ಬೆಳಗಾವಿ | ಯು ಟಿ ಖಾದರ್‌ ಸೂಚನೆ ಮೇರೆಗೆ ಸ್ಪೀಕರ್ ಪೀಠ ಸಿದ್ಧಪಡಿಸಲು ₹42.93 ಲಕ್ಷ ಖರ್ಚು!

Date:

ವಿಧಾನಸಭೆ ಸಚಿವಾಲಯದಲ್ಲಿ ಆಡಳಿತ ಸುಧಾರಣೆ ಹೆಸರಿನಲ್ಲಿ ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದ ಸಭಾಧ್ಯಕ್ಷ ಯು ಟಿ ಖಾದರ್‌ ಈಗ ತಮ್ಮ ಪೀಠದ (ಕುರ್ಚಿ) ವಿಚಾರವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ.

ಬೆಂಗಳೂರಿನ ವಿಧಾನಸೌಧದ ವಿಧಾನಸಭೆ ಸಭಾಂಗಣದ ಸಭಾಧ್ಯಕ್ಷರ ಪೀಠದ ಮಾದರಿಯಲ್ಲೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೂ ಪೀಠ ಸಿದ್ಧಪಡಿಸುವಂತೆ ಸಭಾಧ್ಯಕ್ಷ ಯು ಟಿ ಖಾದರ್‌ ಸೂಚನೆ ಮೇರೆಗೆ ಸಭಾಧ್ಯಕ್ಷರ ಪೀಠ(ಕುರ್ಚಿ) ಮತ್ತು ಅದರ ಮುಂದಿರುವ ಟೇಬಲ್ ಸಿದ್ಧವಾಗಿದೆ. ಇದನ್ನು ಸಿದ್ಧಪಡಿಸಲು ಬರೋಬ್ಬರಿ ₹42.93 ಲಕ್ಷ ಖರ್ಚಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪಿಸಿದ್ದಾರೆ.

ಹಾಗೆಯೇ ವಿಧಾನ ಪರಿಷತ್ ಸಭಾಪತಿ ಪೀಠದ ಹಳೇ ಪ್ರೈವುಡ್, ಪ್ರೇಮ್, ಕೂಷನ್ ಬದಲಾಯಿಸಲು ₹1.98 ಲಕ್ಷ ವ್ಯಯಿಸಲಾಗಿದೆ. ಇದೆಲ್ಲ ಮಾಹಿತಿ ಭೀಮಪ್ಪ ಗಡಾದ ಅವರು ಆರ್‌ಟಿಐ ಅಡಿ ಸಂಗ್ರಹಿಸಿ ಬಹಿರಂಗ ಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳಗಾವಿಯಲ್ಲಿ ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿ ಕರೆದು ಮಾತನಾಡಿದ ಭೀಮಪ್ಪ ಗಡಾದ, “ರಾಜ್ಯ ಸರ್ಕಾರ ಜನರ ತೆರಿಗೆ ಹಣ ಪೋಲು ಮಾಡಿದೆ. 2012ರಲ್ಲಿ ಸುವರ್ಣ ವಿಧಾನಸೌಧ ಉದ್ಘಾಟನೆಗೆ ಆಗಮಿಸಿದ್ದ ರಾಷ್ಟ್ರಪತಿಗಳ ವಿಶ್ರಾಂತಿಗಾಗಿ ₹36.60 ಲಕ್ಷ ವೆಚ್ಚದಲ್ಲಿ ತಯಾರಿಸಿದ್ದ ಪೀಠೋಪಕರಣಗಳ ದಾಖಲೆ ಮುರಿದಿದೆ” ಎಂದು ಆರೋಪಿಸಿದ್ದಾರೆ.

“ರಾಜ್ಯದ ಹೆಸರಾಂತ ಚಿತ್ರ ಕಲಾವಿದರಿಂದ 8×5 ಉದ್ದಗಲದ ಅಳತೆಯಲ್ಲಿ ಏಳು ಮಹಾನ್ ನಾಯಕರ ಭಾವಚಿತ್ರಗಳನ್ನು ಸಿದ್ಧಪಡಿಸಲು ಸರ್ಕಾರವು 2023ರ ಫೆ.22ರಂದು ₹13.34 ಲಕ್ಷ ನೀಡಿತ್ತು. ಸುವರ್ಣ ವಿಧಾನಸೌಧದಲ್ಲಿ ಮಹಾನ್‌ ನಾಯಕರು, ಗಣ್ಯರ 11 ಚಿತ್ರಗಳನ್ನು ಅಳವಡಿಸಲು ಮತ್ತು ಅನುಭವ ಮಂಟಪದ ತೈಲವರ್ಣದ ಚಿತ್ರ ಸಿದ್ಧಪಡಿಸಲು ₹67.67 ಲಕ್ಷ ವ್ಯಯಿಸಿ, ತೆರಿಗೆ ಹಣ ವ್ಯರ್ಥ ಮಾಡಲಾಗಿದೆ” ಎಂದು ದೂರಿದ್ದಾರೆ.

“ಸಿದ್ಧವಾದ ಚಿತ್ರಗಳ ಪರಿಶೀಲನೆಗೆ ಬಂದಿದ್ದ ಚಿತ್ರ ಕಲಾ ಪರಿಷತ್ತಿನ ನುರಿತ ತಜ್ಞರ ತಂಡ, ಇಲ್ಲಿ ಅಳವಡಿಸಿದ ಭಾವಚಿತ್ರಗಳ ಚಹರೆಗಳಲ್ಲಿ ಹೋಲಿಕೆ ಇಲ್ಲ ಎಂದಿತ್ತು. ಇವುಗಳ ಬದಲಿಗೆ ತೈಲವರ್ಣದ ಚಿತ್ರ ತಯಾರಿಸುವಂತೆ ವರದಿ ನೀಡಿದ ಹಿನ್ನೆಲೆಯಲ್ಲಿ 2024ರ ಅ.25ರಂದು ಸರ್ಕಾರ ಮತ್ತೆ ₹28.49 ಲಕ್ಷ ನೀಡಿದೆ. ಇಷ್ಟಕ್ಕೆ ಸುಮ್ಮನಾಗದೆ ಸೌಧದಲ್ಲಿ ಅನುಭವ ಮಂಟಪದ ಚಿತ್ರಪಟ ಅಳವಡಿಸಿ, ಗಾಂಧೀಜಿ ಕಲಾಕೃತಿ ಹಸ್ತಾಂತರಿಸಲು 2025ರ ಫೆ.4ರಂದು ₹25.84 ಲಕ್ಷ ಬಿಡುಗಡೆ ಮಾಡಿದೆ” ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...