ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಸೋಮವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಕಾರಣ ರವಿವಾರ ಮೂರು ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಹನ್ನೊಂದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು , ಅದರಲ್ಲಿ ಮೂರರಲ್ಲಿ ಗೆಲ್ಲುವ ಅವಕಾಶ ಬಿಜೆಪಿಗಿದೆ. ಹೀಗಾಗಿ ಮೂರು ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ.
ಮಾಜಿ ಸಚಿವ ಸಿ ಟಿ ರವಿ, ಪರಿಷತ್ ಸದಸ್ಯರಾಗಿದ್ದ ಎನ್ ರವಿಕುಮಾರ್ ಮತ್ತು ಬಸವಕಲ್ಯಾಣದ ಮಾಜಿ ಶಾಸಕ ಎಂ ಜಿ ಮೂಳೆ ಅವರಿಗೆ ಟಿಕೆಟ್ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರ ಸ್ಥಾನಗಳಿಂದ ಮಹಿಳೆಯರನ್ನು ಹೊರಗಿಟ್ಟು ಸಮಾನತೆ ಬಗ್ಗೆ ಮಾತನಾಡುವುದಕ್ಕೆ ಅರ್ಥವಿದೆಯೇ?
ಕಲ್ಯಾಣ ಕರ್ನಾಟಕ ಭಾಗದಿಂದ ಮಾಜಿ ಶಾಸಕ, ಮರಾಠಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮೂಳೆ ಅವರಿಗೆಗೆ ಮಣೆ ಹಾಕಲಾಗಿದೆ.
ವಿಧಾನ ಪರಿಷತ್ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದೆ ಸುಮಲತಾ ಮತ್ತಿತರರಿಗೆ ನಿರಾಶೆಯಾಗಿದೆ.
ನಾಮಪತ್ರ ಸಲ್ಲಿಕೆಗೆ ಸೋಮವಾರ ಅಂತಿಮ ದಿನವಾಗಿದ್ದು, ಮಂಗಳವಾರ ನಾಮಪತ್ರ ಪರಿಶೀಲನೆ ನಡೆಯಲಿದೆ. ಗುರುವಾರ ನಾಮಪತ್ರ ಹಿಂಪಡೆಯಲು ಅಂತಿಮ ದಿನವಾಗಿದೆ. ಜೂನ್ 13ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ.





