ರವಿ ಬೆಳಗೆರೆ ಪುಸ್ತಕದ ನಕಲಿ ಪ್ರತಿ: ಅಮೆಜಾನ್, ಮೀಶೋ, ಫ್ಲಿಫ್‌ಕಾರ್ಟ್‌ ವಿರುದ್ಧ ತಲಾ 1 ಕೋಟಿ ರೂ. ಕೃತಿಚೌರ್ಯ ದೂರು ದಾಖಲಿಸಲಿರುವ ಭಾವನಾ

Date:

ತಮ್ಮ ತಂದೆ ದಿವಂಗತ ಪತ್ರಕರ್ತ ರವಿ ಬೆಳಗೆರೆ ಅವರ ‘ಹೇಳಿ ಹೋಗು ಕಾರಣ’ ಪುಸ್ತಕದ ನಕಲಿ ಪ್ರತಿ ಆನ್‌ಲೈನ್ ಮಾರುಕಟ್ಟೆಯಲ್ಲಿರುವ ಬಗ್ಗೆ ಭಾವನಾ ಬೆಳಗೆರೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ನಕಲಿ ಮತ್ತು ಕಳಪೆ ಪ್ರತಿ ಮಾರಾಟ ಮಾಡುತ್ತಿರುವ ಅಮೆಜಾನ್, ಮೀಶೋ, ಫ್ಲಿಫ್‌ಕಾರ್ಟ್‌ಗೆ ತಲಾ ಒಂದು ಕೋಟಿ ರೂಪಾಯಿ ಕೃತಿಚೌರ್ಯ ದೂರು ದಾಖಲಿಸಲು ಭಾವನಾ ಬೆಳಗೆರೆ ಮುಂದಾಗಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಹೇಳಿ ಹೋಗು ಕಾರಣ’ ಕಾದಂಬರಿಯನ್ನು ಭಾವನಾ ಪ್ರಕಾಶನ ಪ್ರಕಟಿಸಿದೆ. ಈ ಮೂಲ ಪ್ರತಿಗೂ ನಕಲಿ ಪ್ರತಿಗೂ ಇರುವ ವ್ಯತ್ಯಾಸವನ್ನು ಭಾವನಾ ಬೆಳಗೆರೆಯವರು ವಿಡಿಯೋದಲ್ಲಿ ತೋರಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಚಿತ್ರದುರ್ಗ | ನನೆಗುದಿಗೆ ಬಿದ್ದಿರುವ ಪ್ರಾಥಮಿಕ ಶಾಲಾ ಕಟ್ಟಡ; ಕಾಮಗಾರಿ ಪೂರ್ಣಕ್ಕೆ ಗ್ರಾಮಸ್ಥರ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಷ್ಟು ಕಳಪೆ ಪ್ರತಿಯನ್ನು ಅವರು ಹೇಗೆ ಮಾರಾಟ ಮಾಡುತ್ತಾರೆ? ದುಡ್ಡಿಗಾಗಿ ಈ ಕಳಪೆ ಗುಣಮಟ್ಟದ ಪುಸ್ತಕ ಮಾರಿ ನನ್ನ ತಂದೆಯ ಹೆಸರು ಹಾಳು ಮಾಡಲು ನಾನು ಇಲ್ಲಿ ಕುಳಿತಿರುವುದೇ? ಜನರು ಏನು ಅಂದುಕೊಳ್ಳಲ್ಲ? ಈ ವಿಚಾರದಲ್ಲಿ ನಾನು ಕೋರ್ಟ್‌ ಮೆಟ್ಟಿಲೇರಲು ಸಿದ್ಧವಾಗಿದ್ದೇನೆ” ಎಂದು ಆಕ್ರೋಶವಾಗಿ ಮಾತನಾಡಿದ್ದಾರೆ.

“ಇದನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು, ಒಪ್ಪಲಾಗದು. ನಾನು ನ್ಯಾಯ ಸಿಗುವವರೆಗೂ ಈ ವಿಚಾರವನ್ನು ಬಿಡಲಾರೆ. ಜನರು ರವಿ ಬೆಳಗೆರೆ ನಂತರ ಭಾವನಾ ಬೆಳಗೆರೆ ಅಥವಾ ಪ್ರಕಾಶನ ಇಂತಹ ಕೆಟ್ಟ ಕೆಲಸ ಮಾಡುತ್ತಾ ಇದ್ದೀವಿ ಅಂದುಕೊಳ್ಳುವುದಲ್ಲವೇ? ಆದರೆ ನೀವು ಅಮಾಯಕರು. ನಿಮಗೆ ತಿಳಿದಿಲ್ಲ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...