ಬೆಂಗಳೂರು | ಜ.29ರಂದು ‘ಗೌರಿ ದಿನ’ ಕಾರ್ಯಕ್ರಮ; ನಟ ದುನಿಯಾ ವಿಜಯ್ ಭಾಗಿ!

Date:

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅವರು ಹುಟ್ಟಿದ ದಿನದ ಅಂಗವಾಗಿ ಜನವರಿ 29ರಂದು ಬೆಂಗಳೂರಿನಲ್ಲಿ ‘ಗೌರಿ ದಿನ’ ಕಾರ್ಯಕ್ರಮವನ್ನು ‘ಗೌರಿ ಮೀಡಿಯಾ ಟ್ರಸ್ಟ್‌’ ಅಯೋಜಿಸಿದೆ. ಕಾರ್ಯಕ್ರಮದಲ್ಲಿ ಲ್ಯಾಂಡ್‌ಲಾರ್ಡ್‌ ಸಿನಿಮಾ ಮೂಲಕ ರಾಜ್ಯದ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿರುವ ನಟ ದುನಿಯಾ ವಿಜಯ್ ಭಾಗಿಯಾಗಲಿದ್ದಾರೆ.

‘ನಾವೆಲ್ಲರೂ ಗೌರಿ’ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜಿನ ‘ಎಚ್‌.ಎನ್‌ ಮಲ್ಟಿಮೀಡಿಯಾ ಸಭಾಂಗಣದಲ್ಲಿ ಜ.29ರ ಗುರುವಾರ ಸಂಜೆ 5ಯಿಂದ ಕಾರ್ಯಕ್ರಮ ನಡೆಯಲಿದೆ. ದುನಿಯಾ ವಿಜಯ್ ಜೊತೆಗೆ, ಗೌರಿ ಅವರ ತಾಯಿ ಇಂದಿರಾ ಲಂಕೇಶ್‌, ಸಹೋದರಿ ಕವಿತಾ ಲಂಕೇಶ್‌, ಹೋರಾಟಗಾರ ನೂರ್ ಶೀಧರ್, ಗೌರಿ ಮೀಡಿಯಾ ಟ್ರಸ್ಟ್‌ನ ನಗರಕೆರೆ ರಮೇಶ್‌, ರಾಜಲಕ್ಷ್ಮಿ ಅಂಕಲಗಿ, ಎ.ಎಸ್ ಪ್ರಭಾಕರ್ ಹಾಗೂ ಗುರು ಆಕೃತಿ ಅವರು ಭಾಗವಹಿಸಲಿದ್ದಾರೆ.

“ಗೌರಿ ಲಂಕೇಶ್‌ ಅವರು ಸಮಾಜದ ಶೋಷಿತರ ಪರವಾಗಿ ಸದಾ ಗಟ್ಟಿ ನಿಲುವು ತಳೆದು, ಆಳುವ ವರ್ಗಗಳ ಮತ್ತು ಮಾನವವಿರೋಧಿ ಸಿದ್ಧಾಂತಗಳ ವಿರುದ್ಧ ನೇರವಾಗಿ ಹೋರಾಡಿದ್ದರು. ಅಂತಹ ಧೈರ್ಯದ ಕಾರಣಕ್ಕಾಗಿಯೇ ಅವರನ್ನು ಮನುಷ್ಯ ವಿರೋಧಿ ಸಿದ್ಧಾಂತಿಗಳು ಹತ್ಯೆಗೈದರು. ಆದರೆ, ಅವರ ಆಶಯಗಳನ್ನು ಪತ್ರಕರ್ತರು, ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರು ತಮ್ಮದೇ ರೀತಿಯಲ್ಲಿ ಮುಂದುವರೆಸುತ್ತಿದ್ದಾರೆ” ಎಂದು ಗೌರಿ ಮೀಡಿಯಾ ಟ್ರಸ್ಟ್‌ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾನವವಿರೋಧಿ ಭಾವನೆಗಳ ವಿರುದ್ಧ ಸದಾ ಎಚ್ಚರಿಕೆಯಿಂದ ನಿಲ್ಲುತ್ತಿದ್ದ ಗೌರಿ ಲಂಕೇಶ್ ಆಶಯಗಳನ್ನು ಮುಂದುವರೆಸಲು ‘ನ್ಯಾಯಪಥ’ ಪತ್ರಿಕೆ ಮುಂದುವರೆದಿದೆ. ಗೌರಿ ಆಶಯಗಳನ್ನು ವಿವಿಧ ರೂಪಗಳಲ್ಲಿ ಮುಂದುವರೆಸುತ್ತಿರುವ ಎಲ್ಲರೂ ಜೊತೆಗೂಡಿ ಗೌರಿ ದಿನವನ್ನು ಆಚರಿಸಿ, ಹೋರಾಟದ ಕರೆ ನೀಡಬೇಕಿದೆ. ಜೀವವಿರೋಧಿ ಸಿದ್ಧಾಂತಗಳಿಗೆ ಎಚ್ಚರಿಕೆ ನೀಡಲು ಎಲ್ಲರೂ ಒಗ್ಗೂಡುವ ಅಗತ್ಯವಿದೆ” ಎಂದು ಟ್ರಸ್ಟ್‌ ಕರೆಕೊಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...