ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳು ಆಸಕ್ತಿ, ಜವಳಿ ಸಚಿವರೊಂದಿಗೆ ಚರ್ಚೆ

Date:

ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಇಂದು (ಜೂ.11) ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು.

ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಗ್ಗಾವಿಯಲ್ಲಿ ಯೂನಿಟ್ ಆರಂಭಿಸಬಹುದು ಎಂದು ಸಲಹೆ ನೀಡಿದರು.

ಈ ಮೂರೂ ಕಡೆ ಅಗತ್ಯ ಮೂಲ ಸೌಕರ್ಯಗಳಿವೆ. ಶಿಗ್ಗಾವಿಗೆ ವಿಮಾನ ಸಂಪರ್ಕ ಮತ್ತು ರೈಲ್ವೆ ಸಂಪರ್ಕ ಇದೆ. ಕೇವಲ ಮೂರು ತಿಂಗಳ ಅವಧಿಯಲ್ಲಿ ಯೂನಿಟ್ ಆರಂಭಿಸಬಹುದು. ಇನ್ನೆರಡು ಸ್ಥಳಗಳು ರಾಜಧಾನಿಗೆ ಸಮೀಪದಲ್ಲಿವೆ. ಈ ಸ್ಥಳಗಳಿಗೆ ಭೇಟಿ ನೀಡಿ, ಯಾವುದು ಸೂಕ್ತ ಎಂಬುದನ್ನು ನಿರ್ಧರಿಸಿ ಎಂದು ಸಚಿವರು ಸಲಹೆ ಕೊಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೆಂಟಗಾನ್ ನಿಟ್ಕಾಂ ಬಗ್ಗೆ ಮಾಹಿತಿ ಪಡೆದ ಸಚಿವರು, “ಬಾಂಗ್ಲಾದಲ್ಲಿ ಅಲ್ಲಿನ ಸರ್ಕಾರ ಜವಳಿ ಉದ್ಯಮಕ್ಕೆ ಯಾವ ಯಾವ ಸೌಕರ್ಯ ಕಲ್ಪಿಸಿದೆ ಎಂಬ ವಿವರ ಪಡೆದರು. ಬಾಂಗ್ಲಾಗೆ ಹೋಲಿಕೆ ಮಾಡಿದರೆ ಕರ್ನಾಟಕ ಸರ್ಕಾರವೇ ಹೆಚ್ಚಿನ ಸೌಕರ್ಯ ಕಲ್ಪಿಸುತ್ತಿದೆ. ವಿದ್ಯುತ್ ಶುಲ್ಕ ಬಾಂಗ್ಲಾಗಿಂತ ಕರ್ನಾಟಕದಲ್ಲಿ ಕಡಿಮೆ ಇದೆ. ರಾಜ್ಯ ಸರ್ಕಾರ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡುತ್ತಿದೆ” ಎಂದು ತಿಳಿಸಿದರು.

ಪೆಂಟಗಾನ್ ನಿಟ್ ಕಾಂ ಬಗ್ಗೆ ಮಾಹಿತಿ ನೀಡಿದ ಮಾಲೀಕ ಬಿಪಿನ್ ಮುದ್ರಾ ಅವರು, “ವಾರ್ಷೀಕ 13 ಸಾವಿರ ಮಿಲಿಯನ್ ಡಾಲರ್ ವಹಿವಾಟು ಹೊಂದಿದ್ದು, 1980ರಿಂದ ಜವಳಿ ಕ್ಷೇತ್ರದಲ್ಲಿದ್ದೇವೆ. ಉದ್ಯಮ ವಿಸ್ತರಣೆ ಉದ್ದೇಶದಿಂದ ಕರ್ನಾಟಕದಲ್ಲಿ ಉದ್ಯಮ ಆರಂಭಿಸುವ ಅಭಿಲಾಷೆ ಹೊಂದಿದ್ದೇವೆ” ಎಂದು ಮಾಹಿತಿ ನೀಡಿದರು.

ಬಾಂಗ್ಲಾದೇಶದಲ್ಲಿ ಪ್ರತಿ ಯೂನಿಟ್ ವಿದ್ಯುತ್‌ಗೆ 9 ರೂ. ಇದೆ. ಸದ್ಯದ ಪರಿಸ್ಥಿತಿ ಅಲ್ಲಿ ಜವಳಿ ಕ್ಷೇತ್ರಕ್ಕೆ ಪೂರಕ ವಾತಾವರಣ ಇಲ್ಲ. ಕರ್ನಾಟಕದ ನಂಟು ಇರುವ ಕಾರಣ ಇಲ್ಲಿ ಉದ್ಯಮ ಆರಂಭಿಸುವ ಉದ್ದೇಶ ಹೊಂದಿದ್ದೇವೆ. ಏಕಗವಾಕ್ಷಿ ಪದ್ದತಿ ಇದ್ದರೆ ಅನುಕೂಲ, ಆಡಳಿತಾತ್ಮಕವಾಗಿ ವಿಳಂಬವಾಗದಿದ್ದರೆ ತ್ವರಿತವಾಗಿ ಬಂಡವಾಳ ಹೂಡಲು ಸಿದ್ದರಿದ್ದೇವೆ” ಎಂದು ತಿಳಿಸಿದರು.

ಜವಳಿ ಇಲಾಖೆ ಆಯುಕ್ತೆ ಜ್ಯೋತಿ, ಕೆಎಸ್‌ಟಿಐಡಿಸಿ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶ್, ಜಂಟಿ ನಿರ್ದೇಶಕ ರವೀಂದ್ರ ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...