ವಿಧಾನಸೌಧ ವ್ಯಾಪಾರಸೌಧ ಮಾಡಿದ್ದೇ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

Date:

  • ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮೊದಲೇ ಅಕ್ರಮ ತಡೆದಿದ್ದೇವೆ
  • ಪರಮೇಶ್ವರ್ ಮನೆಯ ಔತ‍ಣಕೂಟಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ

ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದು ಬಿಜೆಪಿಯವರು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ” ಬಿಜೆಪಿಯವರು ಪ್ರವಚನ ಮಾಡುವುದನ್ನು ನಿಲ್ಲಿಸಲಿ. ಪರೀಕ್ಷಾ ಅಕ್ರಮಗಳನ್ನು ನಾವು ಸಮರ್ಥವಾಗಿ ತಡೆದಿದ್ದೇವೆ” ಎಂದರು.

“ಬಿಜೆಪಿಯವರ ಬಲಗೈ ಬಂಟರೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಿಎಸ್ಐ ಅಕ್ರಮ ನಡೆದಾಗ ಬಿಜೆಪಿಯವರ ಅಧಿಕಾರ ಇತ್ತು. ಆಗ ಯಾಕೆ ಯಾವುದನ್ನೂ ಪತ್ತೆ ಹಚ್ಚಲಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರೀಕ್ಷಾ ಅಕ್ರಮ ಆಗದಂತೆ ತಡೆ

“ಯಾದಗಿರಿ ಹಾಗೂ ಕಲಬುರಗಿಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ನಡೆಸುವ ಪ್ರಯತ್ನ ನಡೆದಿದೆ. ಪರೀಕ್ಷೆ ಅಕ್ರಮ ಆಗದಂತೆ ಕ್ರಮ ತೆಗೆದುಕೊಂಡಿದ್ದೇವೆ‌. ಪರೀಕ್ಷೆ ಕೇಂದ್ರದಲ್ಲಿ ಅಕ್ರಮ ಆಗಿಲ್ಲ. ಪರೀಕ್ಷಾ ಕೇಂದ್ರದ ಪ್ರವೇಶಕ್ಕೂ ಮೊದಲೇ ಅಕ್ರಮ ತಡೆದು ವಶಕ್ಕೆ ಪಡೆದಿದ್ದೇವೆ‌. ಈಗಾಗಲೇ 9 ಜನ ಅರೆಸ್ಟ್ ಮಾಡಿದ್ದೇವೆ” ಎಂದು ಪರೀಕ್ಷಾ ಅಕ್ರಮದ ಬಗ್ಗೆ ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಗೃಹ ಸಚಿವ ಡಾ. ಜಿ ಪರಮೇಶ್ವರ್ ಮನೆಯ ಔತಣಕೂಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, “ದಲಿತ ಸಿಎಂ ಹುದ್ದೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ, ಬದಲಾಗಿ ರಾಗಿ ಮುದ್ದೆ ಬಗ್ಗೆ ಚರ್ಚೆ ನಡೆದಿದೆ” ಎಂದರು.

“ಪರಮೇಶ್ವರ್ ಸಾಹೇಬರ ಮನೆಯಲ್ಲಿ ನಡೆದ ಚರ್ಚೆ ಬಗ್ಗೆ ಮಾಧ್ಯಮದವರಿಗೆ ಹೆಚ್ಚಿನ ಮಾಹಿತಿ ಇದ್ದಂತಿದೆ. ಆದರೆ ಆವತ್ತು ಚರ್ಚೆ ನಡೆದಿದ್ದು ಹುದ್ದೆ ಬಗ್ಗೆ ಅಲ್ಲ ಬರೀ ಮುದ್ದೆ ಬಗ್ಗೆ. ಪ್ರೀತಿಯಿಂದ ಅವರು ಊಟಕ್ಕೆ ಕರೆದಿದ್ದರು ಅಷ್ಟೇ. ಇದರ ಬಗ್ಗೆ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ” ಎಂದು ಹೇಳಿದರು.

ಊಟದ ಬಗ್ಗೆ ಏನೇನೋ ವ್ಯಾಖ್ಯಾನಗಳು ಆಗುತ್ತಿವೆ. ಆ ವ್ಯಾಖ್ಯಾನಗಳನ್ನು ಪರಮೇಶ್ವರ್ ಆಗಲಿ, ಸಿಎಂ ಆಗಲಿ, ಸತೀಶ್ ಜಾರಕಿಹೊಳಿ ಅವರಾಗಲಿ ಕೊಟ್ಟಿಲ್ಲ. ಇನ್ನೊಂದು ದಿನ ಡಿಕೆಶಿ ಸಾಹೇಬ್ರೀಗೂ ಕರೀತಾರೆ. ಮೊನ್ನೆಯ ಔತಣಕೂಟಕ್ಕೆ ಡಿಸಿಎಂ ಸಾಹೇಬ್ರು ಬರದಿದ್ದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ” ಎಂದರು.

ದಲಿತ ಸಿಎಂ ಹೈಕಮಾಂಡ್‌ಗೆ ಬಿಟ್ಟಿದ್ದು

ದಲಿತ ಸಿಎಂ ವಿಚಾರವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ಆ ಪ್ರಶ್ನೆಯೇ ಇಲ್ವಲ್ಲ. ಈಗ ಯಾರ್‍ಯಾರಿಗೆ ಯಾವ ಯಾವ ಹುದ್ದೆ ಕೊಟ್ಟಿದ್ದಾರೋ ಅದನ್ನು ಎಲ್ಲರೂ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...