ಬೆಳಗಾವಿ | ರಾಜ್ಯೋತ್ಸವ ಮೆರವಣಿಗೆ ವೇಳೆ ಗಲಾಟೆ; ಕಿಡಿಗೇಡಿಗಳ ವಿರುದ್ಧ ಕ್ರಮ: ಸತೀಶ ಜಾರಕಿಹೊಳಿ

Date:

  • ರಾಜ್ಯೋತ್ಸವದಂದು ಪ್ರತಿವರ್ಷ ಎಂಇಎಸ್‌ದಿಂದ ಕರಾಳ ದಿನ ಆಚರಣೆ
  • ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಾರೆ: ಸತೀಶ ಜಾರಕಿಹೊಳಿ

ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕರ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ.

ನೃತ್ಯ ಮಾಡುವ ವಿಚಾರಕ್ಕೆ ಯುವಕರು ಹೊಡೆದಾಡಿಕೊಂಡಿದ್ದಾರೆ. ಯುವಕರ ನಡುವೆ ಗಲಾಟೆ ನಡೆಯುತ್ತಿದ್ದರೂ ಪೊಲೀಸರು ಸುಮ್ಮನಿದ್ದರು ಎನ್ನಲಾಗಿದೆ. ಕೆಲ ಯುವಕರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಹೊರಹಾಕಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಪ್ರತಿವರ್ಷ ಮಹಾರಾಷ್ಟ್ರ ಏಕೀಕರಣ ಸಮಿತಿ ಕರಾಳ ದಿನ ಆಚರಿಸುತ್ತದೆ. ಇಂದಿನ ಪ್ರತಿಭಟನೆ ಗಲಾಟೆ ಸ್ವರೂಪ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಲಾಟೆ ನಂತರ ಪತ್ರಿಕಾಗೋಷ್ಟಿ ನಡೆಸಿ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, “ಎಂಇಎಸ್ ನವರು ಪ್ರತಿಭಟನೆ ನಡೆಸೋದು ಹೊಸದೇನಲ್ಲ, ಪ್ರತಿವರ್ಷ ಅದನ್ನು ಮಾಡುತ್ತಾರೆ. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸುವುದರಿಂದ ಪೊಲೀಸರು ಕೇಸ್ ಹಾಕುತ್ತಾರೆ, ಕೆಲವರ ಬಂಧನವಾಗುತ್ತದೆ ಮತ್ತು ಬೇಲ್ ಪಡೆದು ಹೊರಬರುತ್ತಾರೆ” ಎಂದರು.

“ಇವರೆಲ್ಲ ಬೆಳಗಾವಿಯಲ್ಲೇ ಜೀವನ ನಡೆಸುವುದರಿಂದ ವಿಷಯ ಅರ್ಥಮಾಡಿಕೊಳ್ಳಬೇಕು. ಅವರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ, ಮಾಡಿಕೊಳ್ಳಲಿ. ಆದರೆ ಸರ್ಕಾರದ ವಿರುದ್ಧ ಘೋಷಣೆ ಕೂಗುವುದನ್ನು ಮಾಡಬಾರದು. ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...