನ್‌ 506, 341, 323, 279 ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದ್ದಾರೆ.

“ರೈತ ಸಂಘದ ಹೆಸರು ಹೇಳಿಕೊಂಡು ಜನರಿಗೆ ಮೋಸ ಮಾಡುತ್ತಿರುವ ವ್ಯಕ್ತಿ ಕೃಷ್ಣ. ಪೋರ್ಜರಿ ದಾಖಲಾತಿ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಸಾಲ ತೆಗೆದಿದ್ದಾರೆ. ಈ ಕುರಿತು ತನಿಖೆಯಾಗಲಿ ಎಂದು ಒತ್ತಾಯಿಸಿದ್ದೆವು. ರೌಡಿ ಶೀಟರ್‌ ಆಗಿರುವ ಇವರು ಹಸಿರು ಟವೆಲ್ ಹಾಕಿಕೊಂಡು ರಕ್ಷಣೆ ಪಡೆಯುತ್ತಿದ್ದಾರೆ” ಎಂದು ದೂರಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಕೃಷ್ಣ, “ರಸ್ತೆ ದುರಸ್ತಿ ಸಂಬಂಧ ಜಿಲ್ಲಾಧಿಕಾರಿಗೆ ಮನವಿ ನೀಡಲು ಹೋಗಿದ್ದಾಗ ಬಡಗಲಪುರ ನಾಗೇಂದ್ರ ಮತ್ತು ಮತ್ತವರ ಬೆಂಬಲಿಗರು ಬೆದರಿಕೆ ಒಡ್ಡಿದರು. ನಂತರ ಕಾರು ತಡೆದು ಹಲ್ಲೆಗೆ ಯತ್ನಿಸಿದರು. ಘಟನೆ ವಿಡಿಯೊ ಮಾಡುತ್ತಿದ್ದ ಬೆಂಬಲಿಗರ ಮೇಲೂ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಆರೋಪ ಪ್ರತ್ಯಾರೋಪ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...