ಬೆಂಗಳೂರು | ಉಪನಗರ ರೈಲು ಕಾರಿಡಾರ್‌ಗಾಗಿ 2,364 ಮರಗಳಿಗೆ ಕೊಡಲಿ

Date:

ಬೆಂಗಳೂರಿನ ಉತ್ತರ ಭಾಗದಲ್ಲಿ ಉಪನಗರ ರೈಲು ಯೋಜನೆಗಾಗಿ (ಕಾರಿಡಾರ್4) ಸುಮಾರು 2,364 ಮರಗಳನ್ನು ಕಡಿಯಲು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ-ರೈಡ್) ಪ್ರಾಸ್ತಾವನೆ ಇಟ್ಟಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಎರಡು ವರ್ಷಗಳ ಹಿಂದೆ ಕೆ-ರೈಡ್ ಸಮೀಕ್ಷೆ ನಡೆಸಿದ್ದು, ರೈಲು ಯೋಜನೆ ಅನುಷ್ಠಾನಕ್ಕಾಗಿ ರೈಲು ಮಾರ್ಗಕ್ಕೆ 2,364 ಮರಗಳು ಅಡ್ಡಿಯಾಗಿವೆ ಎಂದು ಗುರುತಿಸಿದೆ. ಈ ಮರಗಳು ನೈಋತ್ಯ ರೈಲ್ವೆಗೆ ಸೇರಿದ ಸರ್ಕಾರಿ ಭೂಮಿ ಮತ್ತು ಖಾಸಗಿ ಆಸ್ತಿಗಳಲ್ಲಿ ಇವೆ ಎಂದು ಕಂಪನಿ ಹೇಳಿದೆ.

2,364 ಮರಗಳ ಪೈಕಿ ನೈರುತ್ಯ ರೈಲ್ವೆ ಮತ್ತು ಖಾಸಗಿ ಭೂಮಾಲೀಕರು ಈಗಾಗಲೇ ಚೆನ್ನಸಂದ್ರ ಮತ್ತು ಮುದ್ದೇನಹಳ್ಳಿ ನಿಲ್ದಾಣಗಳ ನಡುವೆ 226 ಮರಗಳನ್ನು ಕಡಿದಿದ್ದಾರೆ. ಹೆಚ್ಚುವರಿಯಾಗಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್‌ಎಸ್‌ಬಿ) ಒಳಚರಂಡಿ ಕೆಲಸಕ್ಕಾಗಿ 24 ಮರಗಳನ್ನು ಕತ್ತರಿಸಿದೆ ಎಂದು ಕಂಪನಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಿಡಾರ್-4ರ ಉದ್ದೇಶಿತ ರೈಲು ಯೋಜನೆಯು ಕಾರ್ಮೆಲಾರಂ, ಬೆಳ್ಳಂದೂರು, ಮಾರತಹಳ್ಳಿ, ದೊಡ್ಡನೆಕ್ಕುಂದಿ, ಕಗ್ಗದಾಸಪುರ, ಬೆನ್ನಿಗನಹಳ್ಳಿ, ಚನ್ನಸಂದ್ರ, ಹೊರಮಾವು, ಹೆಣ್ಣೂರು, ಥಣಿಸಂದ್ರ, ಹೆಗಡೆ ನಗರ ಮತ್ತು ಜಕ್ಕೂರು ಮುಂತಾದ ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುತ್ತದೆ.

ಕತ್ತರಿಸಲು ಉದ್ದೇಶಿಸಲಾದ ಮರಗಳಲ್ಲಿ ವಿವಿಧ ಜಾತಿ ಮರಗಳಿದ್ದು, 30% ನೀಲಗಿರಿ ಮರಗಳಾಗಿವೆ. ಉಳಿದಂತೆ ತೆಂಗು, ಮಾವು, ಹಲಸು, ಪೊಂಗಮಿಯಾ, ಬೇವು, ಮಹೋಗಾನಿ, ರಾಯಲ್ ಪಾಮ್, ಜಾಮೂನ್, ಸುಬಾಬುಲ್, ಸಂಪಿಗೆ, ಸಿಲ್ವರ್ ಓಕ್, ಹುಣಸೆಹಣ್ಣು, ಫಿಕಸ್ ಮರಗಳು, ಅಶೋಕ ಮರಗಳು ಮತ್ತು ಇತರ ಸ್ಥಳೀಯ ಹಣ್ಣಿನ ಮರಗಳಿವೆ.

ಸಾರ್ವಜನಿಕರ ಆಕ್ಷೇಪಣೆಗಳನ್ನು ವೃಕ್ಷ ತಜ್ಞರ ಸಮಿತಿ ಪರಿಶೀಲಿಸಲಿದೆ. ಆಕ್ಷೇಪಣೆಗಳ ಪರಿಶೀಲನೆ ನಂತರ, ಮರಗಳ ಸ್ಥಳಾಂತರ ಅಥವಾ ಕಡಿಯುವಿಕೆಗೆ ಸಂಬಂಧ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...