ಭೋವಿ ಅಭಿವೃದ್ಧಿ ನಿಗಮ ಅಕ್ರಮ | ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವೆ: ಎಸ್.ರವಿಕುಮಾರ್

Date:

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಮುಖ್ಯಮಂತ್ರಿ ಸೂಚನೆ ಕೊಟ್ಟರೆ ಶೀಘ್ರ ಬೆಂಗಳೂರಿಗೆ ತೆರಳಿ ನನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಹೇಳಿದರು.

ಶಿವಮೊಗ್ಗದಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿ, “ಪಕ್ಷಕ್ಕೆ ಮುಜುಗರ ಆಗುವುದನ್ನು ತಡೆಯಲು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೂಡಲು ನಾನೂ ನಿರ್ಧರಿಸಿದ್ದೇನೆ” ಎಂದು ತಿಳಿಸಿದರು.

ಭೂ ಒಡೆತನ ಯೋಜನೆಯ ಫಲಾನುಭವಿಗಳಿಂದ ಶೇ. 40ರಷ್ಟು ಕಮೀಷನ್‌ ವಸೂಲಿ ಮಾಡಿದ ಆರೋಪಕ್ಕೆ ಗುರಿಯಾಗಿರುವ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್‌ ರವಿಕುಮಾರ್‌ ಅವರ ಪದತ್ಯಾಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭೋವಿ ಅಭಿವೃದ್ಧಿ ನಿಗಮದಿಂದ ಸುಮಾರು 15 ಕೋಟಿ ರೂ.ಗಳ ವೆಚ್ಚದಲ್ಲಿ ಭೂ ಒಡೆತನ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಅದರಲ್ಲಿ 60 ಎಕರೆಯನ್ನು ಖರೀದಿಸಿ, ಫಲಾನುಭವಿಗಳಿಗೆ ಹಂಚಿಕೆ ಮಾಡುವ ಇರಾದೆಯಿತ್ತು. ಈ ಯೋಜನೆಯಲ್ಲಿ ಫಲಾನುಭವಿಗಳಿಂದ ಪ್ರತಿ ಘಟಕ ವೆಚ್ಚಕ್ಕೂ ಶೇ. 40ರಷ್ಟು ಕಮೀಷನ್‌ ನಿಗದಿ ಮಾಡಿರುವುದಾಗಿ ಆರೋಪಗಳಿವೆ. ಜೊತೆಗೆ ಹಣ ಬಿಡುಗಡೆ ವೇಳೆಯಲ್ಲೂ ಹೆಚ್ಚುವರಿಯಾಗಿ ವಸೂಲಿ ಮಾಡಿರುವುದು ತಿಳಿದು ಬಂದಿದೆ.

ಈಗಾಗಲೇ ಬಿಡುಗಡೆಯಾಗಿರುವ 3 ಕೋಟಿ ರೂ. ಅನುದಾನದಲ್ಲಿ ಕಮೀಷನ್‌ ಪಡೆದು ಅದನ್ನು ನಿಗಮದ ಅಧ್ಯಕ್ಷರಿಗೆ ಮಧ್ಯವರ್ತಿಯೊಬ್ಬರು ನೀಡುವಾಗ, ನಡೆದ ಚರ್ಚೆಗಳು ರಹಸ್ಯ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸರ್ಕಾರಕ್ಕೆ ತಲೆ ನೋವು ತಂದಿಟ್ಟಿದೆ.

ವಿಡಿಯೋದಲ್ಲಿ ಸೆರೆಯಾಗಿರುವ ಮಾತುಕತೆಯಲ್ಲಿ ನಿಗಮದ ಅಧ್ಯಕ್ಷ ರವಿಕುಮಾರ್‌ ಸಚಿವರ ಕಡೆಯವರೆಗೂ ಹಣ ತಲುಪಿಸಬೇಕು ಎಂದು ಹೇಳಿರುವುದು ಸೆರೆಯಾಗಿದೆ. ಆ ಸಚಿವರು ಯಾರು ಎಂದು ಇನ್ನೂ ಬಹಿರಂಗಗೊಂಡಿಲ್ಲ. ಸರ್ಕಾರ ಮುಜುಗರದಿಂದ ತಪ್ಪಿಸಿಕೊಳ್ಳಲು ರವಿಕುಮಾರ್‌ ಅವರು ತಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.

ರವಿಕುಮಾರ್ ಸ್ಪಷ್ಟನೆ ಏನು?

“ನಾನು ಯಾರ ಬಳಿಯೂ ಹಣ ಪಡೆದಿಲ್ಲ. ಯಾರಿಗೂ ಕೊಟ್ಟಿಲ್ಲ. ಕಮಿಷನ್ ವಿಚಾರವನ್ನು ಮಾತನಾಡಿಲ್ಲ. ಕೃತಕ ಬುದ್ಧಿಮತ್ತೆ (ಎಐ) ತಾಂತ್ರಿಕತೆ ಬಳಸಿ ವಿಡಿಯೊದಲ್ಲಿನ ಸಂಭಾಷಣೆ ತಿರುಚಲಾಗಿದೆ. ಎಫ್‌ಎಸ್ ಎಲ್ ಪರೀಕ್ಷೆಗೆ ಕಳುಹಿಸಿದರೆ ವಾಸ್ತವ ಸಂಗತಿ ಗೊತ್ತಾಗಲಿದೆ. ನಿಗಮದ ಕಚೇರಿಯಲ್ಲಿಯೇ ಆ ರೀತಿ ವಿಡಿಯೊ ಚಿತ್ರೀಕರಿಸಿ ತಿರುಚಲಾಗಿದೆ. ಅದರಲ್ಲಿ ನಿಗಮದ ಅಧಿಕಾರಿಗಳ ಪಾತ್ರವೂ ಇರಬಹುದು. ರಾಜಕೀಯ ವಿರೋಧಿಗಳ ಜೊತೆ ಕೈ ಜೋಡಿಸಿ ಈ ರೀತಿ ಷಡ್ಯಂತ್ರ ಹೆಣೆಯಲಾಗಿದೆ. ಈ ಬಗ್ಗೆ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಟ್ಟು ಇಡೀ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಲಿದ್ದೇನೆ” ಎಂದಿದ್ದಾರೆ.

“ಭೋವಿ ಅಭಿವೃದ್ಧಿ ನಿಗಮದಲ್ಲಿ ಈ ಹಿಂದೆ ದೊಡ್ಡ ಹಗರಣ ನಡೆದಿರುವುದರಿಂದ ನಾನು ಅದನ್ನು ಮುಳ್ಳಿನ ಕುರ್ಚಿ ಎಂದೇ ಭಾವಿಸಿದ್ದೆ. ಬಹಳಷ್ಟು ಎಚ್ಚರಿಕೆಯಿಂದ ಕೆಲಸ ಮಾಡಿದ್ದೇನೆ. ನಿಗಮದಲ್ಲಿ ಭ್ರಷ್ಟಾಚಾರ ತಡೆಯಲು ಬಿಗಿ ಕ್ರಮ ಕೈಗೊಂಡಿದ್ದೆನು. ಅದನ್ನು ಸಹಿಸಲಾರದೇ ತಂತ್ರಜ್ಞಾನ ಬಳಸಿಕೊಂಡು ಈ ರೀತಿಯ ತಿರುಚಿದ ವಿಡಿಯೊ ಮಾಡಲಾಗಿದೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಯಾರಿಗೂ ಕಮಿಷನ್ ಕೊಟ್ಟಿಲ್ಲ. ಎಲ್ಲವೂ ಷಡ್ಯಂತ್ರ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...