ರೈತ ಸಂಘದ ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಪುನರ್‌ ಆಯ್ಕೆ

Date:

ಕರ್ನಾಟಕ ರಾಜ್ಯ ರೈತ ಸಂಘದ (ಕೆಆರ್‌ಆರ್‌ಎಸ್‌) ರಾಜ್ಯಾಧ್ಯಕ್ಷರಾಗಿ ಬಡಗಲಪುರ ನಾಗೇಂದ್ರ ಅವರು ಪುನರ್‌ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಚಾಮರಸ ಮೀಲೀ ಪಾಟೀಲ್ ಮರುಆಯ್ಕೆಯಾಗಿದ್ದಾರೆ ಎಂದು ಕೆಆರ್‌ಆರ್‌ಎಸ್‌ ತಿಳಿಸಿದೆ.

ಚಿತ್ರದುರ್ಗದಲ್ಲಿ ಭಾನುವಾರ ನಡೆದ ರೈತ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ರೈತ ಸಂಘದ ವಿವಿಧ ಹುದ್ದೆಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ರೈತ ಸಂಘವನ್ನು ಮುನ್ನಡೆಸುವ ಜವಾಬ್ದಾರಿಯನ್ನು ಮತ್ತೊಮ್ಮೆ ಬಡಗಲಪುರ ನಾಗೇಂದ್ರ ಅವರಿಗೆ ನೀಡಲಾಗಿದೆ.

ರೈತ ಸಂಘದ ವರಿಷ್ಠ ಮಂಡಳಿಗೆ ಸುನೀತಾ ಪುಟ್ಟಣ್ಣಯ್ಯ ಅವರನ್ನು ಆಯ್ಕೆ ಮಾಡಲಾಗಿದ್ದು, ಪ್ರಧಾನ ಕಾರ್ಯದರ್ಶಿಗಳಾಗಿ ರವಿಕಿರಣ್‌ ಪುಣಚ ಮತ್ತು ಎನ್‌.ಡಿ ವಸಂತ್‌ಕುಮಾರ್‌ ಆಯ್ಕೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತ ಸಂಘದ ಕಾರ್ಯದರ್ಶಿಗಳಾಗಿ ಜೆ.ಎಂ ವೀರಸಂಗಯ್ಯ, ಎ ಗೋವಿಂದ ರಾಜು ಹಾಗೂ ಎ.ಎಂ ಮಹೇಶ್ ಪ್ರಭು ಆಯ್ಕೆಯಾಗಿದ್ದಾರೆ. ಸಂಘಟನೆಯ ಉಪಾಧ್ಯಕ್ಷರಾಗಿ ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಕೆ.ಪಿ ಬೂತಯ್ಯ, ಶಿವಾನಂದ ಕುಗ್ವೆ, ಕೆ ಮಲ್ಲಯ್ಯ, ಎ.ಎಲ್‌ ಕೆಂಪೂಗೌಡ, ಮುತ್ತಪ್ಪ ಕೋಮಾರಿ, ಗಣಚಾರಿ, ಮಂಜುಳ ಎಸ್‌ ಅಕ್ಕಿ, ಸುರೇಶ್‌ಬಾಬು, ಅಮರಣ್ಣ ಗುಡಿಯಾಳ್‌, ದೊಡ್ಡಬಸವನಗೌಡ ಬಲ್ಲಟಗಿ, ನಾಗಪ್ಪ ಉಚಿಡಿ ಹಾಗೂ ಖಾಸಿಂ ಆಲಿ ಆಯ್ಕೆಯಾಗಿದ್ದಾರೆ.

ಸಂಘಟನೆಯ ಕಾರ್ಯದರ್ಶಿಗಳಾಗಿ ಗೋಪಾಲ್ ಪಾಲೇಗೌಡ, ಅರುಣ್‌ಕುಮಾರ್ ಕುರುಡಿ, ಸುಗುರಯ್ಯ ಆರ್‌.ಎಡ್ ಮಠ, ಸಂಘಟನಾ ಕಾರ್ಯದರ್ಶಿಗಳಾಗಿ ಗೋಣಿ ಬಸಪ್ಪ, ಶಿವಾನಂದ ಇಟಗಿ ಹಾಗೂ ಖಜಾಂಚಿಯಾಗಿ ಪ್ರಸನ್ನ ಎಚ್‌ ಗೌಡ ಆಯ್ಕೆಗೊಂಡಿದ್ದಾರೆ.

