ಮತ ಎಣಿಕೆ ಮುನ್ನ ಚುನಾವಣಾ ಆಯೋಗಕ್ಕೆ ಡಾ. ಸಿ ಎನ್‌ ಮಂಜುನಾಥ್ ಪತ್ರ

Date:

ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿ ಎನ್​ ಮಂಜುನಾಥ್ ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಹಾಲಿ ಸಂಸದ ಡಿ ಕೆ ಸುರೇಶ್‌ ಅವರನ್ನು ಸೋಲಿಸಲೇಬೇಕು ಎಂದು ಮೈತ್ರಿ ನಾಯಕರು ಹೃದ್ರೋಗ ತಜ್ಞ ವೈದ್ಯ ಡಾ. ಸಿ ಎನ್​​ ಮಂಜುನಾಥ್​ ಅವರನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಈಗಾಗಲೇ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಇದೀಗ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ.

ಇದರ ಮಧ್ಯ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?

ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ, ಜೆಡಿಎಸ್​ ನಾಯಕರಲ್ಲಿನ ಸಂತಸ ಮನೆ ಮಾಡಿದ್ದು, ಫಲಿತಾಂಶಕ್ಕಾಗಿ ಕಾತರರಿಂದ ಕಾಯುತ್ತಿದ್ದಾರೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳು ಆಗಬಾರದು ಎಂದು ಡಾ ಮಂಜುನಾಥ್​ ಅವರು ಮುಂಜಾಗ್ರತಾವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಬೇಕು. ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು. ಯಾವುದೇ ವ್ಯಕ್ತಿಯ ಅನಧಿಕೃತ ಪ್ರವೇಶ ಅಥವಾ ಉಲ್ಲಂಘನೆಯ ಪ್ರಯತ್ನಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಪಕ್ಷದ ಏಜೆಂಟ್‌ಗಳು ಸೇರಿದಂತೆ ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಬೇಕು. ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ಅವರ ಉಪಸ್ಥಿತಿಯು ಅತ್ಯಗತ್ಯವಾಗಿದ್ದು, ಅವರ ಪೂರ್ವ ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಇನ್ನು ಈ ಹಿಂದೆ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾನ ನಡೆಯುವ ಮೊದಲು ಬಿಜೆಪಿ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿಆರ್​ಪಿಎಫ್​ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...