ಬೆಳಗಾವಿ | ಮಧ್ಯರಾತ್ರಿಯಿಂದಲೇ ರಾಜ್ಯೋತ್ಸವ ಸಂಭ್ರಮ, ಇಂದು ಬೃಹತ್‌ ಮೆರವಣಿಗೆ

Date:

ಬೆಳಗಾವಿಯಲ್ಲಿ ಮಧ್ಯರಾತ್ರಿಯಿಂದಲೇ ಕನ್ನಡ ರಾಜ್ಯೋತ್ಸವ ಆರಂಭಗೊಂಡಿದೆ. ಸಿಡಿಮದ್ದು ಪ್ರದರ್ಶನ ಮೂಲಕ ಕನ್ನಡ ಅಭಿಮಾನಿಗಳು ರಾತ್ರಿವಿಡಿ ಕುಣಿದು ಕುಪ್ಪಳಿಸಿದ್ದಾರೆ.

ಇದೇ ಮೊದಲ ಬಾರಿ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಸಿಡಿ ಮದ್ದಿನ ಪ್ರದರ್ಶನ ಹಮ್ಮಿಕೊಂಡಿದ್ದರು. ಸರಿಯಾಗಿ ರಾತ್ರಿ 12 ಗಂಟೆ ಆಗುತ್ತಿದ್ದಂತೆ ಸಿಡಿದ ಸಿಡಿ ಮದ್ದುಗಳು ಆಕಾಶದಲ್ಲಿ ಬೆಳಕಿನ ಚಿತ್ತಾರ ಮೂಡಿಸಿದವು.

“ಕರ್ನಾಟಕ ರಾಜ್ಯೋತ್ಸವಕ್ಕೆ ಜಯವಾಗಲಿ, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಜಯವಾಗಲಿ, ಯಾರಪ್ಪಂದ ಏನೈತಿ – ಬೆಳಗಾವಿ ನಮ್ಮದೈತಿ, ಪ್ರಾಣ ಕೊಟ್ಟೇವು – ಬೆಳಗಾವಿ ಬಿಡೆವು..” ಸೇರಿ ಮುಂತಾದ ಘೋಷಣೆಗಳನ್ನು ಮೊಳಗಿಸಿ ನೆರೆದಿದ್ದ ಜನರು ಸಂಭ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೈಯಲ್ಲಿ ಕೆಂಪು – ಹಳದಿ ಬಾವುಟಗಳನ್ನು ಹಿಡಿದು ಬೆಳಗಾವಿ ಎಂದೆಂದಿಗೂ ಕನ್ನಡಿಗರ ಸಾಮ್ರಾಜ್ಯ ಎಂದು ಕೂಗಿ ಕೂಗಿ ಹೇಳಿದರು. ರಾತ್ರಿ 1 ಗಂಟೆವರೆಗೂ ಜನರು ಚೆನ್ನಮ್ಮ ವೃತ್ತದಿಂದ ಕದಲಲಿಲ್ಲ. ಕನ್ನಡ ಡಿಜೆ ಹಾಡುಗಳಿಗೆ ಹುಚ್ಚೆದ್ದು ಕುಣಿದರು. ಯಾವುದೇ ಅನಾಹುತ ಸಂಭವಿಸದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದರು.

”ಶನಿವಾರದ ಮೆರವಣಿಗೆ ಎಷ್ಟೊಂದು ಅದ್ಧೂರಿ‌ ಆಗಿರಲಿದೆ ಎನ್ನುವುದಕ್ಕೆ ಮಧ್ಯರಾತ್ರಿಯ ಸಂಭ್ರಮವೇ ಸಾಕ್ಷಿ. ಸುಮಾರು 8 ಲಕ್ಷ ಜನರು ಸೇರಲಿದ್ದಾರೆ. ಇದು ಒಂದು ಎಚ್ಚರಿಕೆಯ ಸಂದೇಶ ಕೂಡ ಆಗಲಿದೆ. ಇನ್ಮುಂದೆ ಗುಂಡಾಗಿರಿ‌ಯನ್ನು ನಾವು ಸಹಿಸಿಕೊಳ್ಳುವುದಿಲ್ಲ. ನಾಳೆ ಕರಾಳ ದಿನಕ್ಕೆ ಅವಕಾಶ ಕೊಟ್ಟರೆ ದೊಡ್ಡ ಕ್ರಾಂತಿ ಆಗುವುದು ನಿಶ್ಚಿತ. ಏನಾದರೂ‌ ಅನಾಹುತ‌ ಉಂಟಾದರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆ ಆಗುತ್ತದೆ” ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಎಂದು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...