ಬಿಡದಿ ಟೌನ್ ಶಿಪ್‌ ಯೋಜನೆ | ನಾನು ಬಂದ ಮೇಲೆ ಯಾಕೆ ರೈತರ ಹೋರಾಟ: ಡಿ ಕೆ ಶಿವಕುಮಾರ್ ಪ್ರಶ್ನೆ

Date:

9 ಸಾವಿರ ಎಕರೆ ಪೈಕಿ 1 ಸಾವಿರಕ್ಕೂ ಹೆಚ್ಚು ಜಮೀನು ಈಗಾಗಲೇ ಕೆಐಎಡಿಬಿಗೆ ನೀಡಲಾಗಿದೆ. ಅದಕ್ಕೆ ರೈತರು ಪರಿಹಾರ ಸಹ ಪಡೆದಿದ್ದಾರೆ. ಆಗ ಹೋರಾಟ ಮಾಡದೆ ಈಗ ಯಾಕೆ? ಇದರಲ್ಲೂ 75% ಜನ ತಮಗೆ ಏನು ಪರಿಹಾರ ಬೇಕು ಎಂದು ಕೇಳಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬಿಡದಿ ಟೌನ್ ಶಿಪ್‌ಗೆ ಕೆಲವು ಪಂಚಾಯ್ತಿ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸುದ್ದಿಗಾಗರು ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ಈ ಯೋಜನೆ ನಾನು ಮಾಡಿದ್ದಲ್ಲ. ಕುಮಾರಸ್ವಾಮಿ ಅವರು ಮಾಡಿರುವುದು. ಅದನ್ನು ನಾನು ಡಿನೋಟಿಫಿಕೇಷನ್ ಮಾಡಲು ಬರಲ್ಲ. ರೈತರಿಗೆ ನ್ಯಾಯ ಒದಗಿಸಿಕೊಡುವ ಕೆಲಸವನ್ನು ನಾನು ಮಾಡುತ್ತೇವೆ. ಅವತ್ತಿನಿಂದ ಹೋರಾಟ ಮಾಡದೇ, ನಾನು ಬಂದಾಗ ಮಾತ್ರ ಯಾಕೆ ಹೋರಾಟ ಮಾಡಬೇಕು” ಎಂದು ಪ್ರಶ್ನಿಸಿದರು.

ರೈತರನ್ನು ಕರೆದು ಚರ್ಚೆ ಮಾಡುತ್ತಿಲ್ಲ ಎಂದು ಕೇಳಿದಾಗ, “ರೈತರ ಜೊತೆ ಚರ್ಚೆ ಮಾಡುತ್ತೇನೆ. ಅವರನ್ನು ಕರೆಯುವುದಿಲ್ಲ. ನಾನೇ ಅವರ ಬಳಿ ಹೋಗಿ ಚರ್ಚೆ ಮಾಡುವೆ. ಅವರಿಗೆ ಮನವರಿಕೆ ಮಾಡಿಕೊಡುತ್ತೇನೆ. ಅವರು ಕೂಡ ನಮ್ಮ ರೈತರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇ.ಡಿ ಸಂಸ್ಥೆಯನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನ ಪ್ರಕರಣವೇ ಸಾಕ್ಷಿ. ನನ್ನ ಮೇಲೆ ಕೇಸ್ ಹಾಕಿ ತಿಹಾರ್ ಜೈಲಿಗೆ ಕಳುಹಿಸಿದರು. ನಂತರ ಆ ಕೇಸ್ ರದ್ದಾಯಿತು. ರಾಜಕೀಯ ಒತ್ತಡಕ್ಕೆ ಸಿಲುಕುವ ಬಗ್ಗೆ ಇ.ಡಿ ಪರಿಶೀಲನೆ ನಡೆಸಬೇಕು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ಬಳಿಕ ಮೇಲ್ಮನವಿ ಸಲ್ಲಿಸುವ ಪ್ರಶ್ನೆ ಇರಲಿಲ್ಲ. ಹೀಗಾಗಿ ಸುಪ್ರೀಂ ಕೋರ್ಟ್ ಮುಡಾ ವಿಚಾರದಲ್ಲಿ ಈ ರೀತಿ ಹೇಳಿರಬೇಕು” ಎಂದರು.

ಕೇಂದ್ರ ಸರ್ಕಾರ ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೇ ಎಂದು ಕೇಳಿದಾಗ, “ಈ ಕಾರಣಕ್ಕೆ ಈ ರೀತಿ ಮೇಲ್ಮನವಿ ಸಲ್ಲಿಸಲಾಗುತ್ತಿದೆ. ಬಿಜೆಪಿ ನಾಯಕರ ಮೇಲೆ ಮಾತ್ರ ಇ.ಡಿ ಕೇಸ್ ದಾಖಲಾಗುತ್ತಿಲ್ಲ ಯಾಕೆ? ಕೇವಲ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ರಾಬರ್ಟ್ ವಾದ್ರಾ, ಕಾಂಗ್ರೆಸ್ ನಾಯಕರ ಮೇಲೆ ಮಾತ್ರ ಯಾಕೆ ಕೇಸ್ ಹಾಕಲಾಗುತ್ತಿದೆ. ಬಿಜೆಪಿಗೆ ಹೋದವರೆಲ್ಲಾ ಶುದ್ಧರೇ? ಇದೇ ಅಲ್ಲವೇ ಬಿಜೆಪಿ ವಾಷಿಂಗ್ ಮಷಿನ್” ಎಂದು ಹರಿಹಾಯ್ದರು.

ಟನಲ್ ಕಾರಿಡಾರ್ ಅಗತ್ಯವಿದೆಯೇ ಎಂಬ ತೇಜಸ್ವಿ ಸೂರ್ಯ ಹೇಳಿಕೆ ಬಗ್ಗೆ ಕೇಳಿದಾಗ, “ಪಾಪ ಸಣ್ಣ ಹುಡುಗ, ಅವರ ಪಕ್ಷದಲ್ಲಿ ದೊಡ್ಡ ದೊಡ್ಡ ನಾಯಕರಿದ್ದಾರಲ್ಲಾ ಅವರ ಮೂಲಕ ಸದನದಲ್ಲಿ ಚರ್ಚೆ ಮಾಡಿಸಲಿ” ಎಂದು ತಿರುಗೇಟು ನೀಡಿದರು.

ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ನಮ್ಮ ಕ್ಷೇತ್ರದಲ್ಲಿ ಹೆಚ್ಚಿನ ಸಮಸ್ಯೆ ಏನು ಇಲ್ಲ. ನಮ್ಮ ಕಾರ್ಯಕರ್ತರು, ಸ್ಥಳೀಯ ನಾಯಕರು ಇಲ್ಲಿ ಜನರ ಸಂಪರ್ಕ ಸಾಧಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಇಂದು ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಪರಿಹಾರ ನೀಡುತ್ತೇವೆ. ಕೆಲವು ಅರ್ಜಿಗಳು ಪಿಂಚಣಿ, ಇ-ಖಾತಾ, ಜಿಎಸ್ ಟಿ ವಿಚಾರವಾಗಿ ಬಂದಿವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...