ಆ.17ರಂದು ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ಭೇಟಿ, ಎಸ್‍ಐಟಿ ತನಿಖೆ ಶೀಘ್ರ ಮುಗಿಯಲಿ: ಬಿ ವೈ ವಿಜಯೇಂದ್ರ

Date:

ಆ.17ರಂದು ಬಿಜೆಪಿ ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಭೇಟಿ ಕೊಡಲಿದ್ದೇವೆ. ಮಂಜುನಾಥೇಶ್ವರನ ದರ್ಶನ ಪಡೆದು ಬರಲಿದ್ದೇವೆ ಎಂದು ತಿಳಿಸಿದರು. ನಾವು ಬಿಜೆಪಿ ಕಾರ್ಯಕರ್ತರು ಎಂಬುದಕ್ಕಿಂತ ಹೆಚ್ಚಾಗಿ ಧರ್ಮಸ್ಥಳ ಮಂಜುನಾಥೇಶ್ವರನ ಭಕ್ತರಾಗಿ ಅಲ್ಲಿಗೆ ತೆರಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

‘ಹರ್ ಘರ್ ತಿರಂಗ’ ಅಭಿಯಾನದ ಪ್ರಯುಕ್ತ ಗುಟ್ಟಹಳ್ಳಿಯ ಮಾರುತಿ ಬಡಾವಣೆಯಲ್ಲಿರುವ ಪಕ್ಷದ ಕಾರ್ಯಕರ್ತ ಲಕ್ಕಸ್ವಾಮಿ ಅವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಅವರು ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಬಿಜೆಪಿ ನಿಲುವು ಸ್ಪಷ್ಟವಿದೆ. ಎಸ್‍ಐಟಿ ತನಿಖೆ ಶೀಘ್ರದಲ್ಲಿ ಮುಗಿಯಬೇಕು. ಇದನ್ನು ಹೀಗೇ ಎಳೆದುಕೊಂಡು ಹೋಗಲು ಸಾಧ್ಯವಿಲ್ಲ. ಸತ್ಯಾಸತ್ಯತೆ ಬಹಿರಂಗ ಆಗಬೇಕು. ಗೊಂದಲಗಳಿಗೆ ಅತಿ ಶೀಘ್ರವೇ ತೆರೆ ಬೀಳಬೇಕಿದೆ. ಈ ತನಿಖೆಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು, ಎಸ್.ಡಿ.ಪಿ.ಐ, ಬೇರೆ ಬೇರೆ ಕುತಂತ್ರಗಳು ನಡೆಯುತ್ತಿವೆ ಎಂಬ ಚರ್ಚೆಗಳು ಜನಸಾಮಾನ್ಯರಲ್ಲಿ ನಡೆಯುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಪೇಕ್ಷೆಯಂತೆ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರ ಮನೆಯ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕು. ರಾಜ್ಯದಲ್ಲೂ ಅಭಿಯಾನ ನಡೆಸುತ್ತಿದೆ” ಎಂದು ತಿಳಿಸಿದರು.

“ಎಲ್ಲ ಜಿಲ್ಲೆ, ಎಲ್ಲ ವಿಧಾನಸಭಾ ಕ್ಷೇತ್ರ, ಪ್ರತಿ ಗ್ರಾಮದಲ್ಲೂ ಕಾರ್ಯಕರ್ತರ ಮನೆಗೆ ಭೇಟಿ ಕೊಟ್ಟು, ಎಲ್ಲರ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ. ಹರ್ ಘರ್ ತಿರಂಗ ಅಭಿಯಾನ ನಡೆಯುತ್ತಿದೆ” ಎಂದು ವಿವರಿಸಿದರು.

ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಅಶ್ವತ್ಥನಾರಾಯಣ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಅಧ್ಯಕ್ಷ ರಘು ಕೌಟಿಲ್ಯ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಮಲ್ಲೇಶ್ವರ ಮಂಡಲ ಅಧ್ಯಕ್ಷ ಕೆ.ಎಸ್. ಕೇಶವ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...