ಭದ್ರಾ ಮೇಲ್ದಂಡೆ ಕಾಮಗಾರಿ ಸ್ಥಗಿತವಾಗಿಲ್ಲ, ಗುತ್ತಿಗೆದಾರಿಗೆ ₹800 ಕೋಟಿ ಪಾವತಿ: ಸಿದ್ದರಾಮಯ್ಯ

Date:

ಭದ್ರಾ ಮೇಲ್ದಂಡೆ ಕಾಮಗಾರಿಗಳು ಸ್ಥಗಿತವಾಗಿಲ್ಲ. ಆದರೆ ಶೀಘ್ರಗತಿಯಲ್ಲಿ ಕಾಮಗಾರಿಗಳು ನಡೆಯುತ್ತಿಲ್ಲ. ಗುತ್ತಿಗೆದಾರಿಗೆ ಈ ವರ್ಷ 800 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಗುರುವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ನೀಡುವುದಾಗಿ 2023-24 ರ ಕೇಂದ್ರ ಬಜೆಟ್ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದರು. ಅದೇ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿಯೂ ಇದನ್ನು ಪುನರುಚ್ಚರಿಸಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡುವುದಾಗಿ ಹೇಳಿದ್ದರು. ಇಷ್ಟು ವರ್ಷಗಳಾದರೂ ಒಂದು ಪೈಸೆಯೂ ರಾಜ್ಯಕ್ಕೆ ಬಂದಿಲ್ಲ. ಸರ್ಕಾರ ಅನೇಕ ಬಾರಿ ಕೇಂದ್ರ ಸರ್ಕಾರಕ್ಕೆ ಮನವಿಯನ್ನು ನೀಡಿದ್ದು, ಪ್ರಧಾನಿಗಳು, ನಿರ್ಮಲಾ ಸೀತಾರಾಮನ್, ಅಮಿತ್ ಶಾ ಅವರನ್ನೂ ಭೇಟಿ ಮಾಡಲಾಗಿದೆ. ಅವರೇ ಬಜೆಟ್ ನಲ್ಲಿ ಘೋಷಣೆ ಮಾಡಿರುವುದನ್ನು ಕೊಡಿ ಎಂದರೂ ಬಿಡುಗಡೆ ಮಾಡಿಲ್ಲ” ಎಂದರು.

“ನನ್ನನ್ನೂ ಒಳಗೊಂಡಂತೆ ಉಪಮುಖ್ಯಮಂತ್ರಿಗಳು ಭೇಟಿಯಾಗಿ ಬಂದಿದ್ದೇವೆ. ನಬಾರ್ಡ್‌ನಲ್ಲಿ ರಾಜ್ಯಕ್ಕೆ ಬರಬೇಕಾದ ಸಾಲದ ಮೊತ್ತ ಕಡಿತವಾಗಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದಾಗಲೂ ಈ ವಿಷಯವನ್ನು ಪ್ರಸ್ತಾಪಿಸಲಾಯಿತು . ಆದರೆ ಇಂದಿನವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತರ ಜಮೀನು ಮುಳುಗಡೆಯಾಗದಂತೆ ತಡೆಯಲು ಪ್ರಯತ್ನ

ಹೊಸದುರ್ಗ ತಾಲ್ಲೂಕಿನ ಹಿನ್ನೀರಿನಲ್ಲಿ ರೈತರ ಜಮೀನು ಮುಳುಗಡೆಯಾಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮುಳುಗಡೆಯಾಗದ ರೀತಿಯಲ್ಲಿ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ವಾಣಿ ವಿಲಾಸ ಸಾಗರ ಅಣೆಕಟ್ಟೆಗೆ 115 ವರ್ಷಗಳ ಇತಿಹಾಸವಿದೆ. ಇಷ್ಟು ವರ್ಷಗಳಲ್ಲಿ ಈ ಅಣೆಕಟ್ಟು ಕೋಡಿ ಬಿದ್ದಿರುವುದು ಮೂರು ಬಾರಿ ಮಾತ್ರ. ಅಂದರೆ 1933, 2022 ಹಾಗೂ ಜನವರಿ 14, 2025 ರಲ್ಲಿ ಕೋಡಿ ಬಿದ್ದಿದೆ. ಕರ್ನಾಟಕದ ಮೊದಲನೇ ಜಲಾಶಯ ಇದಾಗಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ತಾಯಿ ಸಂಪಾಜಮ್ಮಣಿಯವರ ಹೆಸರಿನಲ್ಲಿ ಕಟ್ಟಿಸಿದ್ದು, ವಾಣಿ ವಿಲಾಸ ಸಾಗರ ಎಂದು ಕರೆಯಲಾಗಿದೆ. 1898 ನೇ ಇಸವಿಯಲ್ಲಿ ಪ್ರಾರಂಭವಾಗಿ 1907 ರಲ್ಲಿ ಅಣೆಕಟ್ಟು ನಿರ್ಮಾಣ ಮುಕ್ತಾಯವಾಯಿತು. 30.ಟಿ.ಎಂ.ಸಿ ನೀರು ಶೇಖರಣೆ ಮಾಡುವ ಸಾಮರ್ಥ್ಯವಿರುವ ಅಣೆಕಟ್ಟು 33 ಸಾವಿರ ಎಕರೆಗೆ ನೀರುಣಿಸುತ್ತದೆ” ಎಂದು ಸಿಎಂ ವಿವರಿಸಿದರು.

