ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಮನವಿ ತಿರಸ್ಕರಿಸುವಂತೆ ಒತ್ತಾಯ

Date:

ಬಿಲ್ಕಿಸ್ ಬಾನೊ ಮೇಲೆ ಅತ್ಯಾಚಾರ ಎಸಗಿ, ಅವರ ಕುಟುಂಬದ ಸದಸ್ಯರನ್ನು ಕೊಲೆ ಮಾಡಿದ ಅಪರಾಧಿಗಳನ್ನು ಮತ್ತೆ ಜೈಲಿಗೆ ಕಳುಹಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಭರವಸೆ ಹುಟ್ಟಿಸಿದೆ. ಮತ್ತೊಂದೆಡೆ ಅಪರಾಧಿಗಳು ಮತ್ತಷ್ಟು ಕಾಲವಕಾಶವನ್ನು ಕೋರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕೋರ್ಟ್ ಅವರ ಮನವಿಯನ್ನು ಒಪ್ಪಿಕೊಳ್ಳಬಾರದು ಎಂದು ಹೋರಾಟಗಾರರು ಒತ್ತಾಯಿಸಿದರು.

ಬಿಲ್ಕಿಸ್ ಬಾನೊ ಅವರಿಗೆ ಬೆಂಬಲ ಸೂಚಿಸಿ ‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆಯ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಅತ್ಯಾಚಾರಿಗಳ ವಿರುದ್ಧ ಘೋಷಣೆಗಳು ಮೊಳಗಿದವು.

‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆಯ ಸಂಘಟಕಿ ಮಮತಾ ಅವರು ಮಾತನಾಡಿ, “ಸನ್ನಡತೆಯ ಆಧಾರದಲ್ಲಿ ಗುಜರಾತ್ ಸರ್ಕಾರ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿತ್ತು. ಈ ನಾಚಿಗೆಗೇಡು ನಡೆಯ ವಿರುದ್ಧ ಆ ಸಂದರ್ಭದಲ್ಲೂ ನಾವು ಪ್ರತಿಭಟನೆ ಮಾಡಿದ್ದವು. ಇದರ ವಿರುದ್ಧ 40 ಸಾವಿರ ಜನರ ಸಹಿ ಸಂಗ್ರಹ ಮಾಡಿ ಸುಪ್ರೀಂಕೋರ್ಟ್‌ಗೆ ಕಳುಹಿಸಿದ್ದೆವು. ಕರ್ನಾಟಕದಿಂದ ಹೋದಂತಹ ಜಸ್ಟಿಸ್ ನಾಗರತ್ನ ಅವರಿದ್ದ ಪೀಠ ಗುಜರಾತ್ ಸರ್ಕಾರದ ತೀರ್ಪನ್ನು ರದ್ದುಗೊಳಿಸಿರುವುದು ಸಮಾಧಾನ ತಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
mamata
‘ನಾವೆದ್ದು ನಿಲ್ಲದಿದ್ದರೆ’ ಸಂಘಟನೆಯ ಸಂಘಟಕಿ ಮಮತಾ

“ಅತ್ಯಾಚಾರಿಗಳ ಮನವಿಯನ್ನು ಸುಪ್ರೀಂಕೋರ್ಟ್‌ ಸ್ವೀಕರಿಸಬಾರದು. ಇಪ್ಪತ್ತೆರಡು ವರ್ಷ ದಿಟ್ಟ ಹೋರಾಟವನ್ನು ಬಿಲ್ಕಿಸ್ ಬಾನೊ ನಡೆಸಿದ್ದಾರೆ. ಅವರಿಗೆ ಯಾವುದೇ ಮನ್ನಣೆಯನ್ನು ಕೊಡದೆ  ಅವರನ್ನು ಕೂಡಲೇ ಜೈಲಿಗೆ ಕಳುಹಿಸಬೇಕು ಎಂಬುದು ನಮ್ಮೆಲ್ಲರ ಒಕ್ಕೊರಲ ದನಿ” ಎಂದರು.

