ಮಗುವನ್ನು ಕೊಂದು ಸೂಟ್​ಕೇಸ್​​ನಲ್ಲಿ ಸಾಗಿಸುತ್ತಿದ್ದ ಸ್ಟಾರ್ಟ್​​ ಅಪ್ ಕಂಪೆನಿಯ ಸಿಇಓ ಬಂಧನ

Date:

ತನ್ನದೇ ಮಗುವನ್ನೇ ಹತ್ಯೆ ಮಾಡಿ ಸೂಟ್​ಕೇಸ್​​ನಲ್ಲಿ ಸಾಗಿಸಿದ ಆರೋಪದ ಮೇಲೆ ಸ್ಟಾರ್ಟ್​​ ಅಪ್ ಕಂಪನಿಯಾಗಿರುವ ಮೈಂಡ್​ಫುಲ್​ ಎಐ ಲ್ಯಾಪ್​​ ಫೌಂಡರ್​​ ಮತ್ತು ಸಿಇಓ ಸುಚನ ಸೇಠ್​​ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಸುಚನ ಸೇಠ್ ಗೋವಾದ ಹೋಟೆಲ್​ವೊಂದರಲ್ಲಿ ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ತಂಗಿದ್ದರು. ಬಳಿಕ ಸೂಟ್​ಕೇಸ್​ ಹಿಡಿದುಕೊಂಡು ಬೆಂಗಳೂರಿಗೆ ಹೊರಟಿದ್ದಾರೆ. ಟ್ಯಾಕ್ಸಿ ಹಿಡಿದು ಬೆಂಗಳೂರಿಗೆ ಹೊರಟ ಸಂದರ್ಭದಲ್ಲಿ ಹೋಟೆಲ್​​ ಸಿಬ್ಬಂದಿ ನಿಮ್ಮ ಜೊತೆಗಿದ್ದ ಮಗು ಎಲ್ಲಿ? ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸುಚನ ಸೇಠ್, ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಸುಳ್ಳು ಹೇಳಿ ಅಲ್ಲಿಂದ ನಿರ್ಗಮಿಸಿದ್ದರು. ಬಳಿಕ ಟ್ಯಾಕ್ಸಿ ಏರಿ ಬೆಂಗಳೂರಿನತ್ತ ಬಂದಿದ್ದಾರೆ.

suchana with son

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಕ್ತದ ಕಲೆ ನೀಡಿತು ಸುಳಿವು!

ಹೋಟೆಲ್​ ಸಿಬ್ಬಂದಿಗೆ ಸುಚನ ಸೇಠ್ ಮೇಲೆ ಅನುಮಾನ ಬಂದಿದ್ದು, ಬಳಿಕ ರೂಂ ಸ್ವಚ್ಛಗೊಳಿಸುವ ಸಮಯದಲ್ಲಿ ರಕ್ತದ ಕಲೆಗಳು ಕಾಣಸಿಕ್ಕಿವೆ. ತಕ್ಷಣವೇ ಹೋಟೆಲ್​ನವರು ಗೋವಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಗೋವಾ ಪೊಲೀಸರು ಈ ವಿಚಾರ ಗೊತ್ತಾಗುತ್ತಿದ್ದಂತೆ ಕಾರಿನ ಚಾಲಕನನ್ನು ಸಂಪರ್ಕಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ಪೊಲೀಸ್​ ಠಾಣೆ ಬಳಿ ಕಾರು ನಿಲ್ಲಿಸುವಂತೆ ಹಾಗೂ ಮಹಿಳೆಗೆ ಅನುಮಾನ ಬಾರದಂತೆ ನಿಲ್ಲಿಸಬೇಕು ಎಂದು ಕಾರಿನ ಚಾಲಕನಿಗೆ ಸೂಚನೆ ನೀಡಿದ್ದಾರೆ. ಅದರಂತೆಯೇ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಐಮಂಗಲ ಠಾಣೆ ಬಳಿ ಕಾರು ಚಾಲಕ ಟ್ಯಾಕ್ಸಿ ನಿಲ್ಲಿಸಿದ್ದಾನೆ. ಈ ನಡುವೆ ಗೋವಾ ಪೊಲೀಸರು, ಚಿತ್ರದುರ್ಗದ ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ.

ಬಳಿಕ ಚಿತ್ರದುರ್ಗದ ಪೊಲೀಸರು ಕಾರಿನ ಸೂಟ್‌ಕೇಸ್ ಪರಿಶೀಲಿಸಿದಾಗ ಮಗುವಿನ ಶವ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಸುಚನ ಸೇಠ್ ​​ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಮಗುವಿನ ಕೊಲೆಗೆ ಕಾರಣ ಏನು ಎಂದು ತಿಳಿದುಬಂದಿಲ್ಲ. ಘಟನೆಯ ಸಂಬಂಧ ಗೋವಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...