ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸಲ್ಲ: ಸಿಎಂ ಸಿದ್ದರಾಮಯ್ಯ

Date:

  • ತುಳು ಭಾಷೆಯಲ್ಲಿ ಮಾತು ಆರಂಭಿಸಿ ಸಭಿಕರನ್ನು ಥ್ರಿಲ್ಲಾಗಿಸಿದ ಸಿಎಂ
  • ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ: ಸಿಎಂ 

ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಬಂಟ ಸಮಯದಾಯದವರು ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮಗಳನ್ನು ಆರಂಭಿಸಿದ್ದಾರೆ. ಸಮಾಜದ ಎಲ್ಲ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಬಂಟ ಸಮುದಾಯದವರು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಂಟರು ಮತ್ತು ಮಂಗಳೂರು-ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು. ವಿಶ್ವದ ಎಲ್ಲ ಕಡೆ ಹರಡಿದ್ದು ತಾವು ಹೋಗುವ ವಿಶ್ವದ ಎಲ್ಲಾ ಕಡೆ ಎಲ್ಲರ ಜತೆಗೂ ಸಹೃದಯತೆಯಿಂದ ಬೆರೆಯುತ್ತಾರೆ. ಇದು ಬಂಟ ಸಮುದಾಯದ ಹೆಗ್ಗಳಿಕೆ” ಎಂದರು.

“ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ತಮ್ಮ ಚಾಪು ಮೂಡಿಸಿದ್ದಾರೆ. ಎಲ್ಲೇ ಹೋದರು ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮಗಳ ಪ್ರೇಮ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆ ಹೆಚ್ಚಿಸುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

“ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ” ಎಂದರು.‌

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕನ್ಯಾನ ಸದಾಶಿವ ಶೆಟ್ಟಿ, ತೋನ್ಸೆ ಆನಂದ ಶೆಟ್ಟಿ, ಶಶಿರೇಖಾ ಆನಂದ ಶೆಟ್ಟಿ, ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಎಂ.ಆರ್.ಜಿ ಗ್ರೂಪ್ ನ ಕೆ.ಪ್ರಕಾಶ್ ಶೆಟ್ಟಿ, ಮಜಿ ಸಚಿವ ರಮಾನಾಥ ರೈ, ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಶಾಸಕರುಗಳಾದ ಅಶೋಕ್ ಕುಮಾರ್ ರೈ, ಯಶಪಾಲ್ ಸುವರ್ಣ , ಗಣೇಶ್ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಮುಂಬೈ ಕ್ರಿಕೆಟ್ ಅಸೋಸಿಯೇಷನ್ ನ ಡಾ.ಪಿ.ವಿ.ಶೆಟ್ಟಿ, ಸಂತೋಷ್ ಗುರು, ಕಾಂಗ್ರೆಸ್ ಮುಖಂಡ ಐವನ್ ಡಿಸೋಜಾ, ಅಭಯ ಚಂದ್ರ ಜೈನ್, ಜಿ.ಎ.ಭಾವ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...