ಬ್ಯಾಂಕ್‌ಗಳು ಪಾಸ್‌ಪೋರ್ಟ್, ಒಸಿಐ ಕಾರ್ಡ್ಅನ್ನು ಒತ್ತೆ ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್

Date:

anಒಬ್ಬ ವ್ಯಕ್ತಿಯು ಸ್ವಯಂಪ್ರೇರಣೆಯಿಂದ ನೀಡಿದರೂ ಸಹ ಪಾಸ್‌ಪೋರ್ಟ್‌ ಮತ್ತು ಭಾರತೀಯ ಸಾಗರೋತ್ತರ ನಾಗರಿಕ (ಒಸಿಐ) ಕಾರ್ಡ್‌ಗಳನ್ನು ಬ್ಯಾಂಕ್‌ಗಳು ಸಾಲದ ಭದ್ರತೆಗಾಗಿ ಒತ್ತೆ ಇರಿಸಿಕೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಭಾರತದಲ್ಲಿ ಹುಟ್ಟಿದ್ದು, ಭಾರತದ ಒಸಿಐ ಕಾರ್ಡ್ ಹೊಂದಿರುವ ಯುನೈಟೆಡ್ ಕಿಂಗ್‌ಡಂ ಪ್ರಜೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸಿದ್ದಾರೆ. ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಇಬ್ಬರು ವಸತಿ ಸಾಲ ಪಡೆದಿದ್ದರು. ಸಾಲದ ಭದ್ರತೆಗಾಗಿ ಅವರು ತಮ್ಮ ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ಅನ್ನು ಬ್ಯಾಂಕ್‌ ನೀಡಿದ್ದರು. ಆದರೆ, ಸಾಲವನ್ನು ಪಾವತಿಸದ ಆರೋಪದ ಮೇಲೆ ಬ್ಯಾಂಕ್‌ ವಂಚನೆ ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು. ಬ್ಯಾಂಕ್‌ ನಡೆ ಪ್ರಶ್ನಿಸಿ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದರು.

ಯುನೈಟೆಡ್ ಕಿಂಗ್‌ಡಂ ಪ್ರಜೆಯ ಪರವಾಗಿ ವಾದ ಮಂಡಿಸಿದ ವಕೀಲರು, “ಪಾಸ್‌ಪೋರ್ಟ್‌ ಮತ್ತು ಒಸಿಐ ದಾಖಲೆಗಳನ್ನು ಬ್ಯಾಂಕ್‌ ತನ್ನ ಬಳಿ ಇಟ್ಟುಕೊಳ್ಳಲು ಅಧಿಕಾರವಿಲ್ಲ. ಯುಕೆ ಸರ್ಕಾರ ನೀಡಿದ ಪಾಸ್‌ಪೋರ್ಟ್ಅನ್ನು ತಡೆಹಿಡಿಯುವ ಅಥವಾ ಇಟ್ಟುಕೊಳ್ಳುವ ಅಧಿಕಾರ ಬ್ಯಾಂಕ್‌ಗಳಿಗೆ ಇಲ್ಲ. ಅಂತೆಯೇ, ಒಸಿಐ ಕಾರ್ಡ್‌ಗಳು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವ್ಯಾಪ್ತಿಯಲ್ಲಿವೆ. ಅವುಗಳನ್ನು ಬ್ಯಾಂಕ್‌ ನಿಯಂತ್ರಿಸಲಾಗದು” ಎಂದು ವಾದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಂಕ್ ವಕೀಲರು, “ಸಾಲಗಾರರೇ ಸ್ವಯಂಪ್ರೇರಣೆಯಿಂದ ತಮ್ಮ ದಾಖಲೆಗಳನ್ನು ಸಾಲದ ಭದ್ರತೆಗಾಗಿ ಒತ್ತೆ ಇಟ್ಟಿದ್ದಾರೆ” ಎಂದು ವಾದಿಸಿದರು.

