ಬಳ್ಳಾರಿ | KSRTC ಬಸ್‌ಗಳ ಮೇಲಿನ ಗುಟ್ಕಾ, ತಂಬಾಕು ಜಾಹೀರಾತು ಕಿತ್ತೆಸೆದ ಯುವಕರು; ವಿಡಿಯೋಗಳು ವೈರಲ್

Date:

ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಅಂಟಿಸಲಾಗಿರುವ ಗುಟ್ಕಾ ಮತ್ತು ತಂಬಾಕು ಜಾಹೀರಾತುಗಳನ್ನು ಯುವಜನರು ಕಿತ್ತುಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಳ್ಳಾರಿ ಜಿಲ್ಲೆಯ ವಿದ್ಯಾನಗರದಲ್ಲಿ ಯುವಕನೊಬ್ಬ ಜಾಹೀರಾತುಗಳನ್ನು ಹರಿದುಹಾಕುತ್ತಿರುವ ವಿಡಿಯೋ ಮೊದಲಿಗೆ ವೈರಲ್ ಆಯಿತು. ಆ ವಿಡಿಯೋ ಜೊತೆಗೆ, ಗುಟ್ಕಾ, ತಂಬಾಕು ಜಾಹೀರಾತುಗಳನ್ನು ಹರಿದೆಸೆಯುವ ಅಭಿಯಾನಕ್ಕೆ ಕರೆಕೊಡಲಾಯಿತು. ಇದೀಗ, ಅಭಿಯಾನವು ಉತ್ತರ ಕರ್ನಾಟಕದ ನಾನಾ ಭಾಗಗಳಿಗೆ ವಿಸ್ತರಿಸಿದೆ.

ಗುಟ್ಕಾ, ತಂಬಾಕುಗಳು ಜಾಹೀರಾತುಗಳನ್ನು ಸಾರಿಗೆ ಬಸ್‌ಗಳ ಮೇಲೆ ಅಂಟಿಸುವುದು ತಪ್ಪು. ಬಸ್‌ಗಳಲ್ಲಿ ಮಕ್ಕಳು ಮತ್ತು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಈ ಜಾಹೀರಾತುಗಳು ಅವರನ್ನು ಅನಾರೋಗ್ಯಕರ ಅಭ್ಯಾಸಗಳಿಗೆ ಉತ್ತೇಜಿಸುತ್ತವೆ ಎಂದು ಯುವಜನರು ಹೇಳಿದ್ದಾರೆ. ಈಗ, ಮುಧೋಳ, ಹುಬ್ಬಳ್ಳಿ ಸೇರಿದಂತೆ ನಾನಾ ಭಾಗಗಳಲ್ಲಿಯೂ ಯುವಜನರು ಬಸ್‌ಗಳ ಮೇಲಿನ ಗುಟ್ಕಾ, ತಂಬಾಕು ಜಾಹೀರಾತುಗಳನ್ನು ಕಿತ್ತುಹಾಕುತ್ತಿದ್ದು, ಅವುಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

“ಸರ್ಕಾರಿ ಸ್ವಾಮ್ಯದ ಬಸ್‌ಗಳಲ್ಲಿ ಆರೋಗ್ಯಕ್ಕೆ ಹಾನಿಕಾರಕ ‘ಬಾಡಿಗೆ ಜಾಹೀರಾತು’ ಪ್ರಕಟಿಸಿ, ಯುವಕರನ್ನು ದಾರಿ ತಪ್ಪಿಸುವ ಉತ್ಪನ್ನಗಳನ್ನು ಪ್ರಚಾರ ಮಾಡಲಾಗುತ್ತಿದೆ” ಎಂದು ಸಾರ್ವಜನಿಕರು ಮತ್ತು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಗ್ಯಕ್ಕೆ ಹಾನಿಯಾಗುವ ಉತ್ಪನ್ನಗಳ ಜಾಹೀರಾತುಗಳನ್ನು ಕಿತ್ತುಹಾಕುವ ಯುವಜನರ ಅಭಿಯಾನವನ್ನು ಹಲವರು ಬೆಂಬಲಿಸಿದ್ದಾರೆ. ಈ ಅಭಿಯಾನವನ್ನು ಭಾರತದಾದ್ಯಂತ ಮಾಡಬೇಕು, ಉತ್ತಮ ಚಳುವಳಿ ಎಂದು ನೆಟ್ಟಿಗರು ಹೇಳಿದ್ದಾರೆ.

ಆದರೂ, ಕೆಲವರು, ‘ಉದ್ದೇಶ ಸರಿ ಇದೆ. ಆದರೆ, ವಿಧಾನ ತಪ್ಪು ಎಂದಿದ್ದಾರೆ. ಇನ್ನೂ ಕೆಲವರು ‘ಒಳ್ಳೆಯ ಕಾರಣಕ್ಕಾಗಿಯೂ ಸಹ ಸರ್ಕಾರಿ ಆಸ್ತಿಯನ್ನು ವಿರೂಪಗೊಳಿಸುವುದು ಕಾನೂನು ಪರಿಣಾಮಗಳಿಗೆ ಕಾರಣವಾಗಬಹುದು’ ಎಂದು ಎಚ್ಚರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...