ಬೆಂಗಳೂರು | ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ; ಪಶ್ಚಿಮ ಬಂಗಾಳ ಮೂಲದ ಯುವಕನ ಬಂಧನ

Date:

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್‌ನಲ್ಲಿ ಬೆಂಗಳೂರು ಹಾಗೂ ಕನ್ನಡಿಗರ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಯುವಕನನ್ನು ನಗರದ ಕೊಡಿಗೇಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ನಿಲೋಯ್ ಮಂಡಲ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತ “ನೇಟಿವ್ ಬೆಂಗಳೂರಿಯನ್ಸ್” ಎಂಬ ಪೇಜ್ ಒಂದರಲ್ಲಿ “ಕರ್ನಾಟಕದ ಕುರಿತು ಕೆಟ್ಟದಾಗಿ ಅವಹೇಳನ ಮಾಡಿದ್ದಲ್ಲದೇ, ಉತ್ತರ ಭಾರತದವರು ಬೆಂಗಳೂರಿನಿಂದ ಹೊರಟು ಹೋದರೆ ಬೆಂಗಳೂರಿಗರು ಕಾಡು ಜನರಿಗೆ ಸಮವಾಗುತ್ತಾರೆ” ಎಂದು ಅತಿರೇಕವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದ.

ಕನ್ನಡ ಅತ್ಯಂತ ಕೆಟ್ಟ ಭಾಷೆ ಎಂದು ಅವಹೇಳನ ಮಾಡಿದ್ದ. ಈ ಬಗ್ಗೆ ಅನೇಕ ಕನ್ನಡಪರ ಸಂಘಟನೆಗಳು, ಕಾರ್ಯಕರ್ತರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ, ಆತ ಕೆಲಸ ಮಾಡುತ್ತಿದ್ದ ಕಂಪನಿ ಹಾಗೂ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯ ಕೀಳು ಅಭಿಪ್ರಾಯದ ವಿರುದ್ಧ ವಿಷಾದ ವ್ಯಕ್ತಪಡಿಸಿದ್ದ ಕಂಪನಿ ಆತನ ವಿರುದ್ಧ ಸೂಕ್ತ ಕ್ರಮದ ಭರವಸೆ ನೀಡಿತ್ತು. ಮತ್ತೊಂದೆಡೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದ ಕೊಡಿಗೆಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಆತನ ಕಂಪನಿ ಪ್ರತಿಕ್ರಿಯೆ ನೀಡಿದ್ದು, “ನಮಸ್ಕಾರ, ನಮ್ಮ ಉದ್ಯೋಗಿಗಳಲ್ಲಿ ಒಬ್ಬರಾದ ನಿಲೋಯ್ ಮಂಡಲ್ ಬಗ್ಗೆ ನೀವು ನೀಡಿರುವ ದೂರಿನ ಕುರಿತು ನಾವು ತಿಳಿಸಲು ಬಯಸುತ್ತೇವೆ. ನಾವು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಜತೆಗೆ ನೋವುಂಟು ಮಾಡಿರುವ ಟೀಕೆಗಳಿಗೆ ಅಥವಾ ಭಾವನೆಗಳಿಗೆ ನಾವು ತೀವ್ರವಾಗಿ ವಿಷಾದಿಸುತ್ತೇವೆ. ನಿಲೋಯ್ ಮಂಡಲ್ ಹೇಳಿಕೆ ಬಗ್ಗೆ ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಹೆಚ್ಚಿನ ತನಿಖೆಗಾಗಿ ನಾವು ಈ ವಿಷಯವನ್ನು ಸೂಕ್ತ ಸೈಬರ್ ಕ್ರೈಮ್ ಅಧಿಕಾರಿಗಳಿಗೆ ವರದಿ ಮಾಡುತ್ತಿದ್ದೇವೆ. ನಮ್ಮ ಆಂತರಿಕ ತನಿಖೆಯ ಫಲಿತಾಂಶ ಏನೇ ಇರಲಿ, ಈ ಘಟನೆಯಿಂದ ಯಾವುದೇ ಭಾವನೆಗಳಿಗೆ ಧಕ್ಕೆಯುಂಟಾಗಿದ್ದರೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸೈಬರ್ ಕ್ರೈಮ್ ವಿಭಾಗದ ಸಲಹೆಯಂತೆ ನಾವು ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳು ಮತ್ತು ತನಿಖೆಯ ಫಲಿತಾಂಶಗಳ ಕುರಿತು ನಾವು ನಿಮಗೆ ತಿಳಿಸುತ್ತೇವೆ” ಎಂದು ಹೇಳಿದ್ದಾರೆ.

“ಬಂಧಿತ ವ್ಯಕ್ತಿ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಈ ಮೂಲಕವಾದರೂ ಪರಭಾಷಿಕರು ನಮ್ಮ ನಾಡು, ನುಡಿ, ಜನತೆಯ ವಿಚಾರಕ್ಕೆ ಬರುವುದನ್ನು ನಿಲ್ಲಿಸಬಹುದು ಎಂದು ಕನ್ನಡ ಪರ ಸಂಘಟನೆಗಳು, ಕಾರ್ಯಕರ್ತರ ಆಗ್ರಹವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...