ಈ ಸುದ್ದಿ ಓದಿದ್ದೀರಾ?: ಜ.19ರಂದು ಕರ್ನಾಟಕಕ್ಕೆ ಮೋದಿ ಭೇಟಿ; ‘ನಿದ್ದೆಯಿಂದ ಎದ್ದೇಳಿ ಮೋದಿ’ ಪೋಸ್ಟರ್‌ಗಳು ವೈರಲ್

ವಾದ ಪ್ರತಿಪಾದಗಳನ್ನು ಗಮನಿಸಿದ ನ್ಯಾಯಾಲಯವು, “ಯುಕೆ ಪ್ರಜೆಗೆ ಯುಕೆ ಸರ್ಕಾರ ಪಾಸ್‌ಪೋರ್ಟ್ ನೀಡಿದ್ದು, ಅದನ್ನು ಭಾರತದ ಯಾವುದೇ ಕಾನೂನಿನ ಅಡಿಯಲ್ಲಿ ನೀಡಲಾಗಿಲ್ಲ. ಇನ್ನು, ಅರ್ಜಿದಾರರು ಭಾರತದಲ್ಲಿ ಉಳಿದುಕೊಳ್ಳಲು ಒಸಿಐ ಕಾರ್ಡ್ ನೀಡಲಾಗಿದೆ. ಒಸಿಐ ಕಾರ್ಡ್ ಮತ್ತು ಪಾಸ್‌ಪೋರ್ಟ್ ಅನ್ನು ಬ್ಯಾಂಕ್ ಅಧಿಕಾರಿಗಳಲ್ಲಿ ಒತ್ತೆ ಇಡುವುದಾಗಿ ಅರ್ಜಿದಾರರು ಒಪ್ಪಂದದ ಮೂಲಕ ನೀಡಿದ್ದರೂ ಸಹ, ಅವುಗಳನ್ನು 15 ದಿನಗಳಿಗಿಂತ ಹೆಚ್ಚು ಕಾಲ ಇಟ್ಟುಕೊಳ್ಳುವ ಯಾವುದೇ ಅಧಿಕಾರ ಬ್ಯಾಂಕ್‌ಗೆ ಇಲ್ಲ” ಎಂದು ಹೇಳಿದೆ.

“ಇನ್ನೊಂದು ವಿಚಾರವೆಂದರೆ, ಒಸಿಐ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯ (ಎಫ್‌ಆರ್‌ಆರ್‌ಒ) ಆಸ್ತಿಯಾಗಿದೆ. ಆ ಕಾರ್ಡ್‌ಅನ್ನು ಸುರಕ್ಷಿತವಾಗಿ ಇರಿಸಲು ಅದನ್ನು ಎಫ್‌ಆರ್‌ಆರ್‌ಒಗೆ ನ್ಯಾಂಕ್‌ ರವಾನಿಸಬೇಕಿತ್ತು. ಒಂದು ವೇಳೆ, ಕಾನೂನಿನ ಪ್ರಕಾರ ಅಗತ್ಯವಿದ್ದಲ್ಲಿ ಎಫ್‌ಆರ್‌ಆರ್‌ಒಗೆ ಸಂಬಂಧಿತ ಪ್ರಕ್ರಿಯೆಗಳನ್ನು ನಡೆಸಬೇಕಿತ್ತು. ಆದರೆ, ಈ ಪ್ರಕರಣದಲ್ಲಿ ಯಾವುದೂ ನಡೆದಿಲ್ಲ,” ಎಂದು ನ್ಯಾಯಾಲಯ ಗಮನಿಸಿದೆ.

ಪಾಸ್‌ಪೋರ್ಟ್ ಮತ್ತು ಒಸಿಐ ಕಾರ್ಡ್ಅನ್ನು ಅವುಗಳ ಮಾಲೀಕರಿಗೆ ಹಿಂತಿರುಗಿಸುವಂತೆ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...