“ಈ ಜಿಲ್ಲೆಯ ಅನೇಕ ತಾಲ್ಲೂಕುಗಳು ಬರಪೀಡಿತ ಎಂದು ಆಗ ಹಳೇ ಮೈಸೂರಿನಲ್ಲಿ ರಾಜರ ಪ್ರತಿನಿಧಿಯಾಗಿದ್ದ ಸಂಪಾಜಮ್ಮಣ್ಣಿಯವರು ಈ ಕೆರೆಯನ್ನು ನಿರ್ಮಾಣ ಮಾಡಿದರು .ಈ ಭಾಗದಲ್ಲಿ ಮಳೆ ಕಡಿಮೆಯಿರುವುದರಿಂದ ಅಣೆಕಟ್ಟು ನಿರ್ಮಿಸಿದರೆ ಈ ಭಾಗದ ಜನರಿಗೆ ನೀರು ದೊರೆಯಲಿದೆ ಎಂಬ ಉದ್ದೇಶದಿಂದ ಅವರ ಒಡವೆಗಳನ್ನು ಅಡವಿಟ್ಟು ಸುಮಾರು 45 ಲಕ್ಷ ರೂ.ಗಳನ್ನು ವೆಚ್ಚ ಮಾಡಿದ್ದರು” ಎಂದು ನೆನಪಿಸಿಕೊಂಡರು.

ಸಮೃದ್ಧ ಮಳೆಗಾಗಿ ಪ್ರಾರ್ಥನೆ

“ಇಂದು ಗಂಗಾಪೂಜೆಯನ್ನು ಮಾಡಿ ಬಾಗಿನ ಅರ್ಪಿಸಿದ್ದೇವೆ. ಪ್ರತಿ ವರ್ಷವೂ ರೈತರ ಜಮೀನುಗಳಿಗೆ ನೀರು ಸಿಗುವಂತಾಗಲಿ ಒಳ್ಳೆ ಮಳೆ, ಬೆಳೆಯಾಗಿ ಪ್ರತಿ ವರ್ಷವೂ ಕೋಡಿ ಬೀಳುವಂತೆ ಕೆರೆಗೆ ನೀರು ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವಾದರೆ ಪ್ರತಿ ವರ್ಷವೂ ಅಣೆಕಟ್ಟಿಗೆ ನೀರು ಹರಿಯಲಿದೆ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ, ಸರ್ಕಾರ ಸುಭದ್ರವಾಗಿದೆ

“ಬಿಜೆಪಿಯಲ್ಲಿ ಎರಡು ಮೂರು, ನಾಲ್ಕು ಗುಂಪುಗಳಿವೆ, ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಳಿಲ್ಲ. ನಾನು ಮತ್ತು ಡಿ.ಕೆ ಶಿವಕುಮಾರ್ ಇಲ್ಲಿಯೇ ಇದ್ದೇವೆ. ನಮ್ಮಲ್ಲಿ ಗುಂಪುಗಳಿಲ್ಲ. ಬಿಜೆಪಿಯಲ್ಲಿ ಕಚ್ಚಾಟ ನಡೆದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿದೆ. ಸರ್ಕಾರ ಸುಭದ್ರವಾಗಿದ್ದು, ನಾವು ಐದು ವರ್ಷ ಅಧಿಕಾರ ನಡೆಸಿ 2028 ನಡೆವ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...