ರೈತ ಸಂಘದ ಮೈಸೂರು ವಿಭಾಗದ ಉಪಾಧ್ಯಕ್ಷರಾಗಿ ಬೋರಾಪುರ ಶಂಕರೇಗೌಡ, ಕಾರ್ಯದರ್ಶಿಯಾಗಿ ಸಿದ್ದರಾಜು ಜ್ಯೋತಿಗೌಡನ ಪುರ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹೊಸಕೋಟೆ ಬಸವರಾಜು ಆಯ್ಕೆಯಾಗಿದ್ದಾರೆ.

ಬೆಂಗಳೂರು ವಿಭಾಗಕ್ಕೆ ಸಂಘಟನೆಯ ಉಪಾಧ್ಯಕ್ಷರಾಗಿ ಲಕ್ಷ್ಮಿನಾರಾಯ, ಕಾರ್ಯದರ್ಶಿಯಾಗಿ ನಾಯಂಡಳ್ಳಿ ಚಂದ್ರಶೇಖರ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ದೊಡ್ಡಮಾಳಿಗಯ್ಯ ಆಯ್ಕೆಯಾಗಿದ್ದಾರೆ.  ಕಲಬುರಗಿ ವಿಭಾಗಕ್ಕೆ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಸತ್ಯೆ, ಕಾರ್ಯದರ್ಶಿಯಾಗಿ ಎಂ.ಎಲ್‌.ಕೆ ನಾಯ್ದು, ಸಂಘಟನಾ ಕಾರ್ಯದರ್ಶಿಯಾಗಿ ಯಂಕಪ್ಪ ಕಾರುಬಾರಿ, ಮಹಂತೇಶ್ ಮಡಿವಾಳ ಆಯ್ಕೆಗೊಂಡಿದ್ದಾರೆ.

ಮಧ್ಯ ಕರ್ನಾಟಕ ವಿಭಾಗಕ್ಕೆ ಉಪಾಧ್ಯಕ್ಷರಾಗಿ ವರಕೆರಪ್ಪ, ಸಂಘಟನಾ ಕಾರ್ಯದರ್ಶಿ ಜಯಪ್ಪಗೌಡ ಆಯ್ಕೆಯಾಗಿದ್ದರೆ, ಬೆಳಗಾವಿ ವಿಭಾಗಕ್ಕೆ ಉಪಾಧ್ಯಕ್ಷರಾಗಿ ಬಸವನಗೌಡ ದರ್ಮಗೊಂಡ, ಕಾರ್ಯದರ್ಶಿಯಾಗಿ ಎಫ್‌ಡಿಎಂ ನಗಾಪ ಆಯ್ಕೆಯಾಗಿದ್ದಾರೆ.

ರೈತ ಸಂಘದ ಮಹಿಳಾ ಘಟಕದ ರಾಜ್ಯಾಧ್ಯಕ್ಷರಾಗಿ ನಾಗರತ್ನಮ್ಮ ವಿ ಪಾಟೀಲ್ ಆಯ್ಕೆಯಾಗಿದ್ದಾರೆ. ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇತ್ರಾವತಿ, ರಮ್ಯ ರಾಮಣ್ಣ ಆಯ್ಕೆಗೊಂಡಿದ್ದಾರೆ. ಕಾರ್ಯಾಧ್ಯಕ್ಷರಾಗಿ ಯದುಶೈಲ ಸಂಪತ್, ಉಪಾಧ್ಯಕ್ಷರಾಗಿ ಶಾಂತಮ್ಮ ಬಾಯಿ, ಪ್ರೇಮ ಕಂದಗಾಲ ಹಾಗೂ ಕಾರ್ಯದರ್ಶಿಗಳಾಗಿ ಮಮತ ಮತ್ತು ರತ್ನಮ್ಮ  ಆಯ್ಕೆಯಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...