ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಸ್ಥಾಪನೆ

Date:

ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ಸ್ಥಾಪಿಸಲಾಗಿರುವ ಕಲಾಲೋಕ ಮಳಿಗೆಯನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.

ಕೈಗಾರಿಕಾ ಇಲಾಖೆಯ ಮೂಲಕ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಸ್ಥಾಪಿಸಲಾಗಿದೆ. ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಕಲಾಮಳಿಗೆಯನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ ಕ್ಷಣವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನವು ಜನನಿಬಿಡತೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ಪ್ರತೀ ದಿನವೂ ಇಲ್ಲಿ ಹತ್ತಾರು ಸಾವಿರ ಪ್ರಯಾಣಿಕರು ಬರುತ್ತಿರುತ್ತಾರೆ. ಇಂಥವರಿಗೆ ಇಲ್ಲಿಗೆ ಬಂದ ತಕ್ಷಣವೇ ಕರ್ನಾಟಕದ ಅಭಿಮಾನದ ಪಯಣ ಅರ್ಥವಾಗಬೇಕು ಎನ್ನುವ ಉದ್ದೇಶದಿಂದ ಕಲಾಲೋಕ ಮಳಿಗೆ ನಿರ್ಮಿಸಲಾಗಿದೆ. ಇದರ ಮೂಲಕ ಕರ್ನಾಟಕದ ಹೆಮ್ಮಯ ಉತ್ಪನ್ನಗಳಿಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ, ಬ್ರ್ಯಾಂಡಿಂಗ್ ಮತ್ತು ಮಾರಾಟ ಸಾಧಿಸಲಾಗುವುದು” ಎಂದು ತಿಳಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಎಂ ಬಿ ಪಾಟೀಲ್ ಮಾತನಾಡಿ, “ಟರ್ಮಿನಲ್-2ರ ಸಮೀಪ ನಿರ್ಮಿತವಾಗಿರುವ ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಪಾರಂಪರಿಕ ಉತ್ಪನ್ನಗಳಾದ ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ, ಅಗರಬತ್ತಿ, ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಲಿಡ್ಕರ್ ಉತ್ಪನ್ನಗಳು, ಬಗೆಬಗೆಯ ಪರಿಮಳವಿರುವ ಕಾಫಿಪುಡಿ ಮತ್ತು ಪಾನೀಯ, ಕೈಮಗ್ಗದ ಉತ್ಪನ್ನಗಳು, ಇಳಕಲ್ ಸೀರೆ, ಲಂಬಾಣಿ ಉಡುಪು, ಗಂಧದ ಕಲಾಕೃತಿ, ಬಿದರಿ ಕಲಾಕೃತಿ, ಮೈಸೂರು ಶೈಲಿಯ ಕಲಾಕೃತಿಗಳು, ಮುಂತಾದವು ಸಿಗಲಿವೆ. ಒಟ್ಟಾರೆಯಾಗಿ ಜಿ.ಐ. ಮಾನ್ಯತೆ ಹೊಂದಿರುವ ರಾಜ್ಯದ 45 ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಎರಡೂ ಈ ಮಳಿಗೆಯಲ್ಲಿ ನಡೆಯಲಿದೆ” ಎಂದು ಹೇಳಿದರು.

“ರಾಜ್ಯವೇ ಹೆಮ್ಮೆಪಡುವಂತಹ ಪಾರಂಪರಿಕ ಮತ್ತು ಭೌಗೋಳಿಕ ವಿಶಿಷ್ಟತೆಯ ಮನ್ನಣೆ ಹೊಂದಿರುವ ಉತ್ಪನ್ನಗಳನ್ನು ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಮಳಿಗೆ ಆರಂಭದ ಆಶಯವಾಗಿದೆ. ಇದಕ್ಕೆ ಸರಕಾರಿ ಸ್ವಾಮ್ಯದ ಕೆ.ಎಸ್.ಡಿ.ಎಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಯಮಿತ, ಕೆಎಸ್ಐಸಿ, ಕಾಫಿ ಬೋರ್ಡ್ ಮತ್ತು ಲಿಡ್ಕರ್ ಮುಂತಾದ ಉದ್ದಿಮೆಗಳು ಕೈಜೋಡಿಸಿವೆ. ವಿಮಾನ ನಿಲ್ದಾಣಕ್ಕೆ ಬರುವವರಿಗೆ ಮತ್ತು ಇಲ್ಲಿಂದ ಹೋಗುವವರಿಗೆ ಒಂದೇ ತಾಣದಲ್ಲಿ ಕರ್ನಾಟಕದ ಅಸ್ಮಿತೆ ಇಲ್ಲಿ ಅನುಭವಕ್ಕೆ ಸಿಗಲಿದೆ” ಎಂದು ಸಚಿವರು ಬಣ್ಣಿಸಿದರು.

“ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಕಲಾಲೋಕ ಮಳಿಗೆಗೆ ಟರ್ಮಿನಲ್ -2ರ ಡೊಮೆಸ್ಟಿಕ್ ಬೇನಲ್ಲಿ 132 ಚ.ಮೀ. ಜಾಗವನ್ನು ಬಾಡಿಗೆಗೆ ಒದಗಿಸಿದೆ. ಟರ್ಮಿನಲ್-2ರಲ್ಲೇ ಅಂತಾರಾಷ್ಟ್ರೀಯ ಪ್ರಯಾಣಿಕರ ನಿರ್ಗಮನ ವಲಯದಲ್ಲಿ 140 ಚ.ಮೀ. ಜಾಗದಲ್ಲಿ ಇಂತಹುದೇ ಮತ್ತೊಂದು ಮಳಿಗೆ ಆರಂಭಿಸಲಾಗುವುದು. ಮಳಿಗೆಯನ್ನು ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಪಡಿಯಚ್ಚಿನಂತೆ ಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಇದರ ಹಿಂದೆ ದೂರದೃಷ್ಟಿ ಇದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ಜವಳಿ ಆಯುಕ್ತರಾದ ಜ್ಯೋತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಪಿ.ಬಸವರಾಜು ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...