ಡಾ.ಬಿ.ಆರ್‌.ಅಂಬೇಡ್ಕರ್‌ ದಂಡು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಸಂತೋಷ್ ಬಿ.ನಾಯಕ್ ಮಾತನಾಡಿ, “ಅತ್ಯಾಚಾರಿಗಳು ಬಿಡುಗಡೆಯಾದ ಸಂದರ್ಭದಲ್ಲಿ ಕೆಲವರು ಸಂಭ್ರಮಾಚರಣೆ ಮಾಡಿದ್ದು ನೋವಿನ ಸಂಗತಿ. ಅತ್ಯಾಚಾರಿಗೆ ಹೂವಿನ ಹಾರ ಹಾಕಿ, ಸ್ವೀಟ್ ಕೊಟ್ಟಿದ್ದು ನಮ್ಮ ಜನ ಎಷ್ಟು ಕೆಟ್ಟಿದ್ದಾರೆ ಎಂಬುದರ ಸೂಚನೆ. ತಮ್ಮ ಮನೆಯ ಮಕ್ಕಳಿಗೆ ಈ ರೀತಿ ಆಗಿದ್ದರೆ ಸ್ವೀಟ್ ಕೊಟ್ಟು ತಿನ್ನಿಸುತ್ತಿದ್ರಾ?” ಎಂದು ಪ್ರಶ್ನಿಸಿದರು.

santhosh 2
ಡಾ.ಬಿ.ಆರ್‌.ಅಂಬೇಡ್ಕರ್‌ ದಂಡು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಸಂತೋಷ್ ಬಿ.ನಾಯಕ್

ಅತ್ಯಾಚಾರಿಗಳನ್ನು ಸಂಸ್ಕಾರಿ ಬ್ರಾಹ್ಮಣರು ಎಂದು ಕೆಲವು ರಾಜಕೀಯ ಮುಖಂಡರು ಕರೆದಿದ್ದರು. ಬ್ರಾಹ್ಮಣರು ಕೂಡ ಅತ್ಯಾಚಾರ ಮಾಡಿದ್ದಾರೆ ಎಂಬುದನ್ನು ಇತಿಹಾಸ ಹೇಳುತ್ತದೆ. ಕೆಲವರು ಮಾಡಿದ ತಪ್ಪಿಗೆ ಇಡೀ ಬ್ರಾಹ್ಮಣ ಸಮುದಾಯವನ್ನು ಟೀಕಿಸುವುದು ತಪ್ಪಾಗುತ್ತದೆ. ಇಂತಹ ಅತ್ಯಾಚಾರಿಗಳ ಪರ ಯಾವುದೇ ಬ್ರಾಹ್ಮಣರು ನಿಲ್ಲಬಾರದು. ಒಬ್ಬ ಅತ್ಯಾಚಾರಿಯ ಪರ ನಿಲ್ಲುವುದೆಂದರೆ ತಾನು ಕೂಡ ಅತ್ಯಾಚಾರಿ ಎಂದು ಒಪ್ಪಿಕೊಂಡಂತೆ, ಒಬ್ಬ ಕೊಲೆಗಡುಕನ ಪರ ನಿಲ್ಲುವುದೆಂದರೆ ತಾನು ಕೂಡ ಕೊಲೆಗಡುಕ ಎಂದು ಒಪ್ಪಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.

ಹೋರಾಟಗಾರ್ತಿ ಮನು ಮಾತನಾಡಿ, “ಮಹಿಳೆಯರು ಮತ್ತು ತುಳಿತಕ್ಕೆ ಒಳಗಾದ ಸಮುದಾಯದವರು ಬಿಜೆಪಿ ಸರ್ಕಾರದ ಆಡಳಿತದಲ್ಲಿ ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ನ್ಯಾಯ ಕೇಳಿದರೆ ನಮ್ಮನ್ನು ಜೈಲಿಗೆ ತಳ್ಳುತ್ತಾರೆ. ಧರ್ಮದ ಹೆಸರಲ್ಲಿ ಹಿಂಸೆಯತ್ತ ಕರೆದೊಯ್ಯಲಾಗುತ್ತಿದೆ” ಎಂದು ವಿಷಾದಿಸಿದರು.

manu
ಹೋರಾಟಗಾರ್ತಿ ಮನು

ಸಾಮಾಜಿಕ ಕಾರ್ಯಕರ್ತ ಆದರ್ಶ್ ಅಯ್ಯರ್‌, ಅಂಬೇಡ್ಕರ್ ದಂಡು ಸಂಘಟನೆಯ ಅಧ್ಯಕ್ಷ ಡಿ.ಶಿವಣ್ಣ, ಜನಶಕ್ತಿ ಸಂಘಟನೆಯ ಚನ್ನಮ್ಮ ಸೇರಿದಂತೆ ಹಲವು ಹೋರಾಟಗಾರರು ಸ್ಥಳದಲ್ಲಿ ಹಾಜರಿದ್ದರು.

೧೧೧೧
ಬಿಲ್ಕಿಸ್ ಬಾನೊ ಅವರನ್ನು ಬೆಂಬಲಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಸಭೆ ನಡೆಯಿತು
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...