ಬೆಳಗಾವಿ | ಚಳಿಗಾಲ ಅಧಿವೇಶನ ಮಾದರಿಯಾಗಿ ನಡೆಸಬೇಕಿದೆ: ಸಭಾಧ್ಯಕ್ಷ ಯು ಟಿ ಖಾದರ್

Date:

ಬೆಳಗಾವಿಯಲ್ಲಿ ಸೋಮವಾರ(ಡಿ.9)ದಿಂದ ಡಿ.20ರವರೆಗೆ ನಡೆಯಲಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯೂ ಕೂಡ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಸುವರ್ಣಸೌಧದ ಕೊಠಡಿ ಸಂಖ್ಯೆ 238ರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಡಿ.9ರಂದು ಬೆಳಗ್ಗೆ 11 ರಿಂದ ಮೊದಲ ದಿನದ ಅಧಿವೇಶನವು ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕೂ ಮುಂಚಿತವಾಗಿ 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಧ್ಯಕ್ಷರು, ವಿಧಾನ ಪರಿಷತ್ತಿನ ಸಭಾಪತಿಗಳು, ಉಪ ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದರು.

“ಮೊದಲ ದಿನ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ನಡೆಯಲಿದೆ. ಮಧ್ಯಾಹ್ನ ಬಿಎಸ್‌ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ಅಧಿವೇಶನದ ರೂಪುರೇಷಗಳ ಬಗ್ಗೆ ಸಮಗ್ರ ಚರ್ಚಿಸಿ ಅಂತಿಮಗೊಳಿಸಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ

ಈ ಬಾರಿ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ ನಡೆಯಲಿದೆ. ಎರಡು ಆಧ್ಯಾದೇಶದ‌ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು. ಅಧಿವೇಶನದಲ್ಲಿ 10 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು. ಈವರೆಗೆ 3,004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ. ಜತೆಗೆ 3 ಖಾಸಗಿ ವಿಧೇಯಕಗಳನ್ನು ಸಹ ಸ್ವೀಕರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ಸಿದ್ಧಪಡಿಸಲಾಗಿದೆ. ಅಧಿವೇಶನದ ಕಾರ್ಯವ್ಯವಸ್ಥೆಗಾಗಿ 2,500 ಅಧಿಕಾರಿಗಳು, ಸಿಬ್ಬಂದಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್‌ಗಾಗಿ ಒಟ್ಟು 8,500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 10 ಸಮಿತಿ ರಚಿಸಿ ವಸತಿ, ಸಾರಿಗೆ ಸೇರಿದಂತೆ ವಿವಿಧ ವ್ಯವಸ್ಥೆ ಮಾಡಲಾಗಿದೆ” ಎಂದರು.

ಛಾಯಾಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ

“ಕಲಾಪ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿ, ಶಿಕ್ಷಕರಿಗೆ ಮಾಹಿತಿಗಾಗಿ ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ದಶಮಾನೋತ್ಸವ ನೆನಪಿನ ಛಾಯಾಚಿತ್ರಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಇದಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಅಪರೂಪದ ಭಾವಚಿತ್ರಗಳನ್ನು ಸಂಗ್ರಹಿಸಿ ಸುವರ್ಣಸೌಧದ ಆಯಾ ಕಡೆಗಳಲ್ಲಿ ಹಾಕಲಾಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...