BIG BREAKING: ಧರ್ಮಸ್ಥಳ ಕೇಸ್‌ನಲ್ಲಿ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರು; ಮಹತ್ವದ ತಿರುವು

Date:

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಅನ್ವಯ ಆಗುತ್ತಿರುವ ತನಿಖೆಯ ಬೆನ್ನಲ್ಲೇ ಮತ್ತೊಬ್ಬ ದೂರುದಾರ ಎಸ್‌ಐಟಿ ಮುಂದೆ ಹಾಜರಾಗಿದ್ದಾರೆ. ದೂರು ದಾಖಲಿಸಲು ಮತ್ತು ಮಹತ್ವದ ಸಾಕ್ಷ್ಯಗಳನ್ನು ಸಲ್ಲಿಸಲು ಹೊಸ ಸಾಕ್ಷಿಯೊಬ್ಬರು ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಚೇರಿಗೆ ಬಂದಿದ್ದಾರೆ. ಸಂಜೆ ಏಳು ಗಂಟೆಗೆ ಅವರು ಬರುವುದು ನಿಶ್ಚಿತವಾಗಿತ್ತು.

ಸರಿಸುಮಾರು 20 ವರ್ಷಗಳ ಹಿಂದೆ ನಡೆದ ಘಟನೆಗೆ ಸಂಬಂಧಿಸಿದ ಈ ಹೊಸ ಸಾಕ್ಷ್ಯವು ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ತಿರುವು ನೀಡಬಹುದು.

ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಾಕ್ಷಿದಾರ, “ನನ್ನ ಹೆಸರು ಜಯಂತ್ ಟಿ. ನಾನು ಇಂದು ದೂರು ಕೊಡಲು ಬಂದಿದ್ದೇನೆ. ಹಲವು ವರ್ಷಗಳ ಹಿಂದೆ ಈ ಧರ್ಮಸ್ಥಳ ಗ್ರಾಮದಲ್ಲಿ ಹಲವು ಕೊಲೆಗಳಾಗಿವೆ ಎಂದು ಹೇಳುತ್ತಿದ್ದೆ. ಹಲವು ವೇದಿಕೆಗಳಲ್ಲೂ ಇದನ್ನೇ ಹೇಳಿದ್ದೇನೆ. ಈ ವಿಷಯಗಳನ್ನು ಎಲ್ಲವನ್ನೂ ಪ್ರಸ್ತಾಪಿಸಿದ್ದೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲೇ ಉತ್ತಮವಾದ ಎಸ್‌ಐಟಿ ರಚನೆಯಾಗಿದೆ. ಇದು ಒಳ್ಳೆಯ ಬೆಳವಣಿಗೆ. ಅದಕ್ಕಾಗಿ ದೂರು ನೀಡಲು ಬಂದಿದ್ದೇನೆ. ಆದರೆ ಸೋಮವಾರ ಬರಲು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ನಾಳೆ ರಜೆ ಇದೆ. ಸೋಮವಾರ ಎಲ್ಲ ಮಾಹಿತಿಯನ್ನು ಅವರಿಗೆ ನೀಡುತ್ತೇನೆ. ಮುಂದಿನ ತನಿಖೆ ಏನಾಗುತ್ತದೆ ಎಂದು ನೋಡೋಣ. ಕೊಲೆಗಳನ್ನು ಯಾರೋ ಮಧ್ಯದ ವ್ಯಕ್ತಿ ನಿಂತು ಮುಚ್ಚಿ ಹಾಕಿದ್ದಾನೆ. ಧರ್ಮಸ್ಥಳದಲ್ಲಿ ಕೊಲೆಗಳು ಎಲ್ಲರಿಗೂ ಗೊತ್ತಿರುವ ವಿಚಾರ. ಭಯದಿಂದ ಯಾರೂ ಹೇಳುತ್ತಿರಲಿಲ್ಲ. ಇಂದು ರಾಜ್ಯ ಸರ್ಕಾರದ ಎಸ್‌ಐಟಿ ತಂಡ ಆ ಭಯವನ್ನೂ ದೂರ ಮಾಡಿದೆ. ಅದನ್ನು ನೋಡಿ ನಾನು ಮುಂದೆ ಬಂದಿದ್ದೇನೆ. ಇನ್ನೂ ಐದಾರು ಜನ ಸಾಕ್ಷಿಗಳು ಬರುವುದಾಗಿ ಹೇಳುತ್ತಿದ್ದಾರೆ. ತಮ್ಮ ನೋವುಗಳನ್ನು ಹಂಚಿಕೊಳ್ಳಲು ಸಿದ್ಧವಿದ್ದಾರೆ” ಎಂದು ವಿವರಿಸಿದರು.

“ನಾವು ಮೃತದೇಹಗಳನ್ನು ನೋಡಿದ್ದೇನೆ. ಯಾವುದೇ ಡೆಡ್‌ ಬಾಡಿ ಸಿಕ್ಕರೆ, ಅದನ್ನು ಆಸ್ಪತ್ರೆಗೆ ಸಾಗಿಸಬೇಕು, ಮರಣೋತ್ತರ ಪರೀಕ್ಷೆ ನಡೆಸಬೇಕು. ನಂತರ ಹೂತುಹಾಕಬೇಕು. ಆದರೆ ಯಾವುದೇ ಕಾರಣಕ್ಕೂ ಎಫ್‌ಐಆರ್ ಆಗಿಲ್ಲ. ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿಲ್ಲ. ಒಂದು ವಾರ ಕಾಲ ಹಾಗೆಯೇ ಬಿದ್ದಿದ್ದ ಬಾಲಕಿಯ ಮೃತದೇಹವನ್ನು ಪೊಲೀಸರಿಗೆ ತಿಳಿಸದೆ ಹೂತು ಹಾಕಿದ್ದನ್ನು ಕಣ್ಣಾರೆ ಕಂಡಿದ್ದೇನೆ. ನಾವು ಅಂದು ಬಾಯಿಬಿಡಲು ಆಗುತ್ತಿರಲಿಲ್ಲ. ಇಂದು ಇಷ್ಟೆಲ್ಲ ಇದ್ದರೂ ಹೇಳಲು ಆಗುತ್ತಿಲ್ಲ. ಇದನ್ನೆಲ್ಲ ಅಂದು ಕೂಡ ಹೇಳಲು ಆಗುತ್ತಿರಲಿಲ್ಲ” ಎಂದಿದ್ದಾರೆ.

‘ಅಂದು ಯಾಕೆ ಇದನ್ನೆಲ್ಲ ಪ್ರಶ್ನಿಸಲಿಲ್ಲ’ ಎಂದು ಮಾಧ್ಯಮಗಳು ಪದೇಪದೇ ಕೇಳಿದಾಗ, “ನನ್ನ ಕುಟುಂಬದ ಹೆಣ್ಣುಮಗಳ ಹೆಸರು ಪದ್ಮಲತಾ. ಆಕೆಗೆ ಏನಾಯಿತು? ಆ ಪ್ರಕರಣ ಏನಾಯಿತು? ಎಂಬುದನ್ನೆಲ್ಲ ಎಸ್‌ಐಟಿಗೆ ತಿಳಿಸುವವರೂ ಇದ್ದಾರೆ” ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...