ಬೆಳಗಾವಿ ಅಧಿವೇಶನ | ಬರ ನೆರವಿಗೆ ಧಾವಿಸದ ಸರ್ಕಾರ ದಿವಾಳಿಯಾಗಿದೆ: ಆರ್ ಅಶೋಕ್ ಟೀಕೆ

Date:

  • ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡಿ
  • ಕಟುಕರಾಗಬೇಡಿ, ಮಾತೃ ಹೃದಯದಿಂದ ವರ್ತಿಸಿ: ಆಗ್ರಹ

ಬರ ಪರಿಹಾರ ನೆರವು ಬಿಡುಗಡೆ ವಿಷಯದಲ್ಲಿ ದಿನಕ್ಕೊಂದು ಹೇಳಿಕೆ ನೀಡಿ ಕಾಲಾಹರಣ ಮಾಡುತ್ತಿರುವುದನ್ನು ಗಮನಿಸಿದರೆ ರಾಜ್ಯ ಸರಕಾರ ದಿವಾಳಿ ಆಗಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದರು.

ವಿಧಾನಸಭೆಯಲ್ಲಿ ಬರಗಾಲ ಕುರಿತ ವಿಶೇಷ ಚೆರ್ಚೆ ಮುಂದುವರಿಸಿ ಗುರುವಾರ ಮಾತನಾಡಿದ ಅವರು, “ರಾಜ್ಯದ ಹಣಕಾಸು ಪರಿಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ” ಆಗ್ರಹಿಸಿದರು.

“ಬರಗಾಲದಿಂದ ಕಂಗಾಲಾಗಿರುವ ರೈತ ಸಮುದಾಯಕ್ಕೆ ನೆರವು ನೀಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಬೆಳೆಗಾರರ ಎರಡು ಲಕ್ಷ ರೂ. ವರೆಗಿನ ಸಾಲ ಮನ್ನಾ ಮಾಡಬೇಕು, ಶಾಸಕರ ಅಧ್ಯಕ್ಷತೆಯ ಟಾಸ್ಕ್ ಫೋರ್ಸ್ ಗಳಿಗೆ ಪರಮಾಧಿಕಾರ ನೀಡಿ ಪ್ರತಿ ತಾಲ್ಲೂಕಿಗೆ ಐದು ಕೋಟಿ ರೂ. ನೀಡಬೇಕು, ಸ್ಥಗಿತಗೊಳಿಸಿರುವ ವಿದ್ಯಾನಿಧಿ ಯೋಜನೆ ಮತ್ತೆ ಆರಂಭಿಸಬೇಕು, ಕುಡಿಯುವ ನೀರು, ಮೇವು ಖರೀದಿ, ಗೋಶಾಲೆ ಆರಂಭಿಸಲು ಅನುದಾನ ನಿಗದಿ ಮಾಡಿ ಆದೇಶಗಳನ್ನು ತಕ್ಷಣವೇ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ನೆರವಿನ ಕಿಸಾನ್ ಸನ್ಮಾನ್ ಯೋಜನೆಗೆ ಕೇಂದ್ರದ ಆರು ಸಾವಿರಕ್ಕೆ ನಮ್ಮ ಸರಕಾರ ನಾಲ್ಕು ಸಾವಿರ ಸೇರಿಸಿ ಹತ್ತು ಸಾವಿರ ರೂ. ನೀಡುತ್ತಿತ್ತು. ಅದನ್ನು ಮತ್ತೆ ಆರಂಭಿಸಬೇಕು. ಬರಗಾಲದ ವೇಳೆ ಗರ್ಭಿಣಿಯರು, ಬಾಣಂತಿಯರು ಮತ್ತು ನವಜಾತ ಶಿಶುಗಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು, ಜಾನುವಾರುಗಳಿಗೆ ಬರಗಾಲದಲ್ಲಿ ಬರಬಹುದಾದ ಕಾಯಿಲೆಗಳಿಂದ ರಕ್ಷಿಸಲು ಲಸಿಕೆ ಹಾಕಬೇಕು, ಬಡವರು, ಕೃಷಿ ಕಾರ್ಮಿಕರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಜನರು ವಾಸಿಸುವ ಪ್ರದೇಶಗಳಲ್ಲಿ ನಮ್ಮ ಸರಕಾರ ವಿತರಿಸಿದ್ದಂತೆ ಆಹಾರ ಕಿಟ್ ವಿತರಿಸಬೇಕು” ಎಂದರು.

“ಪದೇ ಪದೇ ಕೇಂದ್ರದ ಕಡೆ ಬೊಟ್ಟು ಮಾಡದೆ ನಮ್ಮ ಸರಕಾರದ ಅವಧಿಯಲ್ಲಿ ನೀಡಿದ್ದಂತೆ ಮಳೆ ಆಶ್ರಿತ, ನೀರಾವರಿ ಮತ್ತು ಬಹು ವಾರ್ಷಿಕ ಬೆಳೆಗಳಿಗೆ ದುಪ್ಪಟ್ಟು ಪರಿಹಾರ ವಿತರಿಸಬೇಕು. ನಮ್ಮ ಕಾಲದಲ್ಲಿ ಮೇ ತಿಂಗಳಲ್ಲಿ ನೆರೆ ಬಂದಾಗ ಜುಲೈನಲ್ಲಿ ಪರಿಹಾರ ಕೊಟ್ಟಿದ್ವಿ. ಒಂದೇ ತಿಂಗಳಲ್ಲಿ ನಾವು ಪರಿಹಾರ ನೀಡಿರುವಾಗ ನೀವು ಕೊಡಲು ಏನು ದಾಡಿ” ಎಂದು ಪ್ರಶ್ನಿಸಿದರು.

“ನಿಮಗೆ ತೆಲಂಗಾಣ ಚುನಾವಣೆಯಲ್ಲಿ ಇರುವ ಆಸಕ್ತಿ ಬರಪರಿಸ್ಥಿತಿ ನಿಭಾಯಿಸುವ ವಿಷಯದಲ್ಲಿ ಇಲ್ಲ. ಅನೇಕ ಸಚಿವರು ಇನ್ನೂ ಹೈದರಾಬಾದ್ ನಲ್ಲೇ ವಾಸ್ತವ್ಯ ಹೂಡಿದ್ದಾರೆ. ಹದಿನಾಲ್ಕು ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಅವರು ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ನಮ್ಮ ನಿರೀಕ್ಷೆ ತಲೆಕೆಳಗಾಗಿದೆ” ಎಂದು ವಾಗ್ದಾಳಿ ನಡೆಸಿದರು.

“ತಾಲ್ಲೂಕುವಾರು ಪರಿಹಾರಕ್ಕೆ ಎಷ್ಟು ಹಣ ಬಿಡುಗಡೆ ಮಾಡುತ್ತೀರಿ? ಅದನ್ನು ಯಾವುದಕ್ಕೆ ಬಳಸಬೇಕು? ಅದಕ್ಕೆ ಸಂಬಂಧಿಸಿದ ಆದೇಶಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ರಾಜ್ಯದ ಜನತೆ ಸಂಕಷ್ಟದ ಸಮಯದಲ್ಲಿ ಇರುವಾಗ ನೀವು ಸ್ಪಂದಿಸದಿದ್ದರೆ ಅವರ ಶಾಪ ನಿಮಗೆ ತಟ್ಟುತ್ತದೆ. ಈಗಲಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...