ಬೆಂಗಳೂರು | ಸಜ್ಜನರ ಸಲ್ಲಾಪ – 3: ತಿಂಗಳ ಅತಿಥಿಯಾಗಿ ಬಿ.ಟಿ.ಲಲಿತಾನಾಯಕ್

Date:

ಬಾಲ್ಯದ ದಿನಗಳಲ್ಲಿಯೇ ವ್ಯಾಸಂಗದಲ್ಲಿ ಹೆಚ್ಚು ಆಸಕ್ತಿಯಿಂದ ತೊಡಗಿಸಿಕೊಂಡಿದ್ದೆ. ಸಾಂಸಾರಿಕ ತೊಂದರೆಯಿಂದ 8ನೇ ತರಗತಿಗೆ ಶಾಲೆ ಬಿಟ್ಟು ಸಂಸಾರದ ಕೆಲ ಸಂಗತಿಗಳನ್ನೇ ಬರಹ ರೂಪದಲ್ಲಿ ತಂದೆ. ಬಹುಮುಖ್ಯವಾಗಿ ವೈಚಾರಿಕ ನೆಲಗಟ್ಟಿನಲ್ಲಿ ಚಿಂತಿಸುತ್ತಾ ಈ ಕುರಿತಾಗಿ ಹೆಚ್ಚು ಬರಹಗಳನ್ನು ಬರೆಯಲು ಉತ್ಸುಕಳಾದೆ ಎಂದು ಹಿರಿಯ ಲೇಖಕಿ ಡಾ.ಬಿ.ಟಿ ಲಲಿತಾನಾಯಕ್‌ ತಮ್ಮ ಬಾಲ್ಯವನ್ನು ನೆನೆಸಿಕೊಂಡರು.

ಅವರು ಮಂಗಳವಾರ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಕರ್ನಾಟಕ ಸರ್ಕಾರದ ವತಿಯಿಂದ ಮಹಿಳಾ ವಿಶ್ರಾಂತಿ ಕೊಠಡಿ, ರವೀಂದ್ರ ಕಲಾಕ್ಷೇತ್ರದಲ್ಲಿ ಕಳತಾವೂರ್‌ ಮಳಾವ್‌ -03 (ಸಜ್ಜನರ ಸಲ್ಲಾಪ -03) ಮೀನಾರೋ ಪಾಮಣೋ(ತಿಂಗಳ ಅತಿಥಿ) ಸಮಾರಂಭದಲ್ಲಿ ತಿಂಗಳ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ನನ್ನ ಬರಹಕ್ಕೆ ನನ್ನ ತಂದೆಯ ಒತ್ತಾಸೆ ಇತ್ತು‌ ಹಾಗೂ ಮೊದಲ ವೇದಿಕೆಯಾಗಿದ್ದು, ಲಂಕೇಶ್‌ನಂತಹ ಪತ್ರಿಕೆಗಳನ್ನು ಮರೆಯುವಂತಿಲ್ಲ ಎಂದು ತಿಳಿಸಿದರು.

