2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

Date:

  • ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಡಿಸಿಎಂ ಡಿ ಕೆ ಶಿವಕುಮಾರ್ ಆಯ್ಕೆ
  • ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿಗೆ ಶಾಮನೂರು ಶಿವಶಂಕರಪ್ಪ ಆಯ್ಕೆ
  • ಸಂತೊಷ್ ಲಾಡ್, ಡಾ. ಕೆ. ಗೋವಿಂದರಾಜುಗೆ ಪ್ರೆಸ್‌ಕ್ಲಬ್ ಪ್ರಶಸ್ತಿ
  • 29 ಸಾಧಕ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’

ಪ್ರೆಸ್‌ಕ್ಲಬ್ ಆಫ್ ಬೆಂಗಳೂರು 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ಕ್ಲಬ್ ಸದಸ್ಯರು ಆಯ್ಕೆ ಮಾಡಿದ್ದಾರೆ.

ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ.

ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೇಟ್ ಬಾಲ್ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಹಾಗೆಯೇ ಮಾಧ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಸಾಧಕ ಪತ್ರಕರ್ತರಿಗೆ ‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ. 31ರಂದು ಬೆಳಗ್ಗೆ 11.30ಕ್ಕೆ ಪ್ರೆಸ್‌ಕ್ಲಬ್ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರೆಸ್‌ಕ್ಲಬ್ ಆಫ್ ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ.

‘ಪ್ರೆಸ್‌ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿ’ ಪಡೆದವರು

1. ಸದಾಶಿವ ಶೆಣೈ. ಕೆ

2. ಆರ್. ಶಂಕರ್

3. ಡಾ. ಕೂಡ್ಲಿ ಗುರುರಾಜ್

4. ಕೆ.ಕೆ ಮೂರ್ತಿ (ಕಂ.ಕ ಮೂರ್ತಿ)

5. ನಾಗರಾಜ. ಎಂ (ಪ್ರಜಾವಾಣಿ)

6. ರೂಪಾ ಆರ್. ರಾವ್

7. ಸತೀಶ್‌ಕುಮಾರ್ ಬಿ.ಎಸ್

8. ರಾಕೇಶ್ ಪ್ರಕಾಶ್ (ಟೈಮ್ಸ್ ಆಫ್ ಇಂಡಿಯಾ)

9. ರಮೇಶ್ ಬಿ.ಎನ್ (ಅಭಿಮನ್ಯು)

10. ಕಿರಣ್ ಹೆಚ್.ವಿ

11. ಚನ್ನಕೃಷ್ಣ ಪಿ.ಕೆ

12. ವಿಜಯ್‌ಕುಮಾರ್ ಮಲಗಿಹಾಳ್

13. ಮನೋಜ್‌ಕುಮಾರ್

14. ಮುತ್ತು. ಪಿ

15. ಶ್ರೀಕಂಠ ಶರ್ಮ. ಆರ್

16. ಸಿದ್ದೇಶ್‌ಕುಮಾರ್ ಹೆಚ್.ಪಿ

17. ಅಫ್ಶಾನ್ ಯಾಸ್ಮಿನ್

18. ಚಂದ್ರಶೇಖರ್. ಎಂ

19. ಭಾಸ್ಕರ್ ಕೆ.ಎಸ್

20. ಸುಭಾಷ್ ಹೂಗಾರ್

21. ಪ್ರಸನ್ನಕುಮಾರ್ ಲೂಯಿಸ್

22. ಶಂಕರೇಗೌಡ ಹೆಚ್.ಡಿ

23. ಜನಾರ್ಧನಾಚಾರಿ ಕೆ.ಎಸ್

24. ಲಿಂಗರಾಜು ಡಿ. ನೊಣವಿನಕೆರೆ

25. ಮೋಹನ್‌ರಾವ್ ಸಾವಂತ್. ಜಿ

26. ಅನಂತರಾಮು ಸಂಕ್ಲಾಪುರ್. ಎಲ್

27. ಕೌಶಿಕ್. ಆರ್ (ಸ್ಪೋರ್ಟ್ಸ್)

28. ಲಕ್ಷ್ಮಿ ಸಾಗರ ಸ್ವಾಮಿಗೌಡ

29. ಚಿದಾನಂದ ಪಟೇಲ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...