ರಾಜಕೀಯ ಕ್ಷೇತ್ರಕ್ಕೆ ಬಂದು ಕೆಲವರ ಪಿತೂರಿಗಳಿಂದ ಅಧಿಕಾರ ಕಳೆದುಕೊಂಡೆ. ನನಗೆ ಆದರ್ಶವಾಗಿದ್ದವರು ಬುದ್ಧ, ಬಸವ, ಗಾಂಧಿ ಹಾಗೂ ಅಂಬೇಡ್ಕರ್‌ ಎಂಬುದನ್ನು ಹೆಮ್ಮೆಯಿಂದ ಹೇಳುವೆ. ನಜೀರ್‌ ಸಾಬ್ ನನ್ನನ್ನು ಎಂ.ಎಲ್.ಸಿ ಮಾಡಲು ಕಾರಣರಾದರು, ಆ ನಂತರ ಸಚಿವೆಯಾದೆ. ಈ ಸಂದರ್ಭದಲ್ಲೂ ಕೂಡ ನನಗೆ ಸಾಹಿತ್ಯ ರಚನೆ ಬಗ್ಗೆಯೇ ಹೆಚ್ಚಿನ ತುಡಿತವಿತ್ತು. ಜೊತೆಗೆ ನನ್ನ ಸತ್ಯನಿಷ್ಠೆ, ಸರಳ ಜೀವನ ಇವುಗಳು ಸಚಿವೆಯಾಗಿ ಹೆಚ್ಚು ದಿನ ಮುಂದುವರೆಯದಂತೆ ಮಾಡಿದವು. ಆದರೂ ಧೃತಿಗೆಡಲಿಲ್ಲ, ಹಲವು ಬಗೆಯಲ್ಲಿ ಸಮಾಜ ಸೇವೆಗೆ ತೊಡಗಿಸಿ ಕೊಂಡಿರುವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್ ಗೋವಿಂದಸ್ವಾಮಿ ಮಾತನಾಡಿ, ಕಳೆದ ಆರು ತಿಂಗಳಿಂದ ಅಕಾಡೆಮಿಯು ನಿರಂತರ 28ಕ್ಕೂ ಹೆಚ್ಚಿನ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ನಡೆಸಿದ ಕಾರ್ಯ ಚಟುವಟಿಕೆ ವಿವರಿಸುತ್ತಾ ಪ್ರಸ್ತುತ ಬಂಜಾರ ವಿಶ್ವಕೋಶ (ಎನ್ಸೈಕ್ಲೋಪೀಡಿಯಾ) ರಚಿಸುವ ಅಕಾಡೆಮಿ ತೊಡಗಿದ್ದು ನಾಡೋಜ ಪ್ರೋ. ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಬಂಜಾರ ಸಮುದಾಯದ ಪ್ರಥಮ ಸಾಹಿತಿ ಹಾಗೂ ಕಲಾವಿದರ ಬಗ್ಗೆ ಸಾಕ್ಷ್ಯ ಚಿತ್ರ ನಿರ್ಮಾಣವಾಗುತ್ತಿವೆ. ರಾಜ್ಯದ ಬಹುತೇಕ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಬಂಜಾರ ಯುವಕ ಯುವತಿಯರಿಗೆ ಕಸೂತಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ವಿಜಯಪುರದಲ್ಲಿ ಹತ್ತು ದಿನಗಳ ಬಂಜಾರ ಆಭರಣ ತಯಾರಿಕೆ ಕಾರ್ಯಾಗಾರ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ ಪ್ರತಿ ತಿಂಗಳು ನಾಡಿನ ಸಾಹಿತಿಗಳು ಚಿಂತಕರು, ಸಮುದಾಯದ ಎಲೆಮರೆ ಕಾಯಿಗಳು ಮತ್ತು ಗಣ್ಯ ವ್ಯಕ್ತಿಗಳನ್ನು ಕರೆಸಿ ತಿಂಗಳ ಅತಿಥಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇವುಗಳ ಜೊತೆಗೆ ಅಕಾಡೆಮಿಯು ಬಂಜಾರ ಸಮುದಾಯದ ಸಾಧಕರನ್ನು ಗುರುತಿಸಿ ಅವರಿಗೆ ಪ್ರಶಸ್ತಿ ಗೌರವಗಳನ್ನು ನೀಡುವ, ಕೊಡಿಸುವ ಕೆಲಸವನ್ನು ಮಾಡುತ್ತಿದೆ. ಬಂಜಾರ ಮ್ಯೂಸಿಯಂ ಹಾಗೂ ಮಾದರಿ ತಾಂಡ ಅಲ್ಲದೆ ಲಿಪಿ ಇಲ್ಲದ ಬಂಜಾರ ಭಾಷೆಯನ್ನು ಆಯಾ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿಯೂ ಮತ್ತು ರಾಷ್ಟ್ರಮಟ್ಟದಲ್ಲಿ ನಾಗರೀ ಲಿಪಿಯಲ್ಲಿ ಬರೆಯುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಆಂಗ್ಲ ಭಾಷೆ ಬಳಕೆ ಇದೆ. ಇದನ್ನೇ ಅನೇಕ ಬಂಜಾರ ಭಾಷಾ ತಜ್ಞರು ಅಖೈರು ಗೊಳಿಸಲು ತಮ್ಮ ಸಮರ್ಥನೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ಅಕಾಡೆಮಿ ಹೆಚ್ಚಿನ ಸಂಶೋಧನೆ ಮಾಡಲಿದೆ ಎಂದರು.

ದಿನೇಶ್‌ ಅಮಿನ್‌ ಮಟ್ಟು ಮಾತನಾಡಿ, ಲಲಿತನಾಯಕ್‌ ಸಾಹಿತಿಯಾಗಿ ಗುರುತಿಸಿಕೊಂಡು ಆನಂತರ ರಾಜಕಾರಣಿಯಾದವರು. ಅನುವಾದಕಿ ಕೂಡ ಆಗಿದ್ದರು. ಅವರು ಒಬ್ಬರು ರಾಜಕಾರಣಿ, ಸಾಹಿತಿ, ಪತ್ರಕರ್ತೆ ಅಂತ ತಿಳಿದುಕೊಂಡರೆ ಅಷ್ಟೇ ಅಲ್ಲ, ಎಲ್ಲವನ್ನು ಒಳಗೊಂಡು ಸಾರ್ವಜನಿಕ ಹಿತಕ್ಕಾಗಿ ಯಾವ ಯಾವ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆಯೋ ಆ ಎಲ್ಲಾ ಕ್ಷೇತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ. ಅವರು ಮೊದಲ ಬಾರಿ ಸಚಿವರಾಗಿದ್ದಾಗ ಬಹಳ ದೊಡ್ಡ ಸಂಚು ನಡೆದು ಅದನ್ನು ಕಳೆದುಕೊಳ್ಳಬೇಕಾಯಿತು ಎಂದರು.

ಸಮಾರಂಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ ಕೆ. ಎಲ್‌. ಮುಕುಂದ್‌ ರಾಜ್‌, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಾನಸ, ಶಿಕ್ಷಣ ತಜ್ಞ ಪ್ರೊ. ಪಾಂಡುನಾಯಕ್‌, ಪತ್ರಕರ್ತೆ ಮಂಜು ಶ್ರೀ ಅಕಾಡೆಮಿಯ ಸದಸ್ಯ ಸಂಚಾಲಕ ಡಾ. ಉತ್ತಮ್‌ ರಾಥೋಡ್ ಹಾಗೂ ಇತರೆ ಸದಸ್ಯರು, ದಲಿತ ಕಾರ್ಮಿಕ ಮುಖಂಡರಾದ ಗವಿಕುಮಾರ್‌, ಸಾಹಿತಿ ಬಾಲುನಾಯಕ್